ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

42
ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ ಹತ್ಯೆಮಾಡಿರುವ ಘಟನೆ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದಿದೆ.
ಡಿಜೆ ಹಳ್ಳಿಯ ಈರುಳ್ಳಿ ಮಾರ್ಕೆಟ್ನಲ್ಲಿ ಕೆಲಸ ಮಾಡ್ತಿದ್ದ ಸೈಯದ್ ಶಬೀಲ್ ಈ ಕೃತ್ಯ ಎಸಗಿದ್ದಾನೆ. ಕೋಲಾರ ಮೂಲದ ಅಪ್ರಾಪ್ತೆ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಸೈಯದ್ ಆಕೆ ಜೊತೆ ಸುತ್ತಾಡಿಕೊಂಡಿದ್ದನು. ಈ ವಿಷಯ ತಿಳಿದು ಪೋಷಕರು ಇಬ್ಬರಿಗೂ 2025 ಜೂನ್ ನಲ್ಲಿ ಎಂಗೇಜ್ಮೆಂಟ್ ಮಾಡಿದ್ದರು.
ನಿಶ್ಚಿತಾರ್ಥವಾದ ನಂತರ ಸೈಯದ್ ಗೆ ಭಾವಿ ಪತ್ನಿ ಮೇಲೆ ಅನುಮಾನ ಮೂಡತೊಡಗಿದೆ. ಹೀಗಾಗಿ ಡಿಜೆ ಹಳ್ಳಿಯಿಂದ ಸ್ವಲ್ಪ ದೂರದ ಸಕ್ಕರೆ ಮಂಡಿಯಲ್ಲಿ ಸಂಬಂಧಿಕರ ಪಾಳು ಬಿದ್ದ ಜಾಗಕ್ಕೆ ಹುಡುಗಿಯನ್ನು ಕರೆಸಿಕೊಂಡಿದ್ದಾನೆ. ಆಕೆ ಮನೆಯಲ್ಲಿಯೇ ಮೊಬೈಲ್ ಬಿಟ್ಟು ಹೋಗಿದ್ದಳು.
ಎಷ್ಟೇ ಸಮಯ ಕಳೆದರೂ ಬಾಲಕಿ ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಕೊನೆಗೆ ಇಬ್ಬರೂ ಭೇಟಿಯಾಗುತ್ತಿದ್ದ ಜಾಗಕ್ಕೆ ಹೋಗಿ ನೋಡಿದಾಗ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಅಪ್ರಾಪ್ತೆ ಶವ ಪತ್ತೆಯಾಗಿತ್ತು.
ಆಕೆಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು, ದೇಹದ ಮೇಲೆಲ್ಲ 17 ಬಾರಿ ಚುಚ್ಚಿ ಕ್ರೌರ್ಯ ಮೆರೆದಿದ್ದಾನೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು ನೂತನ ಸಚಿವರ ಸಂಭಾವ್ಯ ಖಾತೆಗಳ ಪಟ್ಟಿ

“ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್...

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ಡಿಸಿಸಿ ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳ ವೇಳೆ ನಾಯಕರು ಪಕ್ಷಾಂತರ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕುವ...

ಉಡುಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ:ಶಾಸಕಮಂಜುನಾಥ ಭಂಡಾರಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ...