ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಕರಪತ್ರ ಹಂಚಿಕೆ ಆರೋಪ ಇಬ್ಬರು ಪೊಲೀಸ್ ಅಧಿಕಾರಿಗಳ ವರ್ಗಾವಣೆ

3

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ  ಎನ್ ಎಸ್ ಯುಐ ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು.

ಹೀಗಾಗಿ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಬಾಗಲಕೋಟೆಯ ಕುಮಾರೇಶ್ವರ ಕ್ಯಾಂಪಸ್ನಲ್ಲಿ ಕರಪತ್ರ ಹಿಡಿದು ಬಂದಿದ್ದ ಎನ್ ಎಸ್ ಯುಐ ಕಾರ್ಯಕರ್ತರು ಹಾಗೂ ಬಿಜೆಪಿಯ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು.
ಬಳಿಕ ಐವರು  ಎನ್ ಎಸ್ ಯು ಐ ಕಾರ್ಯಕರ್ತರನ್ನು ಪೊಲೀಸರು ಠಾಣೆಗೆ ಕರೆ ತಂದು ವಿಚಾರಣೆ ನಡೆಸಲಾಗಿತ್ತು. ಇದೀಗ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆ ಸಿಪಿಐ ವಿಜಯ ಮುರಗುಂಡಿ ಮತ್ತು ನವನಗರ ಪೊಲೀಸ್ ಠಾಣೆ ಪಿಎಸ್ಐ ಅಶೋಕ ಚೌಹಾಣ್ರನ್ನು ವರ್ಗಾವಣೆ ಮಾಡಿ ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.
ವಿಜಯಪುರ ಮಹಿಳಾ ಠಾಣೆಗೆ ಸಿಪಿಐ ವಿಜಯ ಮುರಗುಂಡಿ ಅವರನ್ನ ವರ್ಗಾವಣೆ ಮಾಡಲಾಗಿದ್ದರೆ ಬೆಳಗಾವಿ ಉತ್ತರ ವಲಯ ಐಜಿಪಿ ಕಚೇರಿಗೆ ಪಿಎಸ್ ಐ ಅಶೋಕ್ ಅವರನ್ನು ವರ್ಗಾವಣೆ ಮಾಡಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್: ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು: 2018ರ ವಿಧಾನಸಭೆ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಕ್ಷೇತ್ರದ...

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆ ಕಣ; ಬಿಸಿಲಿನ ತಾಪದ ಜೊತೆಗೆ ಬಿಜೆಪಿ-ಕಾಂಗ್ರೆಸ್ ಬಿರುಸಿನ ಪ್ರಚಾರ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳು ಪ್ರತಿಷ್ಠೆಯ ಜೊತೆಗೆ ಪರಸ್ಪರ ಆರೋಪ-ಪ್ರತ್ಯಾರೋಪಗಳ...

7 ನ್ಯಾಯಾಂಗ ಅಧಿಕಾರಿಗಳನ್ನು 9 ಗಂಟೆ ಒತ್ತೆಯಾಳಾಗಿಸಿದ ಉದ್ರಿಕ್ತರು; ಮಮತಾ ಬ್ಯಾನರ್ಜಿ ವಿರುದ್ಧ ನ್ಯಾಯಮೂರ್ತಿ ಸೂರ್ಯಕಾಂತ್ ಆಕ್ರೋಶ

ನವದೆಹಲಿ: ಪಶ್ಚಿಮ ಬಂಗಾಳದ ಮಾಲ್ಡಾದ ಕಲಿಯಾಚಕ್‌ನಲ್ಲಿ ಗಲಭೆ ಭುಗಿಲೆದ್ದಿದೆ. 7 ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಲಾಗಿದೆ....

ಬಾಗಲಕೋಟೆ ಉಪಚುನಾವಣೆ ನಮ್ಮ ಪರವಾಗಿ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರಚಾರಕ್ಕೆ ಕರೆತರುವಂತೆ ಮನವಿ ಮಾಡಿದ ಬಿಜೆಪಿ ಅಭ್ಯರ್ಥಿ

ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಪರ ಪ್ರಚಾರಕ್ಕೆ...