ಆಕಸ್ಮಿಕವಾಗಿ ಅಮೆರಿಕದಎಫ್- 15 ಫೈಟರ್ ಜೆಟ್ ಹೊಡೆದುರುಳಿಸಿದ ಕುವೈಟ್ 

22

“ಕುವೈತ್ ಆಕಸ್ಮಿಕವಾಗಿ ಅಮೆರಿಕದ ಮೂರು F-15 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದೆ ಎಂದು ಯುಎಸ್ ಮಿಲಿಟರಿ ಹೇಳಿದೆ. ಆದಾಗ್ಯೂ ನಮ್ಮ ಪೈಲಟ್ ಗಳು ಜೆಟ್ ನಿಂದ ಹಾರಿದ್ದು ಅವರೆಲ್ಲಾ ಸುರಕ್ಷಿತರಾಗಿದ್ದಾರೆ ಎಂದರು. ಯುಎಸ್ ಸೆಂಟ್ರಲ್ ಕಮಾಂಡ್ ಈ ಮಾಹಿತಿಯನ್ನು ಸಾಮಾಜಿಕ ಮಾಧ್ಯಮ ಸೈಟ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಮಾರ್ಚ್ 1ರಂದು ರಾತ್ರಿ 11:03ಕ್ಕೆ, ಆಪರೇಷನ್ ಎಪಿಕ್ ಫ್ಯೂರಿಗೆ ಬೆಂಬಲವಾಗಿ ಹಾರುತ್ತಿದ್ದ ಮೂರು ಅಮೆರಿಕ ಎಫ್ -15 ಇ ಸ್ಟ್ರೈಕ್ ಈಗಲ್‌ಗಳನ್ನು ಕುವೈತ್‌ ಏರ್ ಡಿಫೆನ್ಸ್ ತಪ್ಪಾಗಿ ಹೊಡೆದುರುಳಿಸಲಾಗಿದೆ ಎಂದರು. ಕುವೈತ್ ಕೂಡ ತನ್ನ ತಪ್ಪನ್ನು ಒಪ್ಪಿಕೊಂಡಿದೆ. ಕುವೈತ್ ರಕ್ಷಣಾ ಪಡೆಗಳ ಪ್ರಯತ್ನಗಳು ಮತ್ತು ಈ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಅವರ ಬೆಂಬಲಕ್ಕೆ ಅಮೆರಿಕ ಕೃತಜ್ಞತೆ ಸಲ್ಲಿಸುತ್ತದೆ ಎಂದು ಹೇಳಿದೆ.

ಘಟನೆಯ ಕಾರಣವನ್ನು ತನಿಖೆ ಮಾಡಲಾಗುತ್ತಿದೆ. ಏತನ್ಮಧ್ಯೆ, ಶನಿವಾರ ತನ್ನ ದಾಳಿಯನ್ನು ಪ್ರಾರಂಭಿಸಿದ ನಂತರ, ಯುಎಸ್ ಮಿಲಿಟರಿ 1,000ಕ್ಕೂ ಹೆಚ್ಚು ಇರಾನಿನ ಗುರಿಗಳನ್ನು ಹೊಡೆದುರುಳಿಸಿದೆ ಎಂದು ಯುಎಸ್ ಸೆಂಟ್ರಲ್ ಕಮಾಂಡ್ ವರದಿ ಮಾಡಿದೆ.

ಈ ಗುರಿಗಳಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರಗಳು, ಐಆರ್‌ಜಿಸಿ ಜಂಟಿ ಪ್ರಧಾನ ಕಚೇರಿ, ಐಆರ್‌ಜಿಸಿ ಏರೋಸ್ಪೇಸ್ ಪ್ರಧಾನ ಕಚೇರಿ, ಸಂಯೋಜಿತ ವಾಯು ರಕ್ಷಣಾ ವ್ಯವಸ್ಥೆಗಳು, ಬ್ಯಾಲಿಸ್ಟಿಕ್ ಕ್ಷಿಪಣಿ ಕೇಂದ್ರಗಳು, ಇರಾನಿನ ನೌಕಾ ಹಡಗುಗಳು, ಜಲಾಂತರ್ಗಾಮಿ ನೌಕೆಗಳು, ಹಡಗು ವಿರೋಧಿ ಕ್ಷಿಪಣಿ ಕೇಂದ್ರಗಳು ಮತ್ತು ಮಿಲಿಟರಿ ಸಂವಹನ ಸಾಮರ್ಥ್ಯಗಳು ಸೇರಿವೆ.

