ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯ ಪ್ರಾರಂಭಿಸಿದ ::ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

17

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಾರನೇ ದಿನವೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದು, ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ, ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ(AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಆದೇಶ ಆದೇಶದಲ್ಲಿ ಏನಿದೆ? ಮುಖ್ಯಮಂತ್ರಿಗಳು ಜೂನ್‌ 4 ರಂದು ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರಸ್ತುತ ಇ-ಆಡಳಿತ ಇಲಾಖೆಯು ಸಿದ್ಧಪಡಿಸಿರುವ `ಕರ್ತವ್ಯ ಆಪ್ ’ ನಲ್ಲಿ ಈಗಾಗಲೇ ಎಚ್ ಆರ್ ಎಮ್ ಎಸ್ ನಲ್ಲಿ ಲಭ್ಯವಿರುವ ಎಲ್ಲಾ ಅಧಿಕಾರಿಗಳು ಹಾಗೂ ವರ್ಗದ ಮಾಹಿತಿಯನ್ನ ನೋಂದಾಯಿಸಲಾಗಿದೆ. ಆದ್ರೆ ಬಳಷ್ಟು ಅಧಿಕಾರಿ/ಸಿಬ್ಬಂದಿಗಳು ಈ ತಂತ್ರಾಂಶವನ್ನ (ಆಪ್ ) ನಿರಂತರವಾಗಿ ಬಳಸುತ್ತಿಲ್ಲದಿರುವುದು ಕಂಡುಬಂದಿದೆ. ಆದ್ದರಿಂದ ಈ ನಿರ್ದೇಶನ ತಪ್ಪದೇ ಪಾಲಿಸಲು ಸೂಚಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ,...

ರಾಜ್ಯಾದ್ಯಂತ ಹೋಮ್ ಸ್ಟೇ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್‌ಸ್ಟೇಗಳ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ 500ಕ್ಕೂ ಹೆಚ್ಚು ಹೋಮ್‌ಸ್ಟೇ...

ಬಿಡದಿ ಟೌನ್‌ಶಿಪ್‌ : ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು: ಬಿಡದಿ ಟೌನ್ ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ...

ಹೊಸಮುಖಗಳಿಗೆ ಆದ್ಯತೆ ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್

ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ...