ನಟ ದರ್ಶನ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನ ವದಂತಿ  ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

1

“ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿದ್ದು, ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತ ಸೋಮವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಆದಾಗ್ಯೂ, ವದಂತಿ ಹರಡುತ್ತಿದ್ದಂತೆ ಜೈಲಿನ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು ಮತ್ತು ವರದಿಗಳು ಕೇವಲ ವದಂತಿ ಎಂದು ದೃಢಪಡಿಸಿದರು. ಭಾನುವಾರ ರಾತ್ರಿಯಿಂದಲೇ ಈ ರೀತಿ ವದಂತಿಗಳು ಹರಡುತ್ತಿವೆ.
ಇದರಿಂದಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಿರ ದೂರವಾಣಿ ಮೂಲಕ ಜೈಲು ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಕೇಳುತ್ತಿದ್ದಾರೆ ಎಂದು ಹಿರಿಯ ಜೈಲು ಸಿಬ್ಬಂದಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ
ನಟ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳು ಸಂಪೂರ್ಣ ಆಧಾರರಹಿತ ಮತ್ತು ಸತ್ಯಕ್ಕೆ ದೂರವಾಗಿವೆ. ಅಂತಹ ವದಂತಿಗಳನ್ನು ನಂಬಿ ಯಾರೂ ಪರಪ್ಪನ ಅಗ್ರಹಾರ ಕೇಂದ್ರ ಜೈಲಿನ ಬಳಿ ಬರಬಾರದು ಎಂದು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ನಟ ದರ್ಶನ್ ಅವರು ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಬಹುದು. ಅವರಿಗೆ ಸೂಕ್ತ ಮನೋರೋಗ ಚಿಕಿತ್ಸೆಯ ಅಗತ್ಯವಿದೆ ಎಂದು ಮೈಸೂರಿನ ಮನರೋಗ ತಜ್ಞ ಡಾ. ಅಭಿಜಿತ್ ಹನಹೋಡು ಅವರು ಹೇಳಿದ್ದರು. ಇದೀಗ ಆಘಾತಕಾರಿ ವದಂತಿ ಹರಡಿದ್ದು, ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ

Leave a comment

Leave a Reply

Your email address will not be published. Required fields are marked *

Related Articles

ಉಗ್ರ ಚಟುವಟಿಕೆ ಮುಂದುವರಿಸಿದರೆ ಪಾಕಿಸ್ತಾನ ಇತಿಹಾಸದ ಭಾಗವಾಗಿರಬೇಕಾ”ತೀರ್ಮಾನಿಸಲಿದೆ ಭಾರತ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಎಚ್ಚರಿಕೆ

ನವದೆಹಲಿ: ಭಾರತ ವಿರುದ್ಧ ಉಗ್ರ ಚಟುವಟಿಕೆಗಳನ್ನು ಮುಂದುವರಿಸಿದರೆ ಪಾಕಿಸ್ತಾನ “ಭೂಗೋಳದ ಭಾಗವಾಗಿರಬೇಕಾ ಅಥವಾ ಇತಿಹಾಸದ ಭಾಗವಾಗಿರಬೇಕಾ”...

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...