ಭಾರತದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಪಾಕ್‌ನ ಐಎಸ್ಐ ಮತ್ತು ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಬಂಧನ

1
ನವದೆಹಲಿ: ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ISI , ಬಾಂಗ್ಲಾದೇಶದೊಂದಿಗೆ ಸಂಪರ್ಕ ಹೊಂದಿರುವ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಉಡುಪು ಉತ್ಪಾದನಾ ಘಟಕಗಳಿಂದ ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿಟನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂಬ ಆರು ಶಂಕಿತರನ್ನು ಬಂಧಿಸಲಾಗಿದ್ದು, ಇಬ್ಬರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ.


ಬಂಧಿತ ಶಂಕಿತರಲ್ಲಿ ಬಾಂಗ್ಲಾದೇಶಿ ಪ್ರಜೆಯೂ ಸೇರಿದ್ದಾರೆ. ಆರೋಪಿಗಳು ಗುರುತಿನ ಚೀಟಿಗಾಗಿ ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸುತ್ತಿದ್ದರು. ಶಂಕಿತರಿಂದ ಎಂಟು ಮೊಬೈಲ್ ಫೋನ್‌ಗಳು ಮತ್ತು 16 ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮಿಳುನಾಡು ಪೊಲೀಸರು ಶಂಕಿತರನ್ನು ಬಂಧಿಸಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಸಂಘಟನೆಯು ದೆಹಲಿಯ ಕೆಂಪು ಕೋಟೆ ಮತ್ತು ಚಾಂದನಿ ಚೌಕ್‌ನಲ್ಲಿರುವ ದೇವಾಲಯ ಸೇರಿದಂತೆ ದೇಶಾದ್ಯಂತ ಇತರ ಪ್ರಮುಖ ಧಾರ್ಮಿಕ ಸ್ಥಳಗಳ ಬಳಿ ಸ್ಫೋಟಕ್ಕೆ ಸಂಚು ರೂಪಿಸಿದೆ ಎಂದು ಮೂಲಗಳು ಎಚ್ಚರಿಸಿದ್ದವು. ಹೀಗೆ ತಿಳಿಸಿದ ಒಂದು ದಿನದ ಬೆನ್ನಲ್ಲೇ 8 ಮಂದಿಯನ್ನು ಬಂಧಿಸಲಾಗಿದೆ.
ದೇಶದ ಅನೇಕ ಭಾಗಗಳಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ಯೋಜಿಸುತ್ತಿರುವ ಶಂಕಿತ ಭಯೋತ್ಪಾದಕ ಮಾಡ್ಯೂಲ್ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಲಂಚ ಆರೋಪ ವಿಚಾರಣೆ ನಂತರ ಉಲ್ಟಾ ಹೊಡೆದ ಸಾಮಾಜಿಕ ಕಾರ್ಯಕರ್ತಶಾಲಿನಿ ರಜನೀಶ್ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಲಂಚ ಆರೋಪ ಮಾಡಿದ್ದ...

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಪ್ರಮುಖ ಆರೋಪಿ ಸೇರಿ 8 ಮಂದಿ ಬಂಧನ

ಬಾಗಲಕೋಟೆ: ಶಿವಾಜಿ ಮಹಾರಾಜರ ಜಯಂತೋತ್ಸವ ಆಚರಣೆ ವೇಳೆ ನಡೆದ ಕಲ್ಲು ತೂರಾಟ, ಚಪ್ಪಲಿ ಎಸೆತ ಘಟನೆಗೆ...

ನಾಯಕತ್ವ ಬದಲಾವಣೆ ಸಿಎಂ ಸಿದ್ದರಾಮಯ್ಯ ಆಪ್ತ ಬಣದ  ಶಾಸಕರ  ವಿದೇಶ ಪ್ರವಾಸ

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ, ನಾಯಕರ ಬಹಿರಂಗ ಹೇಳಿಕೆಗಳು ಜೋರಾಗಿಯೇ ನಡೆಯುತ್ತಿದೆ. ಈ ಮಧ್ಯೆ...

ಕರಾವಳಿ ಪ್ರದೇಶದಲ್ಲಿ ಶಾಂತಿ ಮರಳುತ್ತಿದೆ  ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ  ತೇಪೆ ಹಚ್ಚಿದ :: ಗೃಹ ಸಚಿವ ಜಿ. ಪರಮೇಶ್ವರ

ಮಂಗಳೂರು: ಕೋಮು ಘಟನೆಗಳಿಂದಾಗಿ ಐಟಿ ಮತ್ತು ಬಿಟಿ ಕಂಪನಿಗಳು ಕರ್ನಾಟಕ ಕರಾವಳಿಯಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿವೆ...