ಕೇರಳ ಮೂಲದ ಟಿಪ್ಪರ್ ಚಾಲಕರ ಅತಿರೇಕದ ಗೂಂಡಾ ವರ್ತನೆಗೆ ಸಂಬಂಧ ಪಟ್ಟ ಇಲಾಖೆಯಿಂದ ಕಡಿವಾಣ ಅಗತ್ಯ:: ಅನ್ಸಾರ್ ಅಹಮದ್

1

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನಲ್ಲಿ ಕಾರ್ಯಾಚರಿಸುತ್ತಿರುವ ಜಲ್ಲಿ ಕ್ರಷರ್ ಗಳಿಗೆ ಬರುತ್ತಿರುವ ಕೇರಳ ಮೂಲದ ಟಿಪ್ಪರ್ ವಾಹನ ಚಾಲಕರ ಗೂಂಡಾ ವರ್ತನೆ ಮಿತಿ ಮೀರುತ್ತಿದೆ. ಸ್ಥಳೀಯ ಟಿಪ್ಪರ್ ಗಳಿಗಿಂತ ಕೇರಳ ನೋಂದಣಿಯ ಟಿಪ್ಪರ್ ಗಳದ್ದೇ ಕಾರುಬಾರು ಹೆಚ್ಚಾಗಿದೆ. ಇಲ್ಲಿನ ರಸ್ತೆಯಲ್ಲಿ ಕೇರಳ ಮೂಲದ ಬೃಹದಾಕಾರದ ಲಾರಿಗಳು ಜಲ್ಲಿ ಹಾಗೂ ಎಂ. ಸ್ಯಾಂಡ್ ತುಂಬಲು ಬರುತ್ತಿದ್ದು ಸಣ್ಣ ವಾಹನದವರು ರಸ್ತೆಯಲ್ಲಿ ಸಂಚರಿಸುವುದೇ ಕಷ್ಟದಾಯಕವಾಗಿದೆ

ಅಲ್ಲದೆ ಸಾರ್ವಜನಿಕರ ಮೇಲೆ ಇವರುಗಳು ಹಲ್ಲೆ ನಡೆಸುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರಿದರೆ ಕಾನೊನು ಸುವ್ಯವಸ್ಥೆ ಹದೆಗೆಡುವುದರಲ್ಲಿ ಯಾವುದೇ ಸಂಶಯವಿಲ್ಲ.
ಈ ಲಾರಿಗಳಲ್ಲಿ ತುಂಬುವ ಜಲ್ಲಿ ಮತ್ತು ಎಂ ಸ್ಯಾಂಡ್ ನ ರಾಜಧನದಲ್ಲೂ ಸರಕಾರಕ್ಕೆ ವಂಚಿಸಲಾಗುತ್ತಿದೆ. ತುಂಬುವ ಸರಕಿನ ಅರ್ಧಕ್ಕಿಂತಲೂ ಕಡಿಮೆ ರಾಜಧನ ಪಾವತಿಸಿ ಉಳಿದ ಹಣವನ್ನು ಸರಕಾರಕ್ಕೆ ಮೋಸ ಮಾಡಲಾಗುತ್ತಿದೆ.

ಸಂಬಂಧಪಟ್ಟ ಇಲಾಖೆ ಸ್ಥಳೀಯ ಲಾರಿಗಳ ಮೇಲೆ ನಿಗಾ ವಹಿಸುತ್ತಿದ್ದು ಕೇರಳ ಮೂಲದ ಲಾರಿಗಳ ಮೇಲೆ ಅಷ್ಟು ನಿಗಾ ವಹಿಸುವಂತೆ ಕಾಣುತ್ತಿಲ್ಲ ಎಂದು ಜನರು ಆಡಿಕೊಳ್ಳುತ್ತಿದ್ದು , ಇಲಾಖೆ ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಎಂಬಂತೆ ವರ್ತಿಸುತ್ತಿದೆ.

ಸಂಬಂಧಪಟ್ಟ ಇಲಾಖೆ ಈ ಕ್ಷಣದಿಂದಲೇ ಕೇರಳ ಮೂಲದ ವಾಹನಗಳು ತುಂಬುವ ಸರಕು ಹಾಗೂ ಅವರು ಪಾವತಿಸುವ ರಾಜಧನ ವನ್ನು ಕೂಲಂಕುಶವಾಗಿ ಪರಿಶೀಲಿಸಿ ಸರಕಾರಕ್ಕೆ ಆಗುತ್ತಿರುವ ನಷ್ಟವನ್ನು ತಡೆಯಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ರಾದ ಅನ್ಸಾರ್ ಅಹಮದ್ ರವರು ಆಗ್ರಹಿಸಿರುತ್ತಾರೆ.

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...