ಕರ್ನಾಟಕ ಬಜೆಟ್ ರಾಜ್ಯದಲ್ಲಿ ಹೊಸದಾಗಿ 12ಪೊಲೀಸ್ ಠಾಣೆಗಳ ಸ್ಥಾಪನೆ ಘೋಷಣೆ

40

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಿದ್ದು, ಪೊಲೀಸ್ ಇಲಾಖೆ ಸೇರಿದಂತೆ ಹಲವು ಇಲಾಖೆಗಳಿಗೆ ಭರಪೂರ ಅನುದಾನ ನೀಡಿದ್ದಾರೆ. ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕರ ಸುರಕ್ಷತೆಗಾಗಿ ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಇದರಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸ್ ಠಾಣೆಗಳು ಸೇರಿವೆ. ಹೊಸ ಠಾಣೆಗಳಿಗೆ ಸುಸಜ್ಜಿತ ಕಟ್ಟಡ ಮತ್ತು ಆಧುನಿಕ ಉಪಕರಣಗಳನ್ನು ಒದಗಿಸಲು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿದ್ದು, ಹೊಸ ಠಾಣೆಗಳ ಕಾರ್ಯಾಚರಣೆಗಾಗಿ ಅಗತ್ಯವಿರುವ ಪೊಲೀಸ್ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ, ಹಿರಿಯೂರು ಮತ್ತು ಗುಂಡ್ಲುಪೇಟೆಯಂತಹ ಬೆಳೆಯುತ್ತಿರುವ ನಗರಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರಿ ಠಾಣೆಗಳಿಗೆ ಒತ್ತು ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಪೊಲೀಸ್ ಠಾಣೆ, ಸಜಿಪನಡು ಪೊಲೀಸ್ ಠಾಣೆ, ಬೆಳಗಾವಿ ಜಿಲ್ಲೆಯ ಯರಗಟ್ಟಿ ಪೊಲೀಸ್ ಠಾಣೆ, ಯಾದಗಿರಿ ಜಿಲ್ಲೆಯ ಕಕ್ಕೇರಾ ಪೊಲೀಸ್ ಠಾಣೆ, ದಾವಣಗೆರೆ ಜಿಲ್ಲೆಯ ಆನಗೋಡು ಪೊಲೀಸ್ ಠಾಣೆ, ಹಾವೇರಿ ಜಿಲ್ಲೆಯ ತಿಳುವಳ್ಳಿ ಪೊಲೀಸ್ ಠಾಣೆ, ಮೈಸೂರು ಜಿಲ್ಲೆಯ ಉದಯಗಿರಿ ದಕ್ಷಿಣ ಪೊಲೀಸ್ ಠಾಣೆ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಗ್ರಾಮಾಂತರ ಠಾಣೆ, ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ವಲಯದಲ್ಲಿ ಪೊಲೀಸ್ ಠಾಣೆ ಆರಂಭಿಸಲಾಗುತ್ತಿದೆ.
ಇನ್ನು ಇದರ ಜತೆಗೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಶ್ರೇಣಿಯ ಒಟ್ಟು 8,000 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಈ ವರ್ಷ ಭರ್ತಿ ಮಾಡಲಾಗುವುದು. ನೇಮಕಾತಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ‘ಖಾಯಂ ಪೊಲೀಸ್ ಮತ್ತು ಪೊಲೀಸ್ ಪೂರಕ ಸೇವೆಗಳ ನೇಮಕಾತಿ ಮಂಡಳಿ’ಯನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಸಂಬಂಧವೇನು ಪ್ರಶ್ನಿಸಿದ ಬಿಜೆಪಿ ಶಾಸಕ ಸಿಟಿ ರವಿ ವಿರುದ್ಧ ಎಫ್ ಐ ಆರ್ ದಾಖಲು

ಬೆಂಗಳೂರು: ದೇಶಾದ್ಯಂತ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ನಡೆದ ನೀಟ್ ಪತ್ರಿಕೆ ಸೋರಿಕೆ ಪ್ರತಿಭಟನೆಗಳ ಕುರಿತು ದ್ವೇಷ...

ಭೂ ಕಬಳಿಕೆ ಪ್ರಕರಣ ಆರ್ಟ್ ಆಫ್ ಲಿವಿಂಗ್ ನ ಭೂ ಅತಿಕ್ರಮಣ ತನಿಖೆಗೆ ಎಸ್ ಐಟಿ ರಚಿಸಿದ ಕರ್ನಾಟಕ ರಾಜ್ಯ ಸರಕಾರ

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲಿಪುರ ಗ್ರಾಮದಲ್ಲಿ ಶ್ರೀ ಶ್ರೀ ರವಿಶಂಕರ್ ಅವರ ದಿ ಆರ್ಟ್...

ಅಕ್ರಮ ಮರಳು ಗಣಿಗಾರಿಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಉಪ ಆಯುಕ್ತರು ಮತ್ತು ತಹಶೀಲ್ದಾರ್‌ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಬಾಗಲಕೋಟೆಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಪರಿಶೀಲನೆಯಲ್ಲಿ ಕಂಡುಬಂದ ಬೆನ್ನಲ್ಲೇ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು,...

ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ: ಹಿಂದೂ ಯುವಕನ ಮೇಲೆ ತೀವ್ರ ಹಲ್ಲೆ; ನೊಂದು ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ,

ನೆಲಮಂಗಲ: ಮುಸ್ಲಿಂ ಯುವತಿಯೊಬ್ಬಳ ಜೊತೆಯಲ್ಲಿ ಓಡಾಡುತ್ತಿದ್ದನೆಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು...