ವಿಧಿವಿಜ್ಞಾನ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ಬಂಗ್ಲೆಗುಡ್ಡೆ ಕಾಡಿನಲ್ಲಿ ಎಸ್ಐಟಿ ತಂಡದಿಂದ ಪರಿಶೀಲನೆ

1

“ಮಂಗಳೂರು: ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಅನೇಕ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆದಿದ್ದು, ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ವಿಧಿ ವಿಜ್ಞಾನ ತಂಡದ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ನೇತ್ರಾವತಿ ನದಿ ಪಕ್ಕದ ಬಂಗ್ಲೆಗುಡಿ ಕಾಡಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಮೂವರು ಸದಸ್ಯರ ತಂಡವು ಎಸ್‌ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ತಲುಪಿ ಸ್ಥಳದಲ್ಲಿ ವಿವರವಾದ ಪರಿಶೀಲನೆ ನಡೆಸಿದೆ. ಈ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ನ್ಯಾಯಾಲಯಕ್ಕೆ ಒಪ್ಪಿಸಿದ್ದ ತಲೆ ಬುರುಡೆಯನ್ನು ಕಾಡಿನಿಂದ ಹೊರತೆಗೆದಿದ್ದ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಬಳಿಕ ಆ ತಲೆ ಬುರುಡೆಯನ್ನು ನಾನು ನೆಲದಿಂದ ಹೊರತೆಗೆದಿಲ್ಲ ಎಂದು ಚಿನ್ನಯ್ಯ ಪೊಲೀಸರ ಮುಂದೆ ಒಪ್ಪಿಕೊಂಡಿದ್ದ ತಲೆಬುರುಡೆ ತೆಗೆಯುವ ದೃಶ್ಯವನ್ನು ಚಿತ್ರೀಕರಿಸಿದ್ದ ಪ್ರದೀಪ್ ಕುಲಾಲ್ ಎಂಬಾತ ಈ ಬಗ್ಗೆಎಸ್ ಐಟಿ ಮುಂದೆ ಹೇಳಿಕೆ ನೀಡಿದ್ದ. ಆತನನ್ನು ಎಸ್ ಐಟಿ ಹಾಗೂ ವಿಧಿ ವಿಜ್ಞಾನ ತಂಡದ ಅಧಿಕಾರಿಗಳು ಜೊತೆಯಲ್ಲಿ ಕಾಡಿನಲ್ಲಿ ಕರೆದೊಯ್ದು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ತಲೆಬುರುಡೆ ಪತ್ತೆಯಾದ ಸ್ಥಳಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದಾಖಲೆಗಳ ಅಗತ್ಯ ಇರುತ್ತದೆ. ಅದಕ್ಕಾಗಿ ವಿಧಿ ವಿಜ್ಞಾನ ತಂಡ ಹಾಗೂ ಎಸ್ ಐಟಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.”

Leave a comment

Leave a Reply

Your email address will not be published. Required fields are marked *

Related Articles

ಹೋಲ್‌ಸೇಲ್ ಚಿನ್ನ ಖರೀದಿ ನೆಪದಲ್ಲಿ 3 ಕೋಟಿ ರೂ ಚಿನ್ನಾಭರಣ ಕದ್ದು ಪರಾರಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಅತಿದೊಡ್ಡ ಲೂಟಿ ನಡೆದಿದ್ದು, ಹೋಲ್‌ಸೇಲ್ ಚಿನ್ನ ಖರೀದಿಸುವುದಾಗಿ ನಂಬಿಸಿ 3...

ನಟ ದರ್ಶನ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನ ವದಂತಿ  ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

“ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲೇ...

ಉಗ್ರ ಚಟುವಟಿಕೆ ಮುಂದುವರಿಸಿದರೆ ಪಾಕಿಸ್ತಾನ ಇತಿಹಾಸದ ಭಾಗವಾಗಿರಬೇಕಾ”ತೀರ್ಮಾನಿಸಲಿದೆ ಭಾರತ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಎಚ್ಚರಿಕೆ

ನವದೆಹಲಿ: ಭಾರತ ವಿರುದ್ಧ ಉಗ್ರ ಚಟುವಟಿಕೆಗಳನ್ನು ಮುಂದುವರಿಸಿದರೆ ಪಾಕಿಸ್ತಾನ “ಭೂಗೋಳದ ಭಾಗವಾಗಿರಬೇಕಾ ಅಥವಾ ಇತಿಹಾಸದ ಭಾಗವಾಗಿರಬೇಕಾ”...

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...