ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

35

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಆದರೆ ಪಕ್ಷದಲ್ಲಿ ಈಗ ಮುಸ್ಲಿಂ ನಾಯಕರ ನಡುವಿನ ಮುಸುಕಿನ ಗುದ್ದಾಟ ಜೋರಾಗಿದೆ
. ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಪ್ರಚಾರ ಮಾಡದ ಸಚಿವ ಜಮೀರ್ ಅಹ್ಮದ್ ವಿರುದ್ಧ ಮತ್ತೊಂದು ಮುಸ್ಲಿಂ ಬಣ ತಿರುಗಿ ಬಿದ್ದಿತ್ತು. ದಾವಣಗೆರೆ ಚುನಾವಣೆ ಪ್ರಚಾರದ ವೇಳೆ ನಡೆದ ಹಗ್ಗಜಗ್ಗಾಟ ಆಂತರಿಕ ವರದಿ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ನೀಡಿದ ವರದಿಯಲ್ಲಿ ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದೆ.
ಜಮೀರ್ ಅಹ್ಮದ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿಲ್ಲ, ಪ್ರಚಾರಕ್ಕೆ ಅಂತ ಬಂದಿದ್ದರೂ ಅವರ ನಡೆ ಯಾರಿಗೂ ಸಮಾಧಾನ ತಂದಿಲ್ಲ. ಮುಸ್ಲಿಂ ನಾಯಕರ ಮನವೊಲಿಕೆ ಮಾಡದೇ ಜಮೀರ್ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಶಿಸ್ತು ಕ್ರಮದ ತೂಗುಕತ್ತಿ ನೇತಾಡುತ್ತಿದೆ.
ಅಲ್ಪಸಂಖ್ಯಾತ ಸಮುದಾಯದ ಕೆಲವು ಶಾಸಕರೇ ಸಚಿವ ಜಮೀರ್ ಅಹ್ಮದ್ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿದ್ದು, ಸಚಿವ ಸಂಪುಟ ಪುನಾರಚನೆ ವೇಳೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಜಮೀರ್ ‘ತಲೆದಂಡ’ವಾಗುವುದು ಬಹುತೇಕ ನಿಶ್ಚಿತ ಎಂಬ ಮಾತುಗಳು ಕೈ ಪಾಳಯದಲ್ಲಿ ಕೇಳಿಬರುತ್ತಿವೆ. ಮತ್ತೊಂದೆಡೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ನಸೀರ್ ಅಹ್ಮದ್ ಅವರಿಗೂ ರಾಜೀನಾಮೆ ನೀಡಲು ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Leave a comment

Leave a Reply

Your email address will not be published. Required fields are marked *

Related Articles

ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಸಂಬಂಧವೇನು ಪ್ರಶ್ನಿಸಿದ ಬಿಜೆಪಿ ಶಾಸಕ ಸಿಟಿ ರವಿ ವಿರುದ್ಧ ಎಫ್ ಐ ಆರ್ ದಾಖಲು

ಬೆಂಗಳೂರು: ದೇಶಾದ್ಯಂತ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ನಡೆದ ನೀಟ್ ಪತ್ರಿಕೆ ಸೋರಿಕೆ ಪ್ರತಿಭಟನೆಗಳ ಕುರಿತು ದ್ವೇಷ...

ಭೂ ಕಬಳಿಕೆ ಪ್ರಕರಣ ಆರ್ಟ್ ಆಫ್ ಲಿವಿಂಗ್ ನ ಭೂ ಅತಿಕ್ರಮಣ ತನಿಖೆಗೆ ಎಸ್ ಐಟಿ ರಚಿಸಿದ ಕರ್ನಾಟಕ ರಾಜ್ಯ ಸರಕಾರ

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲಿಪುರ ಗ್ರಾಮದಲ್ಲಿ ಶ್ರೀ ಶ್ರೀ ರವಿಶಂಕರ್ ಅವರ ದಿ ಆರ್ಟ್...

ಅಕ್ರಮ ಮರಳು ಗಣಿಗಾರಿಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಉಪ ಆಯುಕ್ತರು ಮತ್ತು ತಹಶೀಲ್ದಾರ್‌ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಬಾಗಲಕೋಟೆಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಪರಿಶೀಲನೆಯಲ್ಲಿ ಕಂಡುಬಂದ ಬೆನ್ನಲ್ಲೇ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು,...

ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ: ಹಿಂದೂ ಯುವಕನ ಮೇಲೆ ತೀವ್ರ ಹಲ್ಲೆ; ನೊಂದು ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ,

ನೆಲಮಂಗಲ: ಮುಸ್ಲಿಂ ಯುವತಿಯೊಬ್ಬಳ ಜೊತೆಯಲ್ಲಿ ಓಡಾಡುತ್ತಿದ್ದನೆಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು...