ವಾಣಿಜ್ಯ ವಿದ್ಯುತ್ ಬಳಕೆದಾರರಿಗೆ ಶಾಕ್ ನೀಡಿದ ರಾಜ್ಯ ಸರಕಾರ ವಿದ್ಯುತ್ ದರ  ಹೆಚ್ಚಳ

2

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಬುಧವಾರ ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್ ನೀಡಿದೆ. ಆದರೆ ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ್ದು, ಕೃಷಿ ಪಂಪ್ ಸೆಟ್ ವಿದ್ಯುತ್ ದರವನ್ನು ಇಳಿಕೆ ಮಾಡಿದೆ. 2025–26ನೇ ಸಾಲಿನ ಕೃಷಿ ಪಂಪ್ ಸೆಟ್‌ಗಳ ವಿದ್ಯುತ್ ದರವನ್ನು ರಾಜ್ಯಾದ್ಯಂತ ಪ್ರತಿ ಯೂನಿಟ್‌ಗೆ 8.30 ರೂ.ಗಳಿಂದ 6.57 ರೂಪಾಯಿಗೆ ಇಳಿಕೆ ಮಾಡಲಾಗಿದೆ.

ಕೃಷಿ ಪಂಪ್ ಸೆಟ್ ವಿದ್ಯುತ್ ದರವನ್ನು ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 7.40 ರೂಪಾಯಿ, ಚೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 7.70 ರೂಪಾಯಿ, ಹೆಸ್ಕಾಂ ವ್ಯಾಪ್ತಿಯಲ್ಲಿ 7.73 ರೂಪಾಯಿ, ಜೆಸ್ಕಾಂ ವ್ಯಾಪ್ತಿಯಲ್ಲಿ 7.79 ರೂಪಾಯಿಗೆ ಕಡಿಮೆ ಮಾಡಲಾಗಿದೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಹೆಚ್ಚಿನ ಜಿಲ್ಲೆಗಳಿವೆ. ಜೊತೆಗೆ ಹೆಚ್ಚಿನ ಕೃಷಿ ಪಂಪ್ ಸೆಟ್ ಗಳೂ ಕೂಡ ಇವೆ. ಹೀಗಾಗಿ ಬೆಸ್ಕಾಂ ವ್ಯಾಪ್ತಿಯಲ್ಲಿ ಕಡಿಮೆ ವಿದ್ಯುತ್ ದರವನ್ನು ಕೃಷಿ ಪಂಪ್ ಸೆಟ್ ಗಳಿಗೆ ನಿಗದಿ ಮಾಡುವ ಮೂಲಕ ರಾಜ್ಯ ಸರ್ಕಾರ ಕೃಷಿ ಪಂಪ್ ಸೆಟ್ ವಿದ್ಯುತ್‌ ಗೆ ನೀಡುವ ಸಬ್ಸಿಡಿ ಪ್ರಮಾಣ ಕಡಿಮೆಯಾಗುವಂತೆ ಚಾಣಾಕ್ಷ ತಂತ್ರ ಅನುಸರಿಸಿದೆ. ವಾಣಿಜ್ಯ, ಕೈಗಾರಿಕಾ ಬಳಕೆದಾರರಿಗೆ ದರ ಏರಿಕೆ ಶಾಕ್ ಕೆಇಆರ್ ಸಿ ಆಯ್ದ ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 10 ಪೈಸೆಯಿಂದ ಗರಿಷ್ಠ 95 ಪೈಸೆಯವರೆಗೆ ಹೆಚ್ಚಿಸಿದೆ. ಪರಿಷ್ಕೃತ ಸುಂಕಗಳು ಏಪ್ರಿಲ್ 2025 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.

ಆಯೋಗದ ಆದೇಶದ ಪ್ರಕಾರ, ಪರಿಷ್ಕೃತ ದರಗಳು ಈ ಕೆಳಗಿನಂತಿವೆ ಪ್ರತಿ ಕಿಲೋವ್ಯಾಟ್‌ಗೆ ರೂ. 235 ಸ್ಥಿರ ಶುಲ್ಕದೊಂದಿಗೆ LT-3A ವಾಣಿಜ್ಯ ಸುಂಕಗಳನ್ನು ಪ್ರತಿ ಯೂನಿಟ್ಗೆ ರೂ. 7 ರಿಂದ ರೂ. 7.10 ಕ್ಕೆ ಹೆಚ್ಚಿಸಲಾಗಿದೆ. LT-5 ಕೈಗಾರಿಕಾ ಸುಂಕಗಳು ಪ್ರತಿ ಯೂನಿಟ್‌ಗೆ ರೂ. 4.50 ರಿಂದ ರೂ. 5.20 ಕ್ಕೆ ಏರಿದ್ದು, ಪ್ರತಿ ಅಶ್ವಶಕ್ತಿಗೆ ರೂ. 165 ಸ್ಥಿರ ಶುಲ್ಕವಾಗಿದೆ. HT-2A ಕೈಗಾರಿಕಾ ಗ್ರಾಹಕರು ಈಗ ಪ್ರತಿ ಯೂನಿಟ್‌ಗೆ 6.70 ರೂ. ಪಾವತಿಸಲಿದ್ದಾರೆ,

ಇದು ಪ್ರತಿ kVA ಗೆ ರೂ. 6.60 ರಿಂದ ರೂ. 365 ಕ್ಕೆ ಏರಿದೆ. ವಾಣಿಜ್ಯ ಸಂಕೀರ್ಣಗಳು, ಚಿತ್ರಮಂದಿರಗಳು ಮತ್ತು ಹೋಟೆಲ್‌ಗಳಂತಹ HT-2B ವಾಣಿಜ್ಯ ಗ್ರಾಹಕರು ಪ್ರತಿ ಯೂನಿಟ್‌ಗೆ ರೂ. 5.95 ರಿಂದ ರೂ. 6.90 ಕ್ಕೆ ತೀವ್ರ ಏರಿಕೆ ಕಾಣಲಿದ್ದಾರೆ ಮತ್ತು ಪ್ರತಿ kVA ಗೆ ರೂ. 390 ಡಿಮ್ಯಾಂಡ್ ಶುಲ್ಕ ವಿಧಿಸಲಾಗುತ್ತದೆ.

Leave a comment

Leave a Reply

Your email address will not be published. Required fields are marked *

Related Articles

ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದ ಸಂಕಷ್ಟ ವಿಮಾನ ಸಂಚಾರ ರದ್ದು ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ :: ಮುಖ್ಯಮಂತ್ರಿ ಸಿದ್ದರಾಮಯ್ಯ

ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದ ಹಲವು ದೇಶಗಳಿಗೆ ಸಂಕಷ್ಟ ಎದುರಾಗಿದೆ. ವಿಮಾನ ಸಂಚಾರ ಹಲವು...

ಎನ್.ಎಸ್ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ

ನವದೆಹಲಿ: ಬಾಗೇಪಲ್ಲಿಯ ಎನ್.ಎಸ್ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್...

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿಗೆ ‘ಸುಪ್ರೀಂ ಜಾಮೀನು ಮಂಜೂರು

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್...

ರಾಜ್ಯದ ರಾಜಕೀಯ ಬೆಳವಣಿಗೆ ಕುರಿತು ಹೈಕಮಾಂಡ್ ನಿರ್ಧಾರಕ್ಕೆ ಸಂಪೂರ್ಣ ಬದ್ಧ: ಸಿಎಂ ಸಿದ್ದರಾಮಯ್ಯ

ಉಡುಪಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಹೈಕಮಾಂಡ್ ತೆಗೆದುಕೊಳ್ಳುವ...