ಮಣಿಪುರದಲ್ಲಿ ಮತ್ತೆ ಹಿಂಸಾಚಾರ 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ ಪೊಲೀಸ್ ಠಾಣೆಗೆ ಬೆಂಕಿ ಪ್ರತಿಭಟನೆ ಸಿಆರ್ ಪಿಎಫ್ ಫೈರಿಂಗ್

2
ಇಂಫಾlಲ್: ಮಣಿಪುರ ಸರ್ಕಾರ ಐದು ಕಣಿವೆ ಜಿಲ್ಲೆಗಳಲ್ಲಿ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿ ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಮೂರು ದಿನಗಳ ಕಾಲ ಸ್ಥಗಿತಗೊಳಿಸಿದೆ. ಗೃಹ ಆಯುಕ್ತ ಎನ್. ಅಶೋಕ್ ಕುಮಾರ್, ಮಂಗಳವಾರದಿಂದ ಐದು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ನಿಷೇಧಿಸುವ ಆದೇಶಕ್ಕೆ ಸಹಿ ಹಾಕಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.


ಮಣಿಪುರದ ಐದು ಜಿಲ್ಲೆಗಳಾದ ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್, ಕಾಕ್ಚಿಂಗ್ ಮತ್ತು ಬಿಷ್ಣುಪುರಗಳಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ತಪ್ಪು ಮಾಹಿತಿ ಮತ್ತು ವದಂತಿಗಳನ್ನು ತಡೆಗಟ್ಟಲು… ಈ ಐದು ಜಿಲ್ಲೆಗಳಲ್ಲಿ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿ ಮತ್ತು ವಿಪಿಎನ್ ಸೇವೆಗಳು ಸೇರಿದಂತೆ ಇಂಟರ್ನೆಟ್ ಸೇವೆಗಳು ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ.
ನಿನ್ನೆ ರಾತ್ರಿ ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮಕ್ಕಳ ತಾಯಿ ಗಾಯಗೊಂಡಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಸ್ಥಳೀಯರು ಇಂದು ಬೆಳಿಗ್ಗೆ ಪ್ರತಿಭಟನೆ ನಡೆಸಿ, ಪ್ರದೇಶದ ಪೆಟ್ರೋಲ್ ಪಂಪ್ ಬಳಿ ಎರಡು ತೈಲ ಟ್ಯಾಂಕರ್‌ಗಳು ಮತ್ತು ಒಂದು ಟ್ರಕ್‌ಗೆ ಬೆಂಕಿ ಹಚ್ಚಿದರು.
ಮೊಯಿರಾಂಗ್ ಪೊಲೀಸ್ ಠಾಣೆಯ ಮುಂದೆ ಟೈರ್‌ಗಳನ್ನು ಸುಟ್ಟು ಪ್ರತಿಭಟಿಸಿದ್ದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರದೇಶದಲ್ಲಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದು ಫೈರಿಂಗ್ ನಲ್ಲಿ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೊಯಿರಾಂಗ್ ಟ್ರೋಂಗ್ಲಾಬಿ ಪ್ರದೇಶದ ಮನೆಯೊಂದರ ಮೇಲೆ ಶಂಕಿತ ಉಗ್ರಗಾಮಿಗಳು ಬಾಂಬ್ ಎಸೆದಿದ್ದರು. ದಾಳಿಯಲ್ಲಿ ಐದು ವರ್ಷದ ಬಾಲಕ ಮತ್ತು ಆರು ತಿಂಗಳ ಮಗು ಮೃತಪಟ್ಟಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
. ಮುಖ್ಯಮಂತ್ರಿ ವೈ. ಖೇಮ್‌ಚಂದ್ ಸಿಂಗ್ ಈ ದಾಳಿಯನ್ನು ಅನಾಗರಿಕ ಕೃತ್ಯ ಎಂದು ಹೇಳಿದ್ದಾರೆ. ದಾಳಿಗೆ ಕಾರಣರಾದವರನ್ನು ಗುರುತಿಸಿ ಕಾನೂನಿನಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜನರಿಗೆ ಭರವಸೆ ನೀಡಿದರು.

Leave a comment

Leave a Reply

Your email address will not be published. Required fields are marked *

Related Articles

ಅಸ್ಸಾಂ ಚುನಾವಣೆ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್

ಕರ್ನಾಟಕದ ನಂತರ ಕಾಂಗ್ರೆಸ್ ಇದೀಗ ಅಸ್ಸಾಂ ಚುನಾವಣೆಗೂ ಐದು ಗ್ಯಾರಂಟಿಗಳನ್ನು ಘೋಷಿಸಿದ್ದು, ಮಹಿಳೆಯರಿಗೆ ಮಾಸಿಕ ನಗದು...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೊರಡಿಸಿದ ಆದೇಶ ಪ್ರಶ್ನಿಸಿದವರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮದ ಎಚ್ಚರಿಕೆ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರು ಹೊರಡಿಸಿದ ಆದೇಶವನ್ನು ಪ್ರಶ್ನಿಸುವ ಪ್ರಯತ್ನವನ್ನು...

ಬಳಕೆಯಾಗದೆ ಉಳಿದ ಮೊಬೈಲ್ ಇಂಟರ್ನೆಟ್ ಡೇಟಾ ಮರುದಿನ ಬಳಕೆಗೆ ರೋಲ್ ಓವರ್ ಮಾಡಿ: ಟೆಲಿಕಾಂ ಕಂಪನಿಗಳಿಗೆ ರಾಘವ್ ಚಡ್ಡಾ ಆಗ್ರಹ

ನವದೆಹಲಿ: ಬಳಕೆಯಾಗದೆ ಉಳಿಯುವ ಇಂಟರ್ನೆಟ್ ಡೇಟಾವನ್ನು ಮರುದಿನ ಬಳಸಲು ಟೆಲಿಕಾಂ ಕಂಪನಿಗಳು ಅನುಮತಿ ನೀಡಬೇಕು, ಆ...

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಸಂದರ್ಭದಲ್ಲಿ ಮೋದಿ ಸರಕಾರದ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ...