ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ಬಂದಿಲ್ಲ ಭ್ರಷ್ಟ ಬಿವೈ ಯಡಿಯೂರಪ್ಪ ವಿಜೇಂದ್ರ ಯಡಿಯೂರಪ್ಪ ಇರುವ ತನಕ ಬಿಜೆಪಿ ಸೇರಲ್ಲ ::ಬಸನಗೌಡ ಪಾಟೀಲ್ ಯತ್ನಾಲ್

32

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ,ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ ಅವರಂತಹ ಕಡು ಭ್ರಷ್ಟ ಕುಟುಂಬ ಬಿಜೆಪಿಯಲ್ಲಿ ಇರುವವರೆಗೂ ಪಕ್ಷ ಸೇರಲು ಇಷ್ಟಪಡುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.


ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಬಿಜೆಪಿಯ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಬಂದಿಲ್ಲ. ಪುತ್ರನ ಮದುವೆಯ ಆಹ್ವಾನ ನೀಡಲು ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಕರೆಯುವ ನಿರೀಕ್ಷೆಯಲ್ಲಿ ಇರಲು ತಾನು ಹುಚ್ಚನಲ್ಲ ಎಂದು ಹೇಳಿದ ಅವರು, ಪಶ್ಚಿಮ ಬಂಗಾಳ, ಬಿಹಾರ್ ಅಥವಾ ಉತ್ತರ ಪ್ರದೇಶ ಚುನಾವಣೆಗಳ ನಂತರ ಬಿಜೆಪಿ ಕರೆದರೂ ನಿರ್ಧಾರ ಬದಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಾದೇಶಿಕ ಪಕ್ಷವನ್ನು ಕಟ್ಟುವುದಾಗಿ ಘೋಷಿಸಿದ ಅವರು, ಸೂಕ್ತ ಸಮಯದಲ್ಲಿ ಪಕ್ಷ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅದು ಜೆಸಿಬಿ ಚಿಹ್ನೆಯಡಿ ಕಾರ್ಯನಿರ್ವಹಿಸಲಿದೆಯೇ ಎಂಬ ಪ್ರಶ್ನೆಗೆ, ನೋಡೋಣ ಎಂದು ಉತ್ತರಿಸಿದ್ದಾರೆ.
ತಮ್ಮದೇ ಪಕ್ಷ ರಚನೆಯಾಗಲಿದ್ದು, 2028ರ ವಿಧಾನಸಭೆ ಚುನಾವಣೆ ನಂತರ ನಾನು ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಯತ್ನಾಳ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಸಂಬಂಧವೇನು ಪ್ರಶ್ನಿಸಿದ ಬಿಜೆಪಿ ಶಾಸಕ ಸಿಟಿ ರವಿ ವಿರುದ್ಧ ಎಫ್ ಐ ಆರ್ ದಾಖಲು

ಬೆಂಗಳೂರು: ದೇಶಾದ್ಯಂತ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ನಡೆದ ನೀಟ್ ಪತ್ರಿಕೆ ಸೋರಿಕೆ ಪ್ರತಿಭಟನೆಗಳ ಕುರಿತು ದ್ವೇಷ...

ಭೂ ಕಬಳಿಕೆ ಪ್ರಕರಣ ಆರ್ಟ್ ಆಫ್ ಲಿವಿಂಗ್ ನ ಭೂ ಅತಿಕ್ರಮಣ ತನಿಖೆಗೆ ಎಸ್ ಐಟಿ ರಚಿಸಿದ ಕರ್ನಾಟಕ ರಾಜ್ಯ ಸರಕಾರ

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲಿಪುರ ಗ್ರಾಮದಲ್ಲಿ ಶ್ರೀ ಶ್ರೀ ರವಿಶಂಕರ್ ಅವರ ದಿ ಆರ್ಟ್...

ಅಕ್ರಮ ಮರಳು ಗಣಿಗಾರಿಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಉಪ ಆಯುಕ್ತರು ಮತ್ತು ತಹಶೀಲ್ದಾರ್‌ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಬಾಗಲಕೋಟೆಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಪರಿಶೀಲನೆಯಲ್ಲಿ ಕಂಡುಬಂದ ಬೆನ್ನಲ್ಲೇ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು,...

ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ: ಹಿಂದೂ ಯುವಕನ ಮೇಲೆ ತೀವ್ರ ಹಲ್ಲೆ; ನೊಂದು ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ,

ನೆಲಮಂಗಲ: ಮುಸ್ಲಿಂ ಯುವತಿಯೊಬ್ಬಳ ಜೊತೆಯಲ್ಲಿ ಓಡಾಡುತ್ತಿದ್ದನೆಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು...