ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ::ವಕೀಲ ಮಹೇಶ್ ಜೇಠ್ಮಲಾನಿ

42

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷ ಸೋಲು ಕಂಡಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಘೋಷಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಜನಾದೇಶವನ್ನು ತಳ್ಳಿಹಾಕಿದಂತೆ ಮಮತಾ ಬ್ಯಾರ್ಜಿಯವರು ಹೇಳಿಕೆ ನೀಡುತ್ತಿದ್ದು, ರಾಜಕೀಯ ಪಕ್ಷಗಳ ಆಕ್ರೋಶ ಕಾರಣವಾಗಿದೆ.
ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಹಿರಿಯ ವಕೀಲ ಮತ್ತು ರಾಜಕೀಯ ವಿಶ್ಲೇಷಕ ಮಹೇಶ್ ಜೇಠ್ಮಲಾನಿ ಅವರು, ಒದ್ದು ಹೊರಹಾಕಿ ಹೊರಹಾಕಿ ಎಂದು ತೀವ್ರವಾಗಿ ಕಿಡಿಕಾರಿದ್ದಾರೆ. ಈ ವಿಚಾರದಲ್ಲಿ ಗವರ್ನರ್ ಹಸ್ತಕ್ಷೇಪ ಅಗತ್ಯವಿದೆ. ಜನರು ನೀಡಿದ ತೀರ್ಪನ್ನು ಒಪ್ಪಿಕೊಳ್ಳದೇ ಅಧಿಕಾರದಲ್ಲೇ ಮುಂದುವರಿಯಲು ಪ್ರಯತ್ನಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪಕ್ಷವು ಈ ಬಾರಿ ನಿರೀಕ್ಷಿತ ಫಲಿತಾಂಶವನ್ನು ಪಡೆಯಲು ವಿಫಲವಾಗಿದ್ದು, ಭಾರತೀಯ ಜನತಾ ಪಕ್ಷದ ಭಾರೀ ಮುನ್ನಡೆ ಸಾಧಿಸಿ ಸರ್ಕಾರ ರಚನೆಗೆ ಸಜ್ಜಾಗಿದೆ. ಆದರೆ, ಮಮತಾ ಬ್ಯಾನರ್ಜಿ ಅವರು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ “ನಾನು ರಾಜೀನಾಮೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ತಮ್ಮ ನಿಲುವನ್ನು “ನೈತಿಕ ಜಯ” ಎಂದು ಸಮರ್ಥಿಸಿಕೊಂಡಿದ್ದಾರೆ. ಆದರೆ, ವಿರೋಧ ಪಕ್ಷಗಳು ಇದನ್ನು ಜನರ ತೀರ್ಪಿಗೆ ಮಾಡಿರುವ ಅವಮಾನ ಎಂದು ಹೇಳುತ್ತಿವೆ. ಭಾರತದ ಸಂವಿಧಾನ ಪ್ರಕಾರ, ಮುಖ್ಯಮಂತ್ರಿಗೆ ಸ್ಪಷ್ಟ ಬಹುಮತ ಇಲ್ಲದಿದ್ದರೆ ಅವರು ಪದವಿಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ.
ಈ ಸಂದರ್ಭದಲ್ಲಿಯೇ ರಾಜ್ಯಪಾಲರು ಮಧ್ಯಪ್ರವೇಶಿಸಿ ಬಹುಮತ ಸಾಬೀತುಪಡಿಸಲು ಸೂಚಿಸಬಹುದು ಅಥವಾ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಬಹುದು. ಈಗ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮುಂದಿನ ಹಂತ ಏನು ಎನ್ನುವುದು ರಾಜ್ಯಪಾಲರ ನಿರ್ಧಾರ ಮತ್ತು ಸಂವಿಧಾನಾತ್ಮಕ ಪ್ರಕ್ರಿಯೆಗಳ ಮೇಲೆ ಅವಲಂಬಿತವಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ...

ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು...