ಎಲ್ ಪಿಜಿ ಸಿಲಿಂಡರ್ ಸಂಗ್ರಹಣೆ, ಕಾಳಸಂತೆಯಲ್ಲಿ ಮಾರಾಟದ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವ ಪರಮೇಶ್ವರ ಸೂಚನೆ

2
ತುಮಕೂರು: ಎಲ್‌ಪಿಜಿ ಸಿಲಿಂಡರ್‌ಗಳ ಸಂಗ್ರಹಣೆ ಮತ್ತು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ. ಪಶ್ಚಿಮ ಏಷ್ಯಾ ಸಂಘರ್ಷದಿಂದ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಜನ ಎಲ್ ಪಿಜಿ ಸಿಲಿಂಡರ್ ಗಳಿಗಾಗಿ ಪರದಾಡುತ್ತಿದ್ದಾರೆ


ಯಾರಾದರೂ ಅನಿಲ ಸಿಲಿಂಡರ್‌ಗಳನ್ನು ಸಂಗ್ರಹಿಸಲು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡಲು ಪ್ರಯತ್ನಿಸಿದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯಾದ್ಯಂತ ಪೊಲೀಸರಿಗೆ ಈ ನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ… ನಾವು ಅದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಪರಮೇಶ್ವರ ವರದಿಗಾರರಿಗೆ ತಿಳಿಸಿದ್ದಾರೆ
ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ, ಮನೆಗಳಿಗೆ ಅಡಿಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಪ್ರಸ್ತತ ಯಾವುದೇ ಸಮಸ್ಯೆಗಳಿಲ್ಲ ಎಂದು ಅವರು ಹೇಳಿದರು. ಆದಾಗ್ಯೂ, ವಾಣಿಜ್ಯ ಅನಿಲ ಸಿಲಿಂಡರ್‌ಗಳಿಗೆ ಸಂಬಂಧಿಸಿದಂತೆ ಪೂರೈಕೆ ಸಮಸ್ಯೆಗಳಿವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. “ಹೋಟೆಲ್‌ಗಳು ಒಂದೆರಡು ದಿನಗಳವರೆಗೆ ಸಮಸ್ಯೆಗಳನ್ನು ಎದುರಿಸಬಹುದು, ಸಮಸ್ಯೆಯನ್ನು ಪರಿಹರಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದು ಅವರು ತಿಳಿಸಿದರು.
ಇರಾನ್ ಭಾರತಕ್ಕೆ ಕೆಲವು ವಿನಾಯಿತಿಗಳನ್ನು ನೀಡಿದ ನಂತರ, ಹಾರ್ಮುಜ್ ಜಲಸಂಧಿಯ ಮೂಲಕ ಎರಡು ಭಾರತೀಯ ಹಡಗುಗಳು ಮುಂಬೈ ತಲುಪಿವೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ಗಲ್ಫ್ ದೇಶಗಳಿಂದ ಅನಿಲ ಮತ್ತು ತೈಲ ಪೂರೈಕೆ ಶೀಘ್ರದಲ್ಲೇ ಸುಧಾರಿಸುತ್ತದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು
ಇದೇ ವೇಳೆ ಒಳ ಮೀಸಲಾತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ನೇಮಕಾತಿಯಲ್ಲಿ ಒಳ ಮೀಸಲಾತಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 27 ರಂದು ವಿಶೇಷ ಸಂಪುಟ ಸಭೆ ಕರೆದಿದ್ದಾರೆ ಎಂದು ಹೇಳಿದರು
. “ಆ ದಿನ ಸಮಸ್ಯೆ ಬಗೆಹರಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ.” “ಸಂಪುಟ ನಿರ್ಧಾರದ ನಂತರ, ಸರ್ಕಾರ ಆದೇಶ ಹೊರಡಿಸುತ್ತದೆ. ಅದರ ನಂತರ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗುತ್ತದೆ. 56,000 ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಸುವುದಾಗಿ ಸರ್ಕಾರ ಹೇಳಿದೆ.
ನನ್ನ ಇಲಾಖೆಯಲ್ಲಿ(ಗೃಹ ಇಲಾಖೆ) 8,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ನಾವು ತಕ್ಷಣ ಒಳ ಮೀಸಲಾತಿ ಅಳವಡಿಸಿಕೊಂಡು ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ” ಎಂದರು.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರ ಕೋರ್ ಕಮಿಟಿಯಲ್ಲಿ ಚರ್ಚೆ: ಬಿ ವೈ ವಿಜಯೇಂದ್ರ

ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಮುಂಬರುವ ಉಪಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ...

ಬೇರೆ ಪಕ್ಷದಿಂದ ವಲಸೆ ಬಂದವರಿಗೆ ಟಿಕೆಟ್ ನನಗೆ ಟಿಕೆಟ್ ನೀಡದೆ ಅನ್ಯಾಯ: ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ

ಹುಬ್ಬಳ್ಳಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಕಾರಣ ಬೇಸರವಾಗಿದೆ. ಹೀಗಾಗಿ...

ಎಸ್ ಸಿ ಒಳ ಮೀಸಲಾತಿಯ ಅನ್ವಯ ಖಾಲಿ ಹುದ್ದೆ ಭರ್ತಿ ಮಾಡುವಂತೆ ರಾಜ್ಯ ಸರಕಾರಕ್ಕೆ ಆಗ್ರಹ  ಬಿ ವೈ ವಿಜಯೇಂದ್ರ

ಖಾಲಿ ಹುದ್ದೆಗಳ ಭರ್ತಿಗೆ ಎಸ್‌ಸಿ ಒಳ ಮೀಸಲಾತಿಯನ್ನು ಪರಿಗಣಿಸಿಬೇಕು ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಎಂದು...

ದಾವಣಗೆರೆ ದಕ್ಷಿಣದಿಂದ ಎನ್ ಡಿಎ ಅಭ್ಯರ್ಥಿಯಾಗಿ ಮಹಿಮಾ ಪಟೇಲ್ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹೊಸ ತಿರುವು ಪಡೆದಿದ್ದು, ಬಿಹಾರ ಸಿಎಂ ನಿತೀಶ್...