ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

39

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ ಸರಕಾರಿ ಜಮೀನಿನಲ್ಲಿ ಖಾಸಗಿ ಮನೆ ನಿರ್ಮಾಣ ನಡೆಸಿ ಇದೀಗ ಅದಕ್ಕೆ ಬೇಕಾದ ಎಲ್ಲಾ ಅನುಮತಿಯನ್ನು ಸಂಬಂಧಪಟ್ಟ ಅಧಿಕಾರಿಗಳು ನೀಡಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತರಾದ ನವೀನ್ ಪೆರ್ಡೂರ್ ರವರುಉಡುಪಿ ತಹಶೀಲ್ದಾರ್ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಪಿಡಿಓ ಎಲ್ಲರ ಗಮನಕ್ಕೆ ತಂದುರು ಕೂಡ ಯಾವುದೇ ಪ್ರಯೋಜನವಾಗಿಲ್ಲದ ಕಾರಣ ಈಗ ಲೋಕಾಯುಕ್ತ ಹಾಗೂ ಉಡುಪಿ ನ್ಯಾಯಾಲಯದ ಮೊರೆ ಹೋಗುವ ನಿಟ್ಟಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಹೋರಾಟಕ್ಕೆ ಸಿದ್ದರಾಗಿದ್ದಾರೆ

ಉಡುಪಿ ತಾಲೂಕು, ಪೆರ್ಡೂರು ಗ್ರಾಮದ ಅಡಪಾಡಿ ಎಂಬಲ್ಲಿನ ಕೋರೆಮಾರು ರಸ್ತೆಯ ಬದಿಯ ದಿ. ಶುಂಭು ಆಚಾರ್ಯ ಅವರ ಮನೆಯ ಬಳಿ ಸ.ನಂ.254ರ ಹತ್ತಿರ ಯಾರೋ ವ್ಯಕ್ತಿಗಳು ಅನಧಿಕೃತವಾಗಿ ಯಾವುದೇ ಲೈಸನ್ಸ್ ಇನ್ನಿತರ ಅನುಮತಿಗಳನ್ನು ಪಡೆಯದೆ ಸರಕಾರಿ ಜಾಗವನ್ನು ಒತ್ತುವರಿ ಮಾಡಿ ಅಕ್ರಮವಾಗಿ ಕಟ್ಟಡವನ್ನು ನಿರ್ಮಿಸುತ್ತಿದ್ದು, ಸದ್ರಿ ಕಟ್ಟಡದ ನಿರ್ಮಾಣ ಕಾರ್ಯವು ಅಂತಿಮ ಹಂತದಲ್ಲಿದೆ

ಸದ್ರಿ ಅಕ್ರಮ ಕಟ್ಟಡ ನಿರ್ಮಾಣದ ಕುರಿತು ಅನುಮಾನವಿದ್ದು, ಸರಿ ಅಕ್ರಮ ಕಟ್ಟಡ ನಿರ್ಮಾಣದ ಕುರಿತು ಕಾನೂನು ಕ್ರಮ ಕೈಗೊಳ್ಳುವುದು ಅವಶ್ಯಕತೆ ಆಗಿರುತ್ತದೆ.

ಆದ್ದರಿಂದ ಸದ್ರಿ ಕಟ್ಟಡದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳುವರೇ ಪೆರ್ಡೂರು ಗ್ರಾಮ ಪಂಚಾಯತ್‌ పి.డి.ఓ./గ్రామ ಲೆಕ್ಕಾಧಿಕಾರಿಯವರ ಮೂಲಕ ಸ್ಥಳ ಪರಿಶೀಲಿಸಿ ವರದಿ ಪಡೆದುಕೊಂಡು ದಾಖಲೆ ಪರಿಶೀಲಿಸಿ ತಪ್ಪಿಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...