ಮಹಾನಗರ ಪಾಲಿಕೆ ಚುನಾವಣೆ ಮುಸ್ಲಿಂ ಪ್ರಾಬಲ್ಯವಿರುವ ಗೋದ್ರಾ ವಾರ್ಡ್ ನಲ್ಲಿ ಜಯಶಾಲಿಯಾದ ಹಿಂದೂ ಮಹಿಳೆ

20
ಅಹ್ಮದಾಬಾದ್: ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ 2026ರಲ್ಲಿ ಅಚ್ಚರಿ ಫಲಿತಾಂಶವೊಂದು ಹೊರಬಿದ್ದಿದ್ದು, ಶೇ.100 ರಷ್ಟು ಮುಸ್ಲಿಂ ಮತದಾರರೇ ಇರುವ ಗೋಧ್ರಾ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ್ದಾರೆ. ಹೌದು.. ಕೋಮು ಇತಿಹಾಸದ ಹಿನ್ನೆಲೆಯಲ್ಲಿ ಆಗಾಗ ಸುದ್ದಿಯಾಗುವ ಗುಜರಾತ್ ನ ಗೋದ್ರಾದಲ್ಲಿ, 2026ರ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಸಾಮಾಜಿಕ ಸಾಮರಸ್ಯದ ಪ್ರಬಲ ಸಂದೇಶವನ್ನು ರವಾನಿಸಿದೆ.


ಶೇ.100 ರಷ್ಟು ಮುಸ್ಲಿಂ ಮತದಾರರೇ ಇರುವ ಗೋಧ್ರಾ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ್ದಾರೆ. ಗೋದ್ರಾ ನಗರಸಭೆಯ ಇತಿಹಾಸದಲ್ಲೇ ಮೊದಲ ಬಾರಿಗೆ, ವಾರ್ಡ್ ಸಂಖ್ಯೆ 7ರಿಂದ ಪಕ್ಷೇತರ ಹಿಂದೂ ಮಹಿಳಾ ಅಭ್ಯರ್ಥಿ ಅಪೇಕ್ಷಾಬೆನ್ ನೈನೇಷ್‌ಭಾಯಿ ಸೋನಿ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ವಿಶೇಷವೆಂದರೆ, ಈ ಕ್ಷೇತ್ರದಲ್ಲಿ ಶೇ. 100ರಷ್ಟು ಮತದಾರರು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ರಾಜಕೀಯ ನಿರೂಪಣೆಯನ್ನೇ ಬದಲಿಸಿದ ಫಲಿತಾಂಶ ಅಪೇಕ್ಷಾಬೆನ್ ಸೋನಿ ಅವರ ಈ ಗೆಲುವು ಈ ಭಾಗದ ರಾಜಕೀಯ ನಿರೂಪಣೆಯನ್ನೇ ಬದಲಿಸಿದ್ದು, ವಾರ್ಡ್ ಸಂಖ್ಯೆ 7ರಲ್ಲಿ ಅವರು ನೋಂದಾಯಿತ ಮತದಾರರಲ್ಲದಿದ್ದರೂ ಸಹ, ಸ್ಥಳೀಯ ನಿವಾಸಿಗಳ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುಸ್ಲಿಂ ಮತದಾರರು ಸಾಂಪ್ರದಾಯಿಕ ಧರ್ಮ ಮತ್ತು ಜಾತಿ ಆಧಾರಿತ ಮತದಾನದ ಮಾದರಿಗಳನ್ನು ಬದಿಗಿಟ್ಟು, ಸ್ಥಳೀಯ ಆಡಳಿತಕ್ಕೆ ಸೂಕ್ತವೆಂದು ಕಂಡುಬಂದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಈ ಐತಿಹಾಸಿಕ ಬದಲಾವಣೆಗೆ ಕಾರಣರಾಗಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಇತಿಹಾಸ ನಿರ್ಮಾಣ ಈ ಫಲಿತಾಂಶವನ್ನು ಗೋದ್ರಾದ ರಾಜಕೀಯ ಇತಿಹಾಸದ ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಲಾಗುತ್ತಿದ್ದು, ಇದು ಕೋಮು ಸೌಹಾರ್ದತೆ ಮತ್ತು ಸಾಮಾಜಿಕ ಒಗ್ಗಟ್ಟಿಗೆ ಅಪರೂಪದ ಉದಾಹರಣೆಯಾಗಿದೆ. ಸಂಪೂರ್ಣ ಮುಸ್ಲಿಂ ಮತದಾರರಿರುವ ವಾರ್ಡ್‌ನಲ್ಲಿ ಹಿಂದೂ ಮಹಿಳೆಯನ್ನು ಭಾರಿ ಬಹುಮತದಿಂದ ಆರಿಸುವ ಮೂಲಕ, ಗೋದ್ರಾದ ಮತದಾರರು ಕೋಮು ವಿಭಜನೆಗಿಂತ ವೈಯಕ್ತಿಕ ಅರ್ಹತೆ ಮತ್ತು ಸ್ಥಳೀಯ ನಂಬಿಕೆಗೆ ಆದ್ಯತೆ ನೀಡಿದ್ದಾರೆ.

