ಮೂರು ವರ್ಷಗಳ ಬಳಿಕ ಇಂದು ಶೃಂಗೇರಿ ನೂತನ ಶಾಸಕರಾಗಿ ಡಿ ಎನ್ ಜೀವರಾಜ್ ಪ್ರಮಾಣವಚನ ಸ್ವೀಕಾರ

19

ಬೆಂಗಳೂರು: ಕೊನೆಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಇಂದು ಡಿ ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಅಪರಾಹ್ನ 3.30ಕ್ಕೆ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಲು ಸಭಾಧ್ಯಕ್ಷ ಯುಟಿ ಖಾದರ್ ಸಮಯ ನಿಗದಿಪಡಿಸಿದ್ದಾರೆ.

ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಬಳಿಕ ಉಂಟಾದ ರಾಜಕೀಯ ಗದ್ದಲದಿಂದ, ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಬಿಜೆಪಿ ವಿಳಂಬ ಆರೋಪ ಮಾಡಿತ್ತು.
ಬಿಜೆಪಿ ಪ್ರತಿನಿಧಿ ಮಂಡಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಸ್ಪೀಕರ್ ಲಭ್ಯವಿಲ್ಲದಿದ್ದರೆ ತಾವೇ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಪ್ರಮಾಣವಚನ ಬೋಧಿಸಬೇಕು ಎಂದು ಮನವಿ ಮಾಡಿದ್ದರು

ಕೊನೆಗೂ ಸಭಾಧ್ಯಕ್ಷರು ಸಮಯ ನಿಗದಿಪಡಿಸಿದ್ದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಜೀವರಾಜ್ ಖುಷಿ ಹಂಚಿಕೊಂಡಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಜೀವರಾಜ್ ಅಂಚೆ ಮತಗಳನ್ನು ಮರುಎಣಿಕೆ ಮಾಡಬೇಕೆಂದು ಕೋರ್ಟ್ ಮೊರೆಹೋಗಿದ್ದರು. ಕಳೆದ ವಾರಾಂತ್ಯ ಹೈಕೋರ್ಟ್ ಆದೇಶದಂತೆ ನಡೆದ ಮರುಎಣಿಕೆಯಲ್ಲಿ 52 ಮತಗಳ ಅಂತರದಿಂದ ಗೆದ್ದು ಶಾಸಕರಾಗಿ ಘೋಷಿಸಲ್ಪಟ್ಟಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಕೊನೆ ಕ್ಷಣಗಳಲ್ಲಿ ಬದಲಾದ ಸಚಿವ ಸಂಪುಟ 20 ನೂತನ ಸಚಿವರ ಬದಲು 19 ನೂತನ ಸಚಿವರ ಪ್ರಮಾಣವಚನ ಸ್ವೀಕಾರ

“ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ಸಂಜೆ ವಿಸ್ತರಣೆಯಾಗಿದೆ. ಕಾಂಗ್ರೆಸ್...

ಕಾವೇರಿ ನೀರು ಹಂಚಿಕೆ ಸರ್ವಪಕ್ಷ ಸಭೆ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ ::ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಕೀಯಕ್ಕಿಂತ ರಾಜ್ಯದ ರೈತರು ಮತ್ತು ಜನರ ಹಿತವೇ...

ಬಾಂಗ್ಲಾದೇಶಿಯರ ಮಾಹಿತಿ ನೀಡಿದ ಭಾರತೀಯ ಪ್ರಜೆ ವಿರುದ್ಧ ಹಲ್ಲೆ ಪ್ರಕರಣ ನಿಮ್ಮ ಓಲೈಕೆ ನಿಲ್ಲಿಸಿ  ರಾಜ್ಯ ಸರಕಾರಕ್ಕೆ ಹೈಕೋರ್ಟ್ ಚಾಟಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದವರ ಬಗ್ಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರೊಬ್ಬರ ವಿರುದ್ಧ ಹಲ್ಲೆ...

ಬಿಪಿಎಲ್ ಕಾರ್ಡ್ ವಾರ್ಷಿಕ ಆದಾಯದ ಮಿತಿ, 3 ಲಕ್ಷ ನಿಗದಿಗೆ ಕ್ರಮ- ಸಚಿವ ಕೆ ಹೆಚ್ ಮುನಿಯಪ್ಪ

ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯದ ಮಿತಿಯನ್ನು 3 ಲಕ್ಷ ರೂಗೆ ಹೆಚ್ಚಿಸಲು ಕ್ರಮ...