ವಾಣಿಜ್ಯ ವಿದ್ಯುತ್ ಬಳಕೆದಾರರಿಗೆ ಶಾಕ್ ನೀಡಿದ ರಾಜ್ಯ ಸರಕಾರ ವಿದ್ಯುತ್ ದರ  ಹೆಚ್ಚಳ

23

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಬುಧವಾರ ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್ ನೀಡಿದೆ. ಆದರೆ ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ್ದು, ಕೃಷಿ ಪಂಪ್ ಸೆಟ್ ವಿದ್ಯುತ್ ದರವನ್ನು ಇಳಿಕೆ ಮಾಡಿದೆ. 2025–26ನೇ ಸಾಲಿನ ಕೃಷಿ ಪಂಪ್ ಸೆಟ್‌ಗಳ ವಿದ್ಯುತ್ ದರವನ್ನು ರಾಜ್ಯಾದ್ಯಂತ ಪ್ರತಿ ಯೂನಿಟ್‌ಗೆ 8.30 ರೂ.ಗಳಿಂದ 6.57 ರೂಪಾಯಿಗೆ ಇಳಿಕೆ ಮಾಡಲಾಗಿದೆ.

ಕೃಷಿ ಪಂಪ್ ಸೆಟ್ ವಿದ್ಯುತ್ ದರವನ್ನು ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 7.40 ರೂಪಾಯಿ, ಚೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 7.70 ರೂಪಾಯಿ, ಹೆಸ್ಕಾಂ ವ್ಯಾಪ್ತಿಯಲ್ಲಿ 7.73 ರೂಪಾಯಿ, ಜೆಸ್ಕಾಂ ವ್ಯಾಪ್ತಿಯಲ್ಲಿ 7.79 ರೂಪಾಯಿಗೆ ಕಡಿಮೆ ಮಾಡಲಾಗಿದೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಹೆಚ್ಚಿನ ಜಿಲ್ಲೆಗಳಿವೆ. ಜೊತೆಗೆ ಹೆಚ್ಚಿನ ಕೃಷಿ ಪಂಪ್ ಸೆಟ್ ಗಳೂ ಕೂಡ ಇವೆ. ಹೀಗಾಗಿ ಬೆಸ್ಕಾಂ ವ್ಯಾಪ್ತಿಯಲ್ಲಿ ಕಡಿಮೆ ವಿದ್ಯುತ್ ದರವನ್ನು ಕೃಷಿ ಪಂಪ್ ಸೆಟ್ ಗಳಿಗೆ ನಿಗದಿ ಮಾಡುವ ಮೂಲಕ ರಾಜ್ಯ ಸರ್ಕಾರ ಕೃಷಿ ಪಂಪ್ ಸೆಟ್ ವಿದ್ಯುತ್‌ ಗೆ ನೀಡುವ ಸಬ್ಸಿಡಿ ಪ್ರಮಾಣ ಕಡಿಮೆಯಾಗುವಂತೆ ಚಾಣಾಕ್ಷ ತಂತ್ರ ಅನುಸರಿಸಿದೆ. ವಾಣಿಜ್ಯ, ಕೈಗಾರಿಕಾ ಬಳಕೆದಾರರಿಗೆ ದರ ಏರಿಕೆ ಶಾಕ್ ಕೆಇಆರ್ ಸಿ ಆಯ್ದ ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 10 ಪೈಸೆಯಿಂದ ಗರಿಷ್ಠ 95 ಪೈಸೆಯವರೆಗೆ ಹೆಚ್ಚಿಸಿದೆ. ಪರಿಷ್ಕೃತ ಸುಂಕಗಳು ಏಪ್ರಿಲ್ 2025 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.

ಆಯೋಗದ ಆದೇಶದ ಪ್ರಕಾರ, ಪರಿಷ್ಕೃತ ದರಗಳು ಈ ಕೆಳಗಿನಂತಿವೆ ಪ್ರತಿ ಕಿಲೋವ್ಯಾಟ್‌ಗೆ ರೂ. 235 ಸ್ಥಿರ ಶುಲ್ಕದೊಂದಿಗೆ LT-3A ವಾಣಿಜ್ಯ ಸುಂಕಗಳನ್ನು ಪ್ರತಿ ಯೂನಿಟ್ಗೆ ರೂ. 7 ರಿಂದ ರೂ. 7.10 ಕ್ಕೆ ಹೆಚ್ಚಿಸಲಾಗಿದೆ. LT-5 ಕೈಗಾರಿಕಾ ಸುಂಕಗಳು ಪ್ರತಿ ಯೂನಿಟ್‌ಗೆ ರೂ. 4.50 ರಿಂದ ರೂ. 5.20 ಕ್ಕೆ ಏರಿದ್ದು, ಪ್ರತಿ ಅಶ್ವಶಕ್ತಿಗೆ ರೂ. 165 ಸ್ಥಿರ ಶುಲ್ಕವಾಗಿದೆ. HT-2A ಕೈಗಾರಿಕಾ ಗ್ರಾಹಕರು ಈಗ ಪ್ರತಿ ಯೂನಿಟ್‌ಗೆ 6.70 ರೂ. ಪಾವತಿಸಲಿದ್ದಾರೆ,

ಇದು ಪ್ರತಿ kVA ಗೆ ರೂ. 6.60 ರಿಂದ ರೂ. 365 ಕ್ಕೆ ಏರಿದೆ. ವಾಣಿಜ್ಯ ಸಂಕೀರ್ಣಗಳು, ಚಿತ್ರಮಂದಿರಗಳು ಮತ್ತು ಹೋಟೆಲ್‌ಗಳಂತಹ HT-2B ವಾಣಿಜ್ಯ ಗ್ರಾಹಕರು ಪ್ರತಿ ಯೂನಿಟ್‌ಗೆ ರೂ. 5.95 ರಿಂದ ರೂ. 6.90 ಕ್ಕೆ ತೀವ್ರ ಏರಿಕೆ ಕಾಣಲಿದ್ದಾರೆ ಮತ್ತು ಪ್ರತಿ kVA ಗೆ ರೂ. 390 ಡಿಮ್ಯಾಂಡ್ ಶುಲ್ಕ ವಿಧಿಸಲಾಗುತ್ತದೆ.

Leave a comment

Leave a Reply

Your email address will not be published. Required fields are marked *

Related Articles

ಅಂಗಾ, ಬಂಗಾ- ಕಳಿಂಗಾ’ದಲ್ಲಿ ಬಿಜೆಪಿ ಸರಕಾರ ರಚನೆ ಟಿಎಂಸಿ ನಿರ್ಗಮನ ಖಚಿತ ::ಕೇಂದ್ರ ಸಚಿವಅಮಿತ್ ಶಾ

ಕೊಲ್ಕೋತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ದಾಖಲೆಯ ಮತದಾರರು ಭಾಗವಹಿಸಿರುವುದು ಕಂಡುಬಂದಿದ್ದು, ಇದು...

ಎಸ್ ಎಸ್ ಎಲ್ ಸಿ ಪರೀಕ್ಷೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ :: ಹೈಕೋರ್ಟ್ ಆದೇಶ

ಬೆಂಗಳೂರು: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮೂರನೇ ಭಾಷಾ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಸರ್ಕಾರಕ್ಕೆ...

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...