ಕುವೈತ್‌ ಅಮೆರಿಕ-ಇಸ್ರೇಲಿ ಜಂಟಿ ಕಾರ್ಯಾಚರಣೆಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಮರಣವು ವಿಶ್ವಾದ್ಯಂತ ಪ್ರತಿಕ್ರಿಯೆಯನ್ನು ಹುಟ್ಟುಹಾಕಿದೆ. ಹೆಚ್ಚಿನ ದೇಶಗಳು ಖಮೇನಿ ಅವರ ಹತ್ಯೆಯನ್ನು ಖಂಡಿಸಿವೆ ಮತ್ತು ಅಮೆರಿಕ ಮತ್ತು ಇರಾನ್ ಯುದ್ಧವನ್ನು ನಿಲ್ಲಿಸಿ ಮಾತುಕತೆಯನ್ನು ಪುನರಾರಂಭಿಸುವಂತೆ ಕರೆ ನೀಡಿವೆ. ಕೊಲ್ಲಿಯಲ್ಲಿನ ಪ್ರಸ್ತುತ ಪರಿಸ್ಥಿತಿ ಜಾಗತಿಕ ಶಾಂತಿ ಮತ್ತು ಸ್ಥಿರತೆಗೆ ಅಪಾಯಕಾರಿ ಎಂದು ದೇಶಗಳು ಬಣ್ಣಿಸಿವೆ.

Leave a comment

Leave a Reply

Your email address will not be published. Required fields are marked *

Related Articles

ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ

ಟೆಹರಾನ್: ಅಮೆರಿಕ ಇರಾನ್ ಬಂದರುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಮತ್ತೆ ಉದ್ವಿಗ್ನತೆ...

ಹೊರ್ಮುಜ್ ಜಲಸಂಧಿ ಕದನ ವಿರಾಮದ ತಪ್ಪು ತಿಳುವಳಿಕೆಯಿಂದ ಅನುಮತಿ ಇಲ್ಲದೆ ಬಂದರೆ ನಿಮ್ಮ ಸರಕು ಸಾಗಾಣಿಕ ಹಡಗುಗಳನ್ನು ಹೊಡೆದುರುಳಿಸ್ತೀವಿ:: ಇರಾನ್ ಎಚ್ಚರಿಕೆ

ಟೆಹ್ರಾನ್: ಕದನ ವಿರಾಮ ಘೋಷಣೆಯಾಗಿದೆ ಎಂದು ಇಡೀ ಜಗತ್ತು ಖುಷಿ ಪಡ್ತಿದ್ರೆ… ಅದ್ಯಾಕೋ ಇರಾನ್ ಯುದ್ಧ...

 ಬ್ರಿಟನ್ ಆಹ್ವಾನದ ಮೇರೆಗೆ    ಹಾರ್ಮುಜ್ ಜಲಸಂಧಿಯ  ಅಂತರರಾಷ್ಟ್ರೀಯ ಮಾತುಕತೆಯಲ್ಲಿ ಭಾರತ ಭಾಗಿ

ನವದೆಹಲಿ: ಯುನೈಟೆಡ್ ಕಿಂಗ್‌ಡಮ್‌(ಬ್ರಿಟನ್)ನ ಆಹ್ವಾನದ ಮೇರೆಗೆ ಭಾರತವು ಹಾರ್ಮುಜ್ ಜಲಸಂಧಿಯ ಕುರಿತು ಅಂತರರಾಷ್ಟ್ರೀಯ ಮಾತುಕತೆಯಲ್ಲಿ ಭಾಗವಹಿಸುತ್ತಿದೆ...

ಯುಎಇ ಮೇಲೆ ಇರಾನ್ ಕ್ಷಿಪಣಿ ಮತ್ತು  ಡ್ರೋನ್ ದಾಳಿ ಐವರು ಐವರು ಭಾರತೀಯರಿಗೆ ಗಾಯ

“ಇರಾನ್‌ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಕೈಗಾರಿಕಾ ವಲಯದಲ್ಲಿ ಭಾರೀ...