ಹೈದರಾಬಾದ್‌: ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ರೂ ವಂಚನೆ ಆರೋಪ ಪ್ರಕರಣ ದಾಖಲು

25
ಹೈದರಾಬಾದ್: ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ತನ್ನದೇ ಜನಪದ ಮತ್ತು ಸಿನಿಮಾ ಹಾಡುಗಳಿಂದ ಖ್ಯಾತಿಗಳಿಸಿರುವ ಗಾಯಕಿ ಮಂಗ್ಲಿ ವಿರುದ್ಧ ವಂಚನೆ ಮತ್ತು ಸಂತ್ರಸ್ತರ ಪರ ವಕೀಲರಿಗೆ ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು ಪ್ರಕರಣ ದಾಖಲಾಗಿದೆ


ವಕೀಲ ಸುಬ್ಬರಾವ್ ಅವರು ನೀಡಿದ ದೂರಿನನ್ವಯ, ಹೈದಾರಾಬಾದ್ನ ಪಂಜಗುಟ್ಟ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ಗಾಯಕಿ ಮಂಗ್ಲಿ, ಶಿವ, ನಿರ್ದೇಶ ವೇಣು ಉಡುಗುಲ ಹಾಗೂ ಇತರರ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ತನಿಖೆ ಮುಂದುವರೆಸಿದ್ದಾರೆ
. ಗಾಯಕಿ ಮಂಗ್ಲಿ, ಅವರ ಸಹೋದರ ಶಿವ ಹಾಗೂ ಇತರರು ಸೇರಿಕೊಂಡು ಹೂಡಿಕೆ ಹೆಸರಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಸುಮಾರು 100 ಮಂದಿಯಿಂದ ಭಾರಿ ಹಣವನ್ನು ಸಂಗ್ರಹಿಸಿ, ಬಹಳ ಸಮಯ ಕಳೆದರೂ ಲಾಭವನ್ನೂ ನೀಡದೇ ಮತ್ತು ಮೂಲ ಹಣವನ್ನು ಹಿಂತಿರುಗಿಸದೇ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ವೇಳೆ ನ್ಯಾಯ ಕೋರಿ ಹಣ ಕಳೆದುಕೊಂಡ ಸಂತ್ರಸ್ತರು, ವಕೀಲ ಸುಬ್ಬರಾವ್ ಅವರನ್ನು ಸಂಪರ್ಕಿಸಿದ್ದಾರೆ
. ಈ ವೇಳೆ ವಕೀಲರು ಸಂತ್ರಸ್ತರ ಹಣ ಹಿಂದಿರುಗಿಸುವಂತೆ ಪ್ರತಿಭಟಿಸಿದಾಗ ಗಾಯಕಿ ಮಂಗ್ಲಿ, ಅವರ ಸಹೋದರ ಶಿವ ಹಾಗೂ ನಿರ್ದೇಶಕ ವೇಣು ಉಡುಗುಲ ತಮಗೆ ಕರೆ ಮಾಡಿ ತೀವ್ರ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನೀಟ್ ಪರೀಕ್ಷೆ ನಡೆಸುವ ಎನ್ ಟಿಎನಲ್ಲಿ ಮಹತ್ವದ ಬದಲಾವಣೆ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರಕಾರ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ದೇಶಾದ್ಯಂತ ಹಬ್ಬುತ್ತಿದ್ದಂತೆ ಎಚ್ಚೇತ ಕೇಂದ್ರ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ‘ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ...

ವಂದೇ ಮಾತರಂ’ಗೆ ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ನಾಳೆ ಸಂಸತ್ತಿನಲ್ಲಿ ಮಸೂದೆ ಮಂಡನೆ

ನವದೆಹಲಿ: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು,...

ಕುಂಭಮೇಳ ವೈರಲ್ ಯುವತಿ ಮೊನಾಲಿಸಾ ದಂಪತಿಗಳಿಗೆ ನೀಡಿದ್ದ ಪೊಲೀಸ್ ರಕ್ಷಣೆಯನ್ನು ಹಿಂಪಡೆದುಕೊಂಡ ಕೇರಳ ಹೈ ಕೋರ್ಟ್

“ಕೊಚ್ಚಿ: ಕುಂಭಮೇಳ 2025 ರಲ್ಲಿ ಸಾಕಷ್ಟು ವೈರಲ್‌ ಆಗಿದ್ದ ಯುವತಿ ಮೊನಾಲಿಸಾ ಭೋಸ್ಲೆ ಹಾಗೂ ಆಕೆಯ...