
ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುವ ವಿಧಾನಸಭೆಯ ಸದಸ್ಯ ವಿನಯ್ ಕುಲಕರ್ಣಿ ಅವರನ್ನು ಬೆಂಗಳೂರು ನಗರದ (CCH-82) LXXXI ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಶೇಷ CC ಸಂಖ್ಯೆ 565/2021 ರಲ್ಲಿ ದೋಷಾರೋಪಣೆ ಮಾಡಿದ ಪರಿಣಾಮವಾಗಿ ಅವರು ಶಿಕ್ಷೆಗೊಳಗಾದ ದಿನಾಂಕದಿಂದ ಅಂದರೆ ಏಪ್ರಿಲ್ 15, 2026 ರಿಂದ ಕರ್ನಾಟಕ ವಿಧಾನಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ ಅಂತ ತಿಳಿಸಲಾಗಿದೆ.
ಬಿಡುಗಡೆ ನಂತರವೂ 6 ವರ್ಷ ಅನರ್ಹತೆ ಮುಂದುವರಿಕೆ 1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8 ಮತ್ತು ಭಾರತ ಸಂವಿಧಾನದ 191(1)(e) ವಿಧಿಯ ನಿಬಂಧನೆಗಳ ಪ್ರಕಾರ ಮತ್ತು ಅಂತಹ ಅನರ್ಹತೆಯು ಅವರ ಬಿಡುಗಡೆಯ ನಂತರ ಆರು ವರ್ಷಗಳ ಅವಧಿಗೆ ಮುಂದುವರಿಯುತ್ತದೆ.
ಸಮರ್ಥ ನ್ಯಾಯಾಲಯವು ಶಿಕ್ಷೆಯನ್ನು ತಡೆಹಿಡಿಯದ ಹೊರತು ಅನರ್ಹತೆ ಮುಂದುವರೆಯಲಿದೆ. ಆದ್ದರಿಂದ, ಕರ್ನಾಟಕ ವಿಧಾನಸಭೆಯ ಒಂದು ಸ್ಥಾನ ಖಾಲಿಯಾಗಿದೆ ಅಂತ ಅಧಿಸೂಚನೆಯಲ್ಲಿ ಹೇಳಲಾಗಿದೆ. ಹಾಲಿ ಶಾಸಕರ ಮರಣದಿಂದಾಗಿ ಖಾಲಿಯಾಗಿದ್ದ 224 ಸದಸ್ಯ ಬಲದ ವಿಧಾನಸಭೆಯಲ್ಲಿ ಎರಡು ಸ್ಥಾನಗಳನ್ನು ಭರ್ತಿ ಮಾಡಲು ಏಪ್ರಿಲ್ 9 ರಂದು ಉಪಚುನಾವಣೆ ನಡೆಸಲಾಯಿತು. ಫಲಿತಾಂಶಗಳನ್ನು ಮೇ 4 ರಂದು ಘೋಷಿಸಲಾಗುವುದು.
ಏಪ್ರಿಲ್ 15 ರಂದು, ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಕುಲಕರ್ಣಿ ಮತ್ತು ಇತರರನ್ನು ಕ್ರಿಮಿನಲ್ ಪಿತೂರಿ ಮತ್ತು ಕೊಲೆ ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ದೋಷಿ ಎಂದು ಘೋಷಿಸಿದರು. ತದನಂತರ ಏಪ್ರಿಲ್ 17 ರಂದು ನ್ಯಾಯಾಲಯವು ಕುಲಕರ್ಣಿ ಮತ್ತು ಪ್ರಕರಣದಲ್ಲಿ ಶಿಕ್ಷೆಗೊಳಗಾದ ಇತರ 15 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತು.
Leave a comment