ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

32
ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ ಕೂಡ ಹೋಯಿತು. ಈಗ ಹೈಕೋರ್ಟ್ ಆದೇಶ ಪ್ರಕಾರ ಅಂಚೆಮತ ಮರು ಎಣಿಕೆ ಆಗಿದೆ.



ಮಧ್ಯರಾತ್ರಿಯೇ ನಮಗೆ ಮಾಹಿತಿ ಸಿಕ್ಕಿತು, ಜೀವರಾಜ್ ಅವರು 56 ಮತಗಳಿಂಗ ಗೆದ್ದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಅಧಿಕಾರಿಗಳ ಮೇಲೆ ಸಾಕಷ್ಟು ಒತ್ತಡ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ.
ಚುನಾವಣಾ ಫಲಿತಾಂಶ ಘೋಷಣೆ ಮಾಡಬಾರದು ಎಂದು ಕೂಡ ಹೇಳುತ್ತಿದ್ದಾರೆ, ರಾಜೇಗೌಡರಿಗೆ ಹೈಕೋರ್ಟ್ ಮೊರೆ ಹೋಗಲು ಸಮಯ ಕೊಡಬೇಕೆಂದು ಕುತಂತ್ರ ನಡೆಸುತ್ತಿದ್ದಾರೆ ಎಂಬ ವಿಚಾರ ನಮಗೆ ಗೊತ್ತಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.
ಜೀವರಾಜ್ ಅವರು ಜನರ ಆಶೀರ್ವಾದದಿಂದ ಗೆದ್ದಿದ್ದಾರೆ, ಅವರಿಗೆ ಈಗಾಗಲೇ ಮೂರು ವರ್ಷ ಅನ್ಯಾಯವಾಗಿದೆ. ಇನ್ನು ಎರಡು ವರ್ಷವಾದರೂ ಗೌರವಯುತವಾಗಿ ಜನರ ಆಶೀರ್ವಾದದಂತೆ ಶಾಸಕರಾಗಿ ಕೆಲಸ ಮಾಡಲು ಅವಕಾಶ ನೀಡಬೇಕೆಂದು ಕೇಳಿಕೊಂಡರು

Leave a comment

Leave a Reply

Your email address will not be published. Required fields are marked *

Related Articles

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ಬಿಜೆಪಿ ಪಕ್ಷದೊಳಗಿನ ರಾಜ್ಯದಲ್ಲಿ ನಡೆಯುತ್ತಿರುವ ಬಣ ರಾಜಕೀಯದ ಕುರಿತು ಬೇಸರ ವ್ಯಕ್ತಪಡಿಸಿದ:: ಡಿ ವಿ ಸದಾನಂದ ಗೌಡ

“ಪಕ್ಷದ ರಾಜ್ಯಾಧ್ಯಕ್ಷನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತನಗೆ ಅವಕಾಶ ನೀಡಿದ ಬಿಜೆಪಿ ಪಕ್ಷಕ್ಕೆ...

ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗಾಗಿ ದೋಸ್ತಿಗಳ ಕಸರತ್ತು ಇಂದು ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

“ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಸರ್ಕಾರ...

ರಾಜ್ಯ ವಿಧಾನಸಭಾ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ ಕಾಂಗ್ರೆಸ್ ಬಿಜೆಪಿಗೆ ಮುಖಭಂಗ

ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಈಗ ಪ್ರಕಟವಾಗಿದೆ ಮೂರೂ ಕ್ಷೇತ್ರಗಳಲ್ಲಿ...