
ವಕೀಲ ಸುಬ್ಬರಾವ್ ಅವರು ನೀಡಿದ ದೂರಿನನ್ವಯ, ಹೈದಾರಾಬಾದ್ನ ಪಂಜಗುಟ್ಟ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ಗಾಯಕಿ ಮಂಗ್ಲಿ, ಶಿವ, ನಿರ್ದೇಶ ವೇಣು ಉಡುಗುಲ ಹಾಗೂ ಇತರರ ವಿರುದ್ಧ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ತನಿಖೆ ಮುಂದುವರೆಸಿದ್ದಾರೆ
. ಗಾಯಕಿ ಮಂಗ್ಲಿ, ಅವರ ಸಹೋದರ ಶಿವ ಹಾಗೂ ಇತರರು ಸೇರಿಕೊಂಡು ಹೂಡಿಕೆ ಹೆಸರಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಸುಮಾರು 100 ಮಂದಿಯಿಂದ ಭಾರಿ ಹಣವನ್ನು ಸಂಗ್ರಹಿಸಿ, ಬಹಳ ಸಮಯ ಕಳೆದರೂ ಲಾಭವನ್ನೂ ನೀಡದೇ ಮತ್ತು ಮೂಲ ಹಣವನ್ನು ಹಿಂತಿರುಗಿಸದೇ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ವೇಳೆ ನ್ಯಾಯ ಕೋರಿ ಹಣ ಕಳೆದುಕೊಂಡ ಸಂತ್ರಸ್ತರು, ವಕೀಲ ಸುಬ್ಬರಾವ್ ಅವರನ್ನು ಸಂಪರ್ಕಿಸಿದ್ದಾರೆ
. ಈ ವೇಳೆ ವಕೀಲರು ಸಂತ್ರಸ್ತರ ಹಣ ಹಿಂದಿರುಗಿಸುವಂತೆ ಪ್ರತಿಭಟಿಸಿದಾಗ ಗಾಯಕಿ ಮಂಗ್ಲಿ, ಅವರ ಸಹೋದರ ಶಿವ ಹಾಗೂ ನಿರ್ದೇಶಕ ವೇಣು ಉಡುಗುಲ ತಮಗೆ ಕರೆ ಮಾಡಿ ತೀವ್ರ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

Leave a comment