ಪಾದರಕ್ಷೆ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ‌ ವಿವಾದದ ಸುಳಿಯಲ್ಲಿ ಬಾನು ಮುಷ್ತಾಕ್

4

ಮಂಡ್ಯ: ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ। ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರಕ್ಕೆ ಸಾಹಿತಿ ಬಾನು ಮುಷ್ತಾಕ್‌ ಪುಷ್ಪ ನಮನ ಸಲ್ಲಿಸಿದ್ದು ವಿವಾದಕ್ಕೆ ತಿರುಗಿದೆ.
ಚಪ್ಪಲಿ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲು ಬಾನು ಮುಷ್ತಾಕ್‌ ಮುಂದಾದಾಗ ಸಂಘಟಕರು ಚಪ್ಪಲಿ ಬಿಟ್ಟು ಬರುವಂತೆ ಮನವಿ ಮಾಡಿದರು.
ಅದಕ್ಕೆ ಬಾನು ಮುಷ್ತಾಕ್‌ ಒಪ್ಪಲಿಲ್ಲ. ಆದರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಪ್ಪಲಿ ಹೊಲೆಯುವುದು ನಮ್ಮ ವೃತ್ತಿ. ಚಪ್ಪಲಿ ನಮ್ಮ ಮನೆ ದೇವರು ಎಂದು ಸರ್ಮಥಿಸಿಕೊಂಡಿದ್ದಾರೆ.
ಅದು ನಮ್ಮ ಅಸ್ಮಿತೆಯ ಸಂಕೇತ. ನಾವು ಚಪ್ಪಲಿ ಹೊಲಿಯುವವರು. ನಮಗೆ ಅದರ ಬಗ್ಗೆ ಅಪಾರ ಗೌರವವಿದೆ ಎಂದು ಸಮರ್ಥನೆ ನೀಡಿದರು.

Leave a comment

Leave a Reply

Your email address will not be published. Required fields are marked *

Related Articles

ನಿಮ್ಮ ಮುಂದೆ ಅಧಿಕಾರ ಹಸ್ತಾಂತರ ಮಾತುಕತೆ ನಡೆದಿದೆ ಅಧಿಕಾರ ಬದಲಾವಣೆ ನಡೆಯುತ್ತದೋ ಇಲ್ಲವೋ ಸ್ಪಷ್ಟ ಪಡಿಸುವಂತೆ ಡಿ ಕೆ ಸಹೋದರ ಒತ್ತಡ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು...

ರಾಜ್ಯ ಸರಕಾರಕ್ಕೆ ತೀವ್ರ ಮುಖಭಂಗ ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ...

ಮಂಗಳೂರು ಚಿಲಿಂಬಿಯಲ್ಲಿರುವ ಮೋರ್ ಸೂಪರ್ ಮಾರ್ಕೆಟ್ ನಿಂದ ಗ್ರಾಹಕರಿಗೆ ಸೇವಾ ನ್ಯೂನ್ಯತೆ 35,000 ದಂಡ ವಿಧಿಸಿದ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ

ಮಂಗಳೂರಿನ ಚಿಲಿಂಬಿ ಯಲ್ಲಿರುವ ಮೊರ್ ಸೂಪರ್ ಮಾರ್ಕೆಟ್ ನಿಂದ ಸಾಮಾಜಿಕ ಹೋರಾಟಗಾರ ಶಶಿಧರ್ ಶೆಟ್ಟಿ ದಿನಬಳಕೆ...