ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

22

ಬೆಂಗಳೂರು: ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ  ಇಂದು ಯುಗಾದಿ ಹಬ್ಬದಂದೇ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಹುಲಿ ಮತ್ತು ಹೊಸ ಮುಖಕ್ಕೆ ಅವಕಾಶ ನೀಡಿದೆ. ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ,ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ. ದಾವಣಗೆರೆ ರೆಬೆಲ್ ಬಣದ ಅಭ್ಯರ್ಥಿಗೆ ಬಿಜೆಪಿ ಮಣೆ ಹಾಕಿದೆ.
ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನ ನಂತರ ಉಪ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್ನಲ್ಲಿ ಭಾರೀ ಗದ್ದಲ ಉಂಟಾಗಿದೆ.
ದಾವಣಗೆರೆ ದಕ್ಷಿಣದಲ್ಲಿ ಜಾತಿ ಲೆಕ್ಕಾಚಾರದಲ್ಲಿ ತಂತ್ರವನ್ನು ಬಿಜೆಪಿ ಹೆಣೆದಿದೆ. ಎಸ್‌ಟಿ ಸಮುದಾಯದ ಟಿ.ಶ್ರೀನಿವಾಸದಾಸ ಕರಿಯಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಅಹಿಂದ ಮತ್ತು ಲಿಂಗಾಯತ ವರ್ಗದ ಮತಗಳ ಮೇಲೆ ಪಕ್ಷ ಕಣ್ಣಿಟ್ಟಿದೆ.

Leave a comment

Leave a Reply

Your email address will not be published. Required fields are marked *

Related Articles

ಮೂರು ವರ್ಷಗಳ ಬಳಿಕ ಇಂದು ಶೃಂಗೇರಿ ನೂತನ ಶಾಸಕರಾಗಿ ಡಿ ಎನ್ ಜೀವರಾಜ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕೊನೆಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಇಂದು ಡಿ ಎನ್ ಜೀವರಾಜ್ ಪ್ರಮಾಣ ವಚನ...

ಶೃಂಗೇರಿ ಮರುಮತ ಎಣಿಕೆ ಪ್ರಕರಣ ಅಂಚೆ ಮತಗಳಲ್ಲಿ ಅಕ್ರಮ ಆರೋಪ ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ  ಎಫ್ಐಆರ್ ದಾಖಲು

“ಚಿಕ್ಕಮಗಳೂರು ಶೃಂಗೇರಿ ಮತ ಎಣಿಕೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಅಂಚೆ ಮತಗಳಲ್ಲಿ ಅಕ್ರಮ ಆರೋಪದ...

52 ಮತಗಳಿಂದ ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು, ನೂತನ ಶಾಸಕರಾಗಿ ಘೋಷಣೆ..

ಬೆಂಗಳೂರು: ಹೈಕೋರ್ಟ್‌ ಆದೇಶದಂತೆ ನಡೆದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ, ಕಾಂಗ್ರೆಸ್ ಶಾಸಕ...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು, ಅಧಿಕೃತ ಆದೇಶ ಯೋಗೇಶ್ ಗೌಡ ಕೊಲೆ ಪ್ರಕರಣ ಶಿಕ್ಷೆ ಹಿನ್ನಲೆ

ಬೆಂಗಳೂರು: ಧಾರವಾಡದ ಬಿಜೆಪಿ ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ...