ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ಟಿಎಂಸಿಯಲ್ಲಿ ಭುಗಿಲೆದ್ದ ಅಸಮಾಧಾನ

38

ಕೋಲ್ಕತ್ತಾ: ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ.
ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತಾ ಬ್ಯಾನರ್ಜಿ ಮತ್ತು ಬಂಗಾಳದ ಆಡಳಿತ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಮಂಗಳವಾರ 294 ವಿಧಾನಸಭಾ ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, 74 ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.
“ಟಿಕೆಟ್ ಸಿಗದವರು ತಪ್ಪಾಗಿ ಅರ್ಥಮಾಡಿಕೊಳ್ಳಬಾರದು. ಚುನಾವಣೆಯ ನಂತರ ಅವರಿಗೆ ಪಕ್ಷದಲ್ಲಿ ಇತರ ಜವಾಬ್ದಾರಿಗಳನ್ನು ನೀಡಲಾಗುವುದು” ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಅಭ್ಯರ್ಥಿಗಳ ಪಟ್ಟಿ ಘೋಷಣೆಯ ನಂತರ ಹೇಳಿದರು.
ಆದಾಗ್ಯೂ, ಈ ಶಾಸಕರಲ್ಲಿ ಹಲವಾರು ಜನಕ್ಕೆ ಪಕ್ಷ ತಮಗೆ ದ್ರೋಹ ಮಾಡಿದ ಭಾವನೆ ಇದೆ. ಜಲ್ಪೈಗುರಿಯ ರಾಜ್‌ಗಂಜ್‌ನಿಂದ ನಾಲ್ಕು ಬಾರಿ ತೃಣಮೂಲ ಕಾಂಗ್ರೆಸ್ ಶಾಸಕರಾಗಿರುವ ಖಗೇಶ್ವರ್ ರಾಯ್ ಅವರು ಟಿಕೆಟ್ ನಿರಾಕರಿಸಿದ ನಂತರ ಪಕ್ಷದ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಉತ್ತರ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ನ ದೀರ್ಘಕಾಲ ಸಂಘಟಕರಾಗಿರುವ ರಾಯ್ ಅವರ ಬದಲಿಗೆ 2018 ರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತೆ ಸ್ವಪ್ನಾ ಬರ್ಮನ್ ಅವರಿಗೆ ಟಿಕೆಟ್ ನೀಡಲಾಗಿದೆ
ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ತೊರೆದು ತೃಣಮೂಲ ಕಾಂಗ್ರೆಸ್ ಸ್ಥಾಪಿಸಿದ ಸಮಯದಿಂದ ನಾನು ಅವರೊಂದಿಗಿದ್ದೇನೆ. ಇಂದು ನಾನು ಹಣ ಬಲದಿಂದ ಸೋಲನುಭವಿಸಿದ್ದೇನೆ. ಯಾರೋ ಹಣ ನೀಡಿರಬೇಕು, ಅದಕ್ಕಾಗಿಯೇ ನನ್ನ ಹೆಸರನ್ನು ಕೈಬಿಡಲಾಗಿದೆ” ಎಂದು ರಾಜೀನಾಮೆ ಘೋಷಿಸಿದ ನಂತರ ರಾಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆದರೆ, ಬೇರೆ ರಾಜಕೀಯ ಪಕ್ಷ ಸೇರಬೇಕೆ ಬೇಡವೇ ಎಂದು ಇನ್ನೂ ನಿರ್ಧರಿಸಿಲ್ಲ ಎಂದು ರಾಯ್ ಹೇಳಿದರು. “ನಾನು ಪಕ್ಷಕ್ಕೆ ರಾಜೀನಾಮೆ ಪತ್ರ ಕಳುಹಿಸಿದ್ದೇನೆ. ನಾಯಕತ್ವ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡೋಣ” ಎಂದಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ...

ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು...