ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುತ್ತಿದ್ದ ಎಪಾಮಿನೊಂಡಾಸ್ ಮತ್ತು ಎಂಎಸ್‌ಸಿ ಫ್ರಾನ್ಸೆಸ್ಕಾ ಹಡಗುಗಳನ್ನು ವಶಕ್ಕೆ ಪಡೆದ ಇರಾನ್ ನೌಕಾ ಪಡೆ

2

“ಟೆಹರಾನ್: ಭಾರತಕ್ಕೆ ಬರುತ್ತಿದ್ದ ಹಡಗು ಸೇರಿದಂತೆ ಎರಡು ಹಡಗುಗಳ ಮೇಲೆ ಇರಾನ್ ನೌಕಪಡೆ ಸಮುದ್ರದಲ್ಲೇ ಮಿಂಚಿನ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ. ಹೌದು. ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುತ್ತಿದ್ದ ಎಪಾಮಿನೊಂಡಾಸ್ ಮತ್ತು ಎಂಎಸ್‌ಸಿ ಫ್ರಾನ್ಸೆಸ್ಕಾ ಎಂಬ ಹಡಗುಗಳನ್ನು ಇರಾನ್ ನೌಕಪಡೆ ಸಿಬ್ಬಂದಿ ತಡೆದು ವಶಕ್ಕೆ ಪಡೆದಿರುವ ವಿಡಿಯೋಗಳನ್ನು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಬಿಡುಗಡೆ ಮಾಡಿದೆ.
ಇರಾನ್ ಧ್ವಜ ಹೊಂದಿರುವ ಸ್ಪೀಡ್ ಬೋಟ್ ಗಳು ಭಾರತೀಯ ಹಡಗುಗಳನ್ನು ಸಮುದ್ರದಲ್ಲೇ ತಡೆಗಟ್ಟಿದ್ದಾರೆ. ಬಳಿಕ ಮುಖಕ್ಕೆ ಮಾಸ್ಕ್ ಧರಿಸಿದ ಸೈನಿಕರು ಬೆನ್ನಿಗೆ ಬಂದೂಕು ಕಟ್ಟಿಕೊಂಡು ಹಡಗಿನ ಒಳಗಡೆ ಹತ್ತುವುದು ವಿಡಿಯೋದಲ್ಲಿದೆ.
ಇರಾನ್ ಸೈನಿಕರ ಎಚ್ಚರಿಕೆಯನ್ನು ನಿರ್ಲಕ್ಷಿಸಿದ ನಂತರ ಭಾರತದ ಎಪಾಮಿನೊಂಡಾಸ್  ಹಡಗಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಇರಾನ್ ನ ರಾಷ್ಟ್ರೀಯ ಭದ್ರತಾ ಮಂಡಳಿಯೊಂದಿಗೆ ಸಂಯೋಜಿತವಾಗಿರುವ ನೂರ್ ನ್ಯೂಸ್ ವರದಿ ಮಾಡಿದೆ.
ಯುಫೋರಿಯಾ ಎಂಬ ಎರಡನೇ ಹಡಗಿನ ಮೇಲೆ ಗುಂಡುಹಾರಿಸಿದ ನಂತರ ಅದು ನಿಂತಿದೆ. ಮೂರನೇ ಹಡಗು ಎಂ ಎಸ್ ಸಿ ಫ್ರಾನ್ಸೆಸ್ಕಾ ಮೇಲೂ ದಾಳಿ ನಡೆದಿದೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾ ಪಡೆ ಇಂದು ಬೆಳಿಗ್ಗೆ ಹಾರ್ಮುಜ್ ಜಲಸಂಧಿಯಲ್ಲಿ ನಿಯಮ ಉಲ್ಲಂಘಿಸಿದ ಎರಡು ಹಡಗುಗಳನ್ನು ಪತ್ತೆಹಚ್ಚಿ, ನಿಲ್ಲಿಸಿತು.


ಎಂ ಎಸ್ ಸಿ ಫ್ರಾನ್ಸೆಸ್ಕಾ “ಜಿಯೋನಿಸ್ಟ್ ಆಡಳಿತ”ಕ್ಕೆ ಸೇರಿದ್ದು, ಎಪಾಮಿನೊಂಡಾಸ್ ಕಡಲ ಭದ್ರತೆಗೆ ಅಪಾಯವನ್ನುಂಟುಮಾಡುತ್ತಿದೆ ಎಂದು ಗಾರ್ಡ್ಸ್ ಹೇಳಿಕೆಯಲ್ಲಿ ತಿಳಿಸಿದೆ.
ಹಾರ್ಮುಜ್ ಜಲಸಂಧಿಯಲ್ಲಿ ಇಸ್ಲಾಮಿಕ್ ಗಣರಾಜ್ಯ ವಿಧಿಸಿರುವ ನಿಯಮ ಉಲ್ಲಂಘಿಸುವ ಮತ್ತು ಜಲಮಾರ್ಗದಲ್ಲಿ ಸುರಕ್ಷಿತ ಮಾರ್ಗಕ್ಕೆ ವಿರುದ್ಧವಾದ ಚಟುವಟಿಕೆಗಳ ವಿರುದ್ಧ ಗಾರ್ಡ್‌ ಎಚ್ಚರಿಕೆ ನೀಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾತ್ಕಾಲಿಕ ಕದನ ವಿರಾಮವನ್ನು ಅನಿರ್ದಿಷ್ಟವಾಗಿ ವಿಸ್ತರಿಸುವುದಾಗಿ ಘೋಷಿಸಿದ ಬೆನ್ನಲ್ಲೇ ಈ ಘರ್ಷಣೆ ನಡೆದಿದೆ.

Leave a comment

Leave a Reply

Your email address will not be published. Required fields are marked *

Related Articles

ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ

ಟೆಹರಾನ್: ಅಮೆರಿಕ ಇರಾನ್ ಬಂದರುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಮತ್ತೆ ಉದ್ವಿಗ್ನತೆ...

ಹೊರ್ಮುಜ್ ಜಲಸಂಧಿ ಕದನ ವಿರಾಮದ ತಪ್ಪು ತಿಳುವಳಿಕೆಯಿಂದ ಅನುಮತಿ ಇಲ್ಲದೆ ಬಂದರೆ ನಿಮ್ಮ ಸರಕು ಸಾಗಾಣಿಕ ಹಡಗುಗಳನ್ನು ಹೊಡೆದುರುಳಿಸ್ತೀವಿ:: ಇರಾನ್ ಎಚ್ಚರಿಕೆ

ಟೆಹ್ರಾನ್: ಕದನ ವಿರಾಮ ಘೋಷಣೆಯಾಗಿದೆ ಎಂದು ಇಡೀ ಜಗತ್ತು ಖುಷಿ ಪಡ್ತಿದ್ರೆ… ಅದ್ಯಾಕೋ ಇರಾನ್ ಯುದ್ಧ...

 ಬ್ರಿಟನ್ ಆಹ್ವಾನದ ಮೇರೆಗೆ    ಹಾರ್ಮುಜ್ ಜಲಸಂಧಿಯ  ಅಂತರರಾಷ್ಟ್ರೀಯ ಮಾತುಕತೆಯಲ್ಲಿ ಭಾರತ ಭಾಗಿ

ನವದೆಹಲಿ: ಯುನೈಟೆಡ್ ಕಿಂಗ್‌ಡಮ್‌(ಬ್ರಿಟನ್)ನ ಆಹ್ವಾನದ ಮೇರೆಗೆ ಭಾರತವು ಹಾರ್ಮುಜ್ ಜಲಸಂಧಿಯ ಕುರಿತು ಅಂತರರಾಷ್ಟ್ರೀಯ ಮಾತುಕತೆಯಲ್ಲಿ ಭಾಗವಹಿಸುತ್ತಿದೆ...

ಯುಎಇ ಮೇಲೆ ಇರಾನ್ ಕ್ಷಿಪಣಿ ಮತ್ತು  ಡ್ರೋನ್ ದಾಳಿ ಐವರು ಐವರು ಭಾರತೀಯರಿಗೆ ಗಾಯ

“ಇರಾನ್‌ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಕೈಗಾರಿಕಾ ವಲಯದಲ್ಲಿ ಭಾರೀ...