ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸುದ್ದಿ ಹಿನ್ನೆಲೆಯಲ್ಲಿ ಸಿಎಂ ಕಛೇರಿ ಸಿಬ್ಬಂದಿ ಕಣ್ಣೀರು

11

“ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನಿರಂತವಾಗಿ ಪ್ರಸಾರವಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಸಿಎಂ ಕಛೇರಿ ಸಿಬ್ಬಂದಿ ಕಣ್ಣೀರು ಹಾಕಿದರು. ಇಂದು ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿ ಭಾವನಾತ್ಮಕ ಸನ್ನಿವೇಶಕ್ಕೆ ಸಾಕ್ಷಿಯಾಯ್ತು.
ಸಿಎಂ ಸಿದ್ದರಾಮಯ್ಯ ಅವರು ಸಂಜೆ ಜಾತಿಗಣತಿ ವರದಿ ಸ್ವೀಕರಿಸಲು ವಿಧಾನಸೌಧಕ್ಕೆ ಆಗಮಿಸಿದ್ದರು. ಈ ವೇಳೆ ಮುಖ್ಯಮಂತ್ರಿ ಕಚೇರಿಯ ನೌಕರರು ಹಾಗೂ ಪ್ರಮುಖವಾಗಿ ಗುತ್ತಿಗೆ ಆಧಾರದ ಸಿಬ್ಬಂದಿ ಸಿದ್ದರಾಮಯ್ಯ ಅವರನ್ನು ನೋಡಿ ತಡೆಯಲಾರದೆ ಕಣ್ಣೀರು ಹಾಕಲು ಆರಂಭಿಸಿದರು. ಸರ್, ನೀವು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಪ್ಲೀಸ್…” ಎಂದು ಸಿಬ್ಬಂದಿ ಕಣ್ಣೀರಿಡುತ್ತಾ ಮುಖ್ಯಮಂತ್ರಿಗಳ ಮುಂದೆ ಕೈಮುಗಿದು ಬೇಡಿಕೊಂಡರು.
ಸಿಬ್ಬಂದಿಯ ಈ ಭಾವುಕತೆಯನ್ನು ಕಂಡು ಕೊಂಚ ಭಾವುಕರಾದ ಸಿಎಂ ಸಿದ್ದರಾಮಯ್ಯ, ತಕ್ಷಣವೇ ತಮ್ಮ ವಿಶಿಷ್ಟ ಶೈಲಿಯ ಕೈಸನ್ನೆಯ ಮೂಲಕವೇ ಸಮಾಧಾನಪಡಿಸಿ, ಧೈರ್ಯ ತುಂಬಿ ಮುಂದೆ ಸಾಗಿದರು. ಸಿಎಂ ಕಚೇರಿ ಇತಿಹಾಸದಲ್ಲಿ ಇಂತಹದ್ದೊಂದು ಭಾವುಕ ನಡೆ ಕಂಡುಬಂದಿರುವುದು ಇದೇ ಮೊದಲು ಎನ್ನಲಾಗಿದೆ.
ಬೆಂಬಲಿಗರಿಂದ ಪ್ರತಿಭಟನೆಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿ ಬಳಿ ಜಮಾಯಿಸಿ ಸಿದ್ದರಾಮಯ್ಯ ಅವರು ಬೆಂಬಲಿಗರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಪ್ರತಿಭಟನೆ ನಡೆಸಿದರು. ಸಿಎಂ ಅಧಿಕೃತ ನಿವಾಸ ಕಾವೇರಿಯ ಹೊರಗೆ ನಿಯೋಜಿಸಲಾಗಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದರು.
ಈ ವೇಳೆ ಬೆಂಬಲಿಗರು ಸಿದ್ದರಾಮಯ್ಯ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದರು. ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ಯಲ್ಪಟ್ಟ ಬೆಂಬಲಿಗರಲ್ಲಿ ಒಬ್ಬರು, ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ, ರಾಜ್ಯದಲ್ಲಿ ಕಾಂಗ್ರೆಸ್ ಭಾರಿ ಹಿನ್ನಡೆ ಎದುರಿಸಬೇಕಾಗುತ್ತದೆ ಎಂದು ವರದಿಗಾರರಿಗೆ ತಿಳಿಸಿದರು.
ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಮತ್ತು ಅವರ ಅಹಿಂದ(ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಮತ್ತು ದಲಿತ) ಬೆಂಬಲವೇ ಕಾರಣ ಎಂದು ಒತ್ತಿ ಹೇಳಿದ ಅವರು, ಈ ಬಿಕ್ಕಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಕಾರಣ ಎಂದು ಆರೋಪಿಸಿದರು. ಮುಖ್ಯಮಂತ್ರಿ ಬದಲಾವಣೆಯ ಕ್ರಮದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನಾಕಾರರು, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆಗಳನ್ನು ಕೂಗಿದರು.

Leave a comment

Leave a Reply

Your email address will not be published. Required fields are marked *

Related Articles

ಭೂ ಕಬಳಿಕೆ ಪ್ರಕರಣ ಆರ್ಟ್ ಆಫ್ ಲಿವಿಂಗ್ ನ ಭೂ ಅತಿಕ್ರಮಣ ತನಿಖೆಗೆ ಎಸ್ ಐಟಿ ರಚಿಸಿದ ಕರ್ನಾಟಕ ರಾಜ್ಯ ಸರಕಾರ

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲಿಪುರ ಗ್ರಾಮದಲ್ಲಿ ಶ್ರೀ ಶ್ರೀ ರವಿಶಂಕರ್ ಅವರ ದಿ ಆರ್ಟ್...

ಅಕ್ರಮ ಮರಳು ಗಣಿಗಾರಿಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಉಪ ಆಯುಕ್ತರು ಮತ್ತು ತಹಶೀಲ್ದಾರ್‌ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಬಾಗಲಕೋಟೆಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಪರಿಶೀಲನೆಯಲ್ಲಿ ಕಂಡುಬಂದ ಬೆನ್ನಲ್ಲೇ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು,...

ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ: ಹಿಂದೂ ಯುವಕನ ಮೇಲೆ ತೀವ್ರ ಹಲ್ಲೆ; ನೊಂದು ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ,

ನೆಲಮಂಗಲ: ಮುಸ್ಲಿಂ ಯುವತಿಯೊಬ್ಬಳ ಜೊತೆಯಲ್ಲಿ ಓಡಾಡುತ್ತಿದ್ದನೆಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು...

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದೆಹಲಿಗೆ ಪಯಣ: ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಬುಧವಾರ ಅಪರಾಹ್ನ ದೆಹಲಿಗೆ ತೆರಳಿದ್ದು ಬೆಂಗಳೂರಿಗೆ ಯಾವಾಗ ಹಿಂತಿರುಗುತ್ತಾರೆ...