ಬಿಜೆಪಿ ಬಿಗಿ ಹಿಡಿತ, ಕಾಂಗ್ರೆಸ್ ಗೆ ಮುಖಭಂಗ ಇನ್ನು ಗುಜರಾತ್‌ನ ಒಟ್ಟಾರೆ ಚುನಾವಣಾ ಫಲಿತಾಂಶದತ್ತ ಗಮನ ಹರಿಸುವುದಾದರೆ, ಬಿಜೆಪಿಯು ರಾಜ್ಯದ ಎಲ್ಲಾ 15 ಮಹಾನಗರ ಪಾಲಿಕೆಗಳ ಮೇಲೆ ನಿಯಂತ್ರಣ ಸಾಧಿಸುವ ಮೂಲಕ ಭರ್ಜರಿ ಜಯ ದಾಖಲಿಸಿದೆ. ಅಹ್ಮದಾಬಾದ್‌ನ 192 ಸ್ಥಾನಗಳಲ್ಲಿ 146 ಸ್ಥಾನಗಳನ್ನು ಬಿಜೆಪಿ ಗೆದ್ದಿದ್ದರೆ, ಕಾಂಗ್ರೆಸ್ ಕೇವಲ 18 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.

ಸೂರತ್‌ನಲ್ಲಿ 115 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಆಮ್ ಆದ್ಮಿ ಪಕ್ಷವನ್ನು (ಕೇವಲ 4 ಸ್ಥಾನ) ಧೂಳೀಪಟ ಮಾಡಿದೆ. ಇದೇ ರೀತಿಯ ಟ್ರೆಂಡ್ ರಾಜ್‌ಕೋಟ್ ಮತ್ತು ವಡೋದರಾದಲ್ಲೂ ಕಂಡುಬಂದಿದ್ದು, ಬಿಜೆಪಿ ತಲಾ 65 ಸ್ಥಾನಗಳನ್ನು ಗೆದ್ದುಕೊಂಡರೆ, ಕಾಂಗ್ರೆಸ್ ಎರಡಂಕಿ ತಲುಪಲು ಪರದಾಡಿದೆ.

Leave a comment

Leave a Reply

Your email address will not be published. Required fields are marked *

Related Articles

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...

ಮಣಿಪುರದಲ್ಲಿ ಮತ್ತೆ ಮರುಕಳಿಸಿದ ಹಿಂಸಾಚಾರ ಕುಕಿ ಸಮುದಾಯದ ಇಬ್ಬರು ಸದಸ್ಯರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಮಣಿಪುರದಲ್ಲಿ ಕುಕಿ ಸಮುದಾಯದ ಇಬ್ಬರು ಸದಸ್ಯರನ್ನು ಗುರುವಾರ ಬೆಳಿಗ್ಗೆ 4:55ಕ್ಕೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ....

5ನೇ ತಲೆಮಾರಿನ ದೇಶಿಯ ಯುದ್ಧ ವಿಮಾನಗಳನ್ನು ಜಂಟಿಯಾಗಿ ನಿರ್ಮಿಸಲು ಭಾರತಕ್ಕೆ ಆಫರ್ ನೀಡಿದ,:: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ನವದೆಹಲಿ: 5ನೇ ತಲೆಮಾರಿನ ಯುದ್ಧ ವಿಮಾನಗಳನ್ನು ದೇಶೀಯವಾಗಿ ನಿರ್ಮಿಸಲು ಮುಂದಾಗಿರುವ ಭಾರತಕ್ಕೆ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್...

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳೇ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುತ್ತವೆ ಎಂಬ ಭ್ರಮೆಯಿಂದ ಹೊರಬರಬೇಕು : ನಿತಿನ್ ನಬಿನ್

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ನಿನ್ನೆ ಭಾನುವಾರ ಕರ್ನಾಟಕದ ನಾಯಕರು ಮತ್ತು ಕಾರ್ಯಕರ್ತರಿಗೆ,...