ಅಸ್ಸಾಂ ಚುನಾವಣೆ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್

28

ಕರ್ನಾಟಕದ ನಂತರ ಕಾಂಗ್ರೆಸ್ ಇದೀಗ ಅಸ್ಸಾಂ ಚುನಾವಣೆಗೂ ಐದು ಗ್ಯಾರಂಟಿಗಳನ್ನು ಘೋಷಿಸಿದ್ದು, ಮಹಿಳೆಯರಿಗೆ ಮಾಸಿಕ ನಗದು ವರ್ಗಾವಣೆ ಮಾಡುವುದಾಗಿ ಭರವಸೆ ನೀಡಿದೆ. ಅಸ್ಸಾಂ ಲಖಿಂಪುರ ಜಿಲ್ಲೆಯ ನೌಬೋಯಿಚಾದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ತಮ್ಮ ಪಕ್ಷದ “ಐದು ಗ್ಯಾರಂಟಿಗಳನ್ನು” ಘೋಷಿಸಿದರು.

ಇದರಲ್ಲಿ ಮಹಿಳೆಯರ ಕಲ್ಯಾಣ, ಎಲ್ಲರಿಗೂ ಆರೋಗ್ಯ ರಕ್ಷಣೆ, ಭೂ ಹಕ್ಕು ಮತ್ತು ನ್ಯಾಯದ ಮೇಲೆ ಗಮನ ಕೇಂದ್ರೀಕರಿಸಲಾಗಿದೆ. ಇದೇ ವೇಳೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಅಸ್ಸಾಂ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ ಮತ್ತು ಅದರ ನಾಯಕರು ಹಾಗೂ ಅವರ ಕುಟುಂಬಗಳ “ಖಜಾನೆ ತುಂಬುವ” ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಮಹಿಳೆಯರಿಗೆ ಮಾಸಿಕ ನಗದು ವರ್ಗಾವಣೆ ಮತ್ತು ವ್ಯವಹಾರ ಆರಂಭಿಸಲು ಅಥವಾ ವಿಸ್ತರಿಸಲು ಇಚ್ಛಿಸುವ ಮಹಿಳೆಯರಿಗೆ ಹೆಚ್ಚುವರಿ 50,000 ರೂ. ಸಹಾಯ ಸೇರಿದಂತೆ ಪಕ್ಷದ ‘ಐದು ಗ್ಯಾರಂಟಿಗಳನ್ನು’ ಬಿಡುಗಡೆ ಮಾಡಿದರು. “ನಮ್ಮ ನಗದು ವರ್ಗಾವಣೆ ಬೇಷರತ್ತಾಗಿರುತ್ತದೆ.

ಬಿಜೆಪಿ ಸರ್ಕಾರ ಮಾಡುವಂತೆ, ಮಹಿಳೆಯರು ತಮ್ಮ ಪಕ್ಷದ ಸದಸ್ಯರಾಗಬೇಕು ಎಂಬ ಷರತ್ತು ಇರುವುದಿಲ್ಲ” ಎಂದು ಅವರು ಹೇಳಿದರು. ರಾಜ್ಯದ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ. ನಗದು ರಹಿತ ಆರೋಗ್ಯ ವಿಮೆ, 10 ಲಕ್ಷ ಸ್ಥಳೀಯ ಜನರಿಗೆ ಶಾಶ್ವತ ಭೂ ಪಟ್ಟಾ ಮತ್ತು ರಾಜ್ಯದ ಹಿರಿಯ ನಾಗರಿಕರಿಗೆ ತಿಂಗಳಿಗೆ 1,250 ರೂ. ನೀಡುವುದಾಗಿ ಖರ್ಗೆ ಭರವಸೆ ನೀಡಿದರು.

“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 100 ದಿನಗಳಲ್ಲಿ ಜುಬೀನ್ ಗರ್ಗ್ ಸಾವಿನ ಪ್ರಕರಣದ ಕುರಿತು ತನಿಖೆ ನಡೆಸಿ, ನ್ಯಾಯ ಒದಗಿಸುವುದಾಗಿ ನಾವು ಪ್ರತಿಜ್ಞೆ ಮಾಡುತ್ತೇವೆ” ಎಂದು ಖರ್ಗೆ ಹೇಳಿದರು.

Leave a comment

Leave a Reply

Your email address will not be published. Required fields are marked *

Related Articles

ಕುಂಭಮೇಳ ವೈರಲ್ ಯುವತಿ ಮೊನಾಲಿಸಾ ದಂಪತಿಗಳಿಗೆ ನೀಡಿದ್ದ ಪೊಲೀಸ್ ರಕ್ಷಣೆಯನ್ನು ಹಿಂಪಡೆದುಕೊಂಡ ಕೇರಳ ಹೈ ಕೋರ್ಟ್

“ಕೊಚ್ಚಿ: ಕುಂಭಮೇಳ 2025 ರಲ್ಲಿ ಸಾಕಷ್ಟು ವೈರಲ್‌ ಆಗಿದ್ದ ಯುವತಿ ಮೊನಾಲಿಸಾ ಭೋಸ್ಲೆ ಹಾಗೂ ಆಕೆಯ...

ಆಸ್ಟ್ರೇಲಿಯಾ ಭೇಟಿಗೂ ಮುನ್ನ ಭಾರತ ಪ್ರಧಾನಿ  ನರೇಂದ್ರ ಮೋದಿರವರಿಗೆ  ಕೊಲೆ ಬೆದರಿಕೆ ಪೋಸ್ಟ್

“ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೆಲ್ಬೋರ್ನ್ ಭೇಟಿಗೂ ಮುನ್ನ ಅವರಿಗೆ ಆನ್‌ಲೈನ್‌ ಮೂಲಕ ಕೊಲೆ...

ಸಿಂಧು ಜಲ ಒಪ್ಪಂದ ದುರ್ಬಲಗೊಂಡರೆ ವ್ಯವಸ್ಥೆಯೇ ಕುಸಿಯಲಿದೆ’ ದಯಮಾಡಿ ನೆರವು ನೀಡಿ ಜಗತ್ತಿಗೆ ಪಾಕಿಸ್ತಾನ ಮನವಿ

ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವೆ ಸಿಂಧು ನದಿ ಜಲ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದ ಉದ್ವಿಗ್ನತೆ...

ರಾಷ್ಟ್ರಪತಿ ಕಛೇರಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ  ಮಲ್ಲಿಕಾರ್ಜುನ ಖರ್ಗೆ

ರಾಷ್ಟ್ರಪತಿ ಕಛೇರಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ  ದಿನಾಂಕ 29.06.2026 ರಂದು...