ಹೊರ್ಮುಜ್ ಜಲಸಂಧಿ ಕದನ ವಿರಾಮದ ತಪ್ಪು ತಿಳುವಳಿಕೆಯಿಂದ ಅನುಮತಿ ಇಲ್ಲದೆ ಬಂದರೆ ನಿಮ್ಮ ಸರಕು ಸಾಗಾಣಿಕ ಹಡಗುಗಳನ್ನು ಹೊಡೆದುರುಳಿಸ್ತೀವಿ:: ಇರಾನ್ ಎಚ್ಚರಿಕೆ

1

ಟೆಹ್ರಾನ್: ಕದನ ವಿರಾಮ ಘೋಷಣೆಯಾಗಿದೆ ಎಂದು ಇಡೀ ಜಗತ್ತು ಖುಷಿ ಪಡ್ತಿದ್ರೆ… ಅದ್ಯಾಕೋ ಇರಾನ್ ಯುದ್ಧ ಸದ್ಯಕ್ಕಂತೂ ನಿಲ್ಲುವ ಲಕ್ಷಣಗಳೇ ಕಾಣ್ತಿಲ್ಲ.. ಹೌದು.. ಅಮೆರಿಕ-ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾದ ಮೇಲೂ ಮಧ್ಯಪ್ರಾಚ್ಯದಲ್ಲಿ ಕ್ಷಿಪಣಿ ಮತ್ತು ಬಾಂಬ್ ಗಳ ಸದ್ದು ಕಡಿಮೆಯಾಗ್ತಿಲ್ಲ
, ಒಂದೆಡೆ ಲೆಬೆನಾನ್ ಮೇಲೆ ಇಸ್ರೇಲ್ ಸೇನೆ ಇನ್ನಿಲ್ಲದಂತೆ ದಾಳಿ ಮಾಡುತ್ತಿದ್ದು ಕೇವಲ 10 ನಿಮಿಷಗಳ ಅವಧಿಯಲ್ಲಿ 100ಕ್ಕೂ ಕ್ಷಿಪಣಿ ಸಿಡಿಸಿ ಭಾರಿ ಅನಾಹುತವನ್ನೇ ಮಾಡಿದೆ. ಈ ದಾಳಿಯಲ್ಲಿ ಕನಿಷ್ಟ 250 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗ್ತಿದೆ. ಇದರ ನಡುವೆಯೇ ಬುಧವಾರ, ಇರಾನ್ ನೌಕಾಪಡೆಯು ಹಾರ್ಮುಜ್ ಜಲಸಂಧಿಯ ಬಳಿಯ ಹಡಗುಗಳಿಗೆ ಟೆಹ್ರಾನ್‌ನ ಅನುಮತಿ ಇನ್ನೂ ಅಗತ್ಯವಿದೆ ಎಂದು ತಿಳಿಸಿ ಜಗತ್ತಿಗೆ ಮತ್ತೊಂದು ಶಾಕ್ ನೀಡಿದೆ.
ವಾಲ್ ಸ್ಟ್ರೀಟ್ ಜರ್ನಲ್‌ನ ವರದಿಯ ಪ್ರಕಾರ, ಅನುಮತಿಯಿಲ್ಲದೆ ಹಾರ್ಮುಜ್ ಜಲಸಂಧಿ ಮೂಲಕ ಹಾದುಹೋಗಲು ಪ್ರಯತ್ನಿಸುವ ಯಾವುದೇ ಹಡಗನ್ನು ಇರಾನ್ ಸೇನೆ ಹೊಡೆದುರುಳಿಸಲಿದೆ ಎಂದು ಇರಾನ್ ನೌಕಾಪಡೆಯು ರೇಡಿಯೋ ಮೂಲಕ ಹಡಗುಗಳಿಗೆ ಎಚ್ಚರಿಕೆ ನೀಡಿದೆ ಎಂದು ವರದಿ ಮಾಡಿದೆ. “ಜಲಸಂಧಿಯ ಮೂಲಕ ಹಾದುಹೋಗಲು ನೀವು ಇರಾನಿನ ಸೆಪಾ ನೌಕಾಪಡೆಯಿಂದ ಅನುಮತಿ ಪಡೆಯಬೇಕು. ಯಾವುದೇ ಹಡಗು ಅನುಮತಿಯಿಲ್ಲದೆ ಸಾಗಲು ಪ್ರಯತ್ನಿಸಿದರೆ, ಅದನ್ನು ನಾಶಪಡಿಸಲಾಗುತ್ತದೆ ಎಂದು ನೌಕೆಗಳಿಗೆ ಎಚ್ಚರಿಕೆ ರವಾನೆ ಮಾಡಲಾಗಿದೆ.
ನಿನ್ನೆಯಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಸಂಪೂರ್ಣ, ತಕ್ಷಣದ ಮತ್ತು ಸುರಕ್ಷಿತ” ರೀತಿಯಲ್ಲಿ ಜಲಸಂಧಿಯನ್ನು ತೆರೆದರೆ ಮಾತ್ರ ಇಸ್ಲಾಮಿಕ್ ಗಣರಾಜ್ಯದ ಮೇಲಿನ ದಾಳಿಯನ್ನು ಎರಡು ವಾರಗಳವರೆಗೆ ಸ್ಥಗಿತಗೊಳಿಸಲು ಒಪ್ಪಿಕೊಂಡಿದ್ದೇನೆ ಎಂದು ಹೇಳಿದ ನಂತರ ಇರಾನ್ ನಿಂದ ಈ ಎಚ್ಚರಿಕೆ ಸಂದೇಶ ಬಂದಿದೆ.ಹಾರ್ಮುಜ್ ನಲ್ಲಿ ಟ್ರಾಫಿಕ್ ಜಾಮ್ ಇನ್ನು ಇರಾನ್ ಯುದ್ಧದ ಹಿನ್ನಲೆಯಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿನ ಹಡಗುಗಳು ನಿಂತಿವೆ. ಇರಾನ್ ಇನ್ನೂ ಹಾರ್ಮುಜ್ ಜಲಸಂಧಿಯ ಮೇಲೆ ಪ್ರಭಾವ ಬೀರಲು ಉದ್ದೇಶಿಸಿದೆ ಮತ್ತು ಯುದ್ಧವಿಮಾನಗಳು ಇನ್ನೂ ಪರ್ಷಿಯನ್ ಕೊಲ್ಲಿಯ ಮೇಲೆ ಇವೆ ಎಂದು ಸಿಬ್ಬಂದಿ ಹಂಚಿಕೊಂಡ ಫೋಟೋಗಳು ಮತ್ತು ವೀಡಿಯೊಗಳ ಪ್ರಕಾರ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.
ಇರಾನ್ ಮತ್ತು ಒಮನ್ ನಡುವೆ ಕೇವಲ 34 ಕಿಲೋಮೀಟರ್ (21 ಮೈಲುಗಳು) ಅಗಲವಿರುವ ಈ ಜಲಸಂಧಿಯು ಕೊಲ್ಲಿಯಿಂದ ಹಿಂದೂ ಮಹಾಸಾಗರಕ್ಕೆ ಸಾಗಣೆಯನ್ನು ಒದಗಿಸುತ್ತದೆ ಮತ್ತು ಇದು ವಿಶ್ವದ ತೈಲ ಪೂರೈಕೆಯ ಐದನೇ ಒಂದು ಭಾಗ ಮತ್ತು ರಸಗೊಬ್ಬರ ಸೇರಿದಂತೆ ಇತರ ಪ್ರಮುಖ ಸರಕುಗಳಿಗೆ ಪ್ರಮುಖ ಮಾರ್ಗವಾಗಿದೆ.

Leave a comment

Leave a Reply

Your email address will not be published. Required fields are marked *

Related Articles

 ಬ್ರಿಟನ್ ಆಹ್ವಾನದ ಮೇರೆಗೆ    ಹಾರ್ಮುಜ್ ಜಲಸಂಧಿಯ  ಅಂತರರಾಷ್ಟ್ರೀಯ ಮಾತುಕತೆಯಲ್ಲಿ ಭಾರತ ಭಾಗಿ

ನವದೆಹಲಿ: ಯುನೈಟೆಡ್ ಕಿಂಗ್‌ಡಮ್‌(ಬ್ರಿಟನ್)ನ ಆಹ್ವಾನದ ಮೇರೆಗೆ ಭಾರತವು ಹಾರ್ಮುಜ್ ಜಲಸಂಧಿಯ ಕುರಿತು ಅಂತರರಾಷ್ಟ್ರೀಯ ಮಾತುಕತೆಯಲ್ಲಿ ಭಾಗವಹಿಸುತ್ತಿದೆ...

ಯುಎಇ ಮೇಲೆ ಇರಾನ್ ಕ್ಷಿಪಣಿ ಮತ್ತು  ಡ್ರೋನ್ ದಾಳಿ ಐವರು ಐವರು ಭಾರತೀಯರಿಗೆ ಗಾಯ

“ಇರಾನ್‌ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಕೈಗಾರಿಕಾ ವಲಯದಲ್ಲಿ ಭಾರೀ...

ಶಾಂತಿ ಸ್ಥಾಪನೆಗೆ ಪಾಕ್ ಮಧ್ಯಸ್ಥಿಕೆ; ಶತ್ರು ರಾಷ್ಟ್ರಕ್ಕೆ ಹೆಚ್ಚಿದ ಜಾಗತಿಕ ಪ್ರಾಮುಖ್ಯತೆ, ಭಾರತಕ್ಕೆ ತೀವ್ರ ಹಿನ್ನಡೆ??

ನವದೆಹಲಿ: ಮಧ್ಯ ಪ್ರಾಚ್ಯಜಲ್ಲಿ ನಡೆಯುತ್ತಿರುವ ಯುದ್ಧಸಮಾನ ಪರಿಸ್ಥಿತಿಯ ನಡುವೆ, ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ...

ಜೆರುಸಲೇಂ ಅಲ್-ಅಕ್ಸಾ ಮಸೀದಿ  ಮೇಲೆ ಇರಾನ್ ಕ್ಷಿಪಣಿ ದಾಳಿ

ಈದ್ ಅಲ್-ಫಿತರ್‌ ದಿನವೇ ಜೆರುಸಲೇಂ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಅಲ್-ಅಕ್ಸಾ ಮಸೀದಿಯಿಂದ ಕೇವಲ...