ಆರೋಗ್ಯ ಇಲಾಖೆಯಲ್ಲಿ ಅಕ್ರಮ, ಔಷಧಿ ಕೊರತೆ: ರಾಜ್ಯ ಸರಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

1
ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಔಷಧಿ ಕೊರತೆ, ದೊಡ್ಡ ಪ್ರಮಾಣದ ಅಕ್ರಮಗಳು ಮತ್ತು ಆರೋಗ್ಯ ಸೇವೆಗೆ ಅಡ್ಡಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಕಾಂಗ್ರೆಸ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ಇಚ್ಛಾಶಕ್ತಿ ಇಲ್ಲ ಮತ್ತು ಆಡಳಿತದ ಬದಲು “ದೂಷಣೆಯ ರಾಜಕೀಯ”ದಲ್ಲಿ ತೊಡಗಿದೆ ಎಂದು ಆರೋಪಿಸಿದರು.


ಈ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ, ಆರೋಗ್ಯ ಇಲಾಖೆಯೇ ಐಸಿಯುನಲ್ಲಿದ್ದು, ಪರಿಸ್ಥಿತಿ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದರೆ ವೈದ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗಿದೆ ಎಂದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ತೀವ್ರ ಕೊರತೆ ಇದೆ. 108 ಆಂಬ್ಯುಲೆನ್ಸ್ ಸೇವೆಗಳು ತೀವ್ರ ಸಮಸ್ಯೆ ಎದುರಿಸುತ್ತಿವೆ. ವೈದ್ಯರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಸಾಧನೆಯ ಸಮಾವೇಶಗಳೊಂದಿಗೆ ಅಧಿಕಾರಕ್ಕೆ ಬಂದು 1,000 ದಿನಗಳನ್ನು ಆಚರಿಸುತ್ತಿದೆ” ಎಂದು ವಾಗ್ದಾಳಿ ನಡೆಸಿದರು.
ಮೊದಲಿಗೆ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿ ಸರಿ ಇಲ್ಲ. ಔಷಧಿಗಳು ಸಿಗುತ್ತಿಲ್ಲ. ವೈದ್ಯರು ಪ್ರತಿಭಟನೆ ಮಾಡುತ್ತಿದ್ದಾರೆ. ಇವರ ಬೇಜಾಬ್ದಾರಿಯಿಂದ ಆರೋಗ್ಯ ಇಲಾಖೆ ನಷ್ಟದಲ್ಲಿದೆ. ಕೇಂದ್ರದ ಜನೌಷಧಿಯನ್ನು ಕೇಂದ್ರವನ್ನ ಮುಚ್ಚುವ ಕೆಲಸ ಮಾಡಿದರು. ಖಾಸಗಿ ಫಾರ್ಮಾಸಿಗಳಲ್ಲಿ ಔಷಧಿ ತೆಗೆದುಕೊಳ್ಳಿ ಎಂದು ಸರ್ಕಾರಿ ವೈದ್ಯರೇ ಹೇಳುತ್ತಿದ್ದಾರೆ. ಸಿಟಿ ಸ್ಕ್ಯಾನ್‌, ಎಂಆರ್‌ಐ ಸ್ಕ್ಯಾನ್‌ ಸೇವೆಗಳಿಗೆ ಬಾಕೀ ಹಣ ಉಳಿಸಿಕೊಂಡಿದ್ದಾರೆ. ಇದರಿಂದ ಬಡ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ.
ಸಾಧನ ಸಮಾವೇಶ ಮಾಡುತ್ತಿದ್ದಾರೆ. ಆದರೆ ಜನರು ಯಾವ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಸರ್ಕಾರಕ್ಕೆ ಗೊತ್ತಾ? ಎಂದು ಪ್ರಶ್ನೆ ಮಾಡಿದರು. ನನ್ನ ಪ್ರಕಾರ ಕಾಂಗ್ರೆಸ್‌ ನುಡಿದಂತೆ ನಡೆಯುತ್ತಿರುವ ಸರ್ಕಾರ ಅಲ್ಲ. ಜನರಿಗಾಗಿ ಇರುವ ಸರ್ಕಾರ ಅಲ್ಲ. ದಲ್ಲಾಳಿಗಳಿಗಾಗಿ ಇರುವ ಸರ್ಕಾರ
. ಔಷಧಿ ಕೊರತೆ ಉಂಟಾಗಲು ಸರ್ಕಾರ, ಸಚಿವರು ಕಾರಣ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಔಷಧಿ ಖರೀದಿಯಲ್ಲಿ ಅವ್ಯಾವಾಹರ ನಡೆಯುತ್ತಿದೆ. ಟೆಂಡರ್‌ ಕರೆದರೂ ಯಾರು ಭಾಗಿಯಾಗ್ತಿಲ್ಲ. ನಾನು ನೇರವಾಗಿ ಆರೋಪ ಮಾಡ್ತಿದ್ದೀನಿ. ಶೇ. 15-20 ರಷ್ಟು ಕಮಿಷನ್‌ ಹಾವಳಿಯಿಂದ ಟೆಂಡರ್‌ನಲ್ಲಿ ಯಾರು ಭಾಗಿಯಾಗುತ್ತಿಲ್ಲ ಎಂದು ಆರೋಪಿಸಿದರು

Leave a comment

Leave a Reply

Your email address will not be published. Required fields are marked *

Related Articles

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಕೆ ನಿಷೇಧಿಸುವ ವಿಚಾರ  ಚರ್ಚೆಯ ಹಂತದಲ್ಲಿದೆ  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ ಎಂದು...

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...