ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

12

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು ಕೆಂಪೇಗೌಡ ದಿನಾಚರಣೆಯನ್ನು ಬಿಡಿಎ ವತಿಯಿಂದ ಆಚರಿಸುತ್ತಿದ್ದು, 15 ಲಕ್ಷ ಸಸಿ ನೆಡಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ವಿಶ್ವ ಪರಿಸರ ದಿನವನ್ನು, ಸಸಿ ನೆಡುವ ಅಭಿಯಾನ ಮತ್ತು ಪರಿಸರ ಜಾಗೃತಿ ಮತ್ತು ರಕ್ಷಣೆಗೆ ಕರೆ ನೀಡುವ ಮೂಲಕ ಆಚರಿಸಲಾಯಿತು. ವಿಧಾನಸೌಧದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆಯ ಬಳಿ ಸಸಿ ನೆಟ್ಟ ನಂತರ ಮಾತನಾಡಿದ ಅವರು, ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ ಗಿಡಗಳನ್ನು ಬೆಳೆಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು.
ವಿಶ್ವ ಪರಿಸರದ ದಿನದ ಅಂಗವಾಗಿ ಇಂದು ವಿಮಾನ ನಿಲ್ದಾಣದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರೊಂದಿಗೆ ಕೂಡಾ ಸಸಿ ನೆಡಲಾಗಿದೆ ಎಂದು ತಿಳಿಸಿದರು. ಕರ್ನಾಟಕ ಹೈಕೋರ್ಟ್, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ಪಶುವೈದ್ಯಕೀಯ ಮಂಡಳಿಯು ರಾಜ್ಯಾದ್ಯಂತ