ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ ಸರಕಾರಿ ಜಮೀನಿನಲ್ಲಿ ಖಾಸಗಿ ಮನೆ ನಿರ್ಮಾಣ ನಡೆಸಿ ಇದೀಗ ಅದಕ್ಕೆ ಬೇಕಾದ ಎಲ್ಲಾ ಅನುಮತಿಯನ್ನು ಸಂಬಂಧಪಟ್ಟ ಅಧಿಕಾರಿಗಳು ನೀಡಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತರಾದ ನವೀನ್ ಪೆರ್ಡೂರ್ ರವರುಉಡುಪಿ ತಹಶೀಲ್ದಾರ್ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಪಿಡಿಓ ಎಲ್ಲರ ಗಮನಕ್ಕೆ ತಂದುರು ಕೂಡ ಯಾವುದೇ ಪ್ರಯೋಜನವಾಗಿಲ್ಲದ ಕಾರಣ ಈಗ ಲೋಕಾಯುಕ್ತ ಹಾಗೂ ಉಡುಪಿ ನ್ಯಾಯಾಲಯದ ಮೊರೆ ಹೋಗುವ ನಿಟ್ಟಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಹೋರಾಟಕ್ಕೆ ಸಿದ್ದರಾಗಿದ್ದಾರೆ

ಉಡುಪಿ ತಾಲೂಕು, ಪೆರ್ಡೂರು ಗ್ರಾಮದ ಅಡಪಾಡಿ ಎಂಬಲ್ಲಿನ ಕೋರೆಮಾರು ರಸ್ತೆಯ ಬದಿಯ ದಿ. ಶುಂಭು ಆಚಾರ್ಯ ಅವರ ಮನೆಯ ಬಳಿ ಸ.ನಂ.254ರ ಹತ್ತಿರ ಯಾರೋ ವ್ಯಕ್ತಿಗಳು ಅನಧಿಕೃತವಾಗಿ ಯಾವುದೇ ಲೈಸನ್ಸ್ ಇನ್ನಿತರ ಅನುಮತಿಗಳನ್ನು ಪಡೆಯದೆ ಸರಕಾರಿ ಜಾಗವನ್ನು ಒತ್ತುವರಿ ಮಾಡಿ ಅಕ್ರಮವಾಗಿ ಕಟ್ಟಡವನ್ನು ನಿರ್ಮಿಸುತ್ತಿದ್ದು, ಸದ್ರಿ ಕಟ್ಟಡದ ನಿರ್ಮಾಣ ಕಾರ್ಯವು ಅಂತಿಮ ಹಂತದಲ್ಲಿದೆ

ಸದ್ರಿ ಅಕ್ರಮ ಕಟ್ಟಡ ನಿರ್ಮಾಣದ ಕುರಿತು ಅನುಮಾನವಿದ್ದು, ಸರಿ ಅಕ್ರಮ ಕಟ್ಟಡ ನಿರ್ಮಾಣದ ಕುರಿತು ಕಾನೂನು ಕ್ರಮ ಕೈಗೊಳ್ಳುವುದು ಅವಶ್ಯಕತೆ ಆಗಿರುತ್ತದೆ.

ಆದ್ದರಿಂದ ಸದ್ರಿ ಕಟ್ಟಡದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳುವರೇ ಪೆರ್ಡೂರು ಗ್ರಾಮ ಪಂಚಾಯತ್ పి.డి.ఓ./గ్రామ ಲೆಕ್ಕಾಧಿಕಾರಿಯವರ ಮೂಲಕ ಸ್ಥಳ ಪರಿಶೀಲಿಸಿ ವರದಿ ಪಡೆದುಕೊಂಡು ದಾಖಲೆ ಪರಿಶೀಲಿಸಿ ತಪ್ಪಿಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದ್ದಾರೆ

Leave a comment