ಹೋಲ್‌ಸೇಲ್ ಚಿನ್ನ ಖರೀದಿ ನೆಪದಲ್ಲಿ 3 ಕೋಟಿ ರೂ ಚಿನ್ನಾಭರಣ ಕದ್ದು ಪರಾರಿ

1

  • ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಅತಿದೊಡ್ಡ ಲೂಟಿ ನಡೆದಿದ್ದು, ಹೋಲ್‌ಸೇಲ್ ಚಿನ್ನ ಖರೀದಿಸುವುದಾಗಿ ನಂಬಿಸಿ 3 ಕೋಟಿ ರೂ. ಮೌಲ್ಯದ 1 ಕೆಜಿ 850 ಗ್ರಾಂ ಚಿನ್ನಾಭರಣ ಕಳವು ಮಾಡಿ ಪರಾರಿಯಾದ ಘಟನೆ ಮಲ್ಲೇಶ್ವರದಲ್ಲಿ ನಡೆದಿದೆ.

ಚಿನ್ನಾಭರಣ ಕಂಪನಿಗೆ ವಂಚಿಸಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಆಭರಣಗಳೊಂದಿಗೆ ಪರಾರಿಯಾದ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಪರೇಶ್ ಸೋನಿ ಎಂಬಾತ ತಾನು ಹೋಲ್‌ಸೇಲ್ ಚಿನ್ನದ ವ್ಯಾಪಾರಿ ಎಂದು ಪರಿಚಯಿಸಿಕೊಂಡು, 3 ಕೆಜಿ ಚಿನ್ನದ ಆಭರಣಗಳು ಬೇಕೆಂದು ಅಂಗಡಿಗೆ ಕರೆ ಮಾಡಿದ್ದ. ಬಳಿಕ ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿರುವ ತನ್ನ ಕಚೇರಿಗೆ ಆಭರಣಗಳ ಸ್ಯಾಂಪಲ್ ತೆಗೆದುಕೊಂಡು ಬರುವಂತೆ ಸೂಚಿಸಿದ್ದ. ಅದರಂತೆ ಮಹೇಂದ್ರ ಕುಮಾರ್ ಜೈನ್ ಹಾಗೂ ಮತ್ತೊಬ್ಬ ಸಿಬ್ಬಂದಿ 3 ಕೆಜಿ ವಿವಿಧ ವಿನ್ಯಾಸದ ಚಿನ್ನಾಭರಣಗಳನ್ನು ತೆಗೆದುಕೊಂಡು ಆರೋಪಿಯ ಕಚೇರಿಗೆ ತೆರಳಿದ್ದರು.

ಸೋನಿ ತಾನು ಇಷ್ಟಪಟ್ಟ ಆಭರಣಗಳನ್ನು ಆಯ್ಕೆ ಮಾಡಿ, ಅವುಗಳನ್ನು ಯಂತ್ರವನ್ನು ಬಳಸಿ ಪರಿಶೀಲಿಸುವುದಕ್ಕೆ ಪಕ್ಕದ ಕ್ಯಾಬಿನ್‌ನಲ್ಲಿದ್ದ ರಾವ್ ಗೆ ನೀಡಿದ್ದಾರೆ. ರಾವ್, ಸುಮಾರು 1 ಕೆಜಿ, 850 ಗ್ರಾಂ ಆಭರಣಗಳನ್ನು ತೆಗೆದುಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ. ನಂತರ ರಾವ್ ನನ್ನು ಹುಡುಕೋದಾಗಿ ಹೇಳಿ ಜೊತೆಗಿದ್ದ ಇನ್ನಿಬ್ಬರು ಆರೋಪಿಗಳು ಕೂಡ ಎಸ್ಕೇಪ್ ಆಗಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಕಳವಾಗಿರುವ ಚಿನ್ನಾಭರಣಗಳ ಮೌಲ್ಯ ಅಂದಾಜು 3 ಕೋಟಿ ರೂ. ಎಂದು ಹೇಳಲಾಗಿದೆ. ಆರೋಪಿಗಳು ಪೂರ್ವಯೋಜಿತವಾಗಿ ಮೋಸ ಮಾಡಿ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಟ ದರ್ಶನ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನ ವದಂತಿ  ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

“ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲೇ...

ಉಗ್ರ ಚಟುವಟಿಕೆ ಮುಂದುವರಿಸಿದರೆ ಪಾಕಿಸ್ತಾನ ಇತಿಹಾಸದ ಭಾಗವಾಗಿರಬೇಕಾ”ತೀರ್ಮಾನಿಸಲಿದೆ ಭಾರತ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಎಚ್ಚರಿಕೆ

ನವದೆಹಲಿ: ಭಾರತ ವಿರುದ್ಧ ಉಗ್ರ ಚಟುವಟಿಕೆಗಳನ್ನು ಮುಂದುವರಿಸಿದರೆ ಪಾಕಿಸ್ತಾನ “ಭೂಗೋಳದ ಭಾಗವಾಗಿರಬೇಕಾ ಅಥವಾ ಇತಿಹಾಸದ ಭಾಗವಾಗಿರಬೇಕಾ”...

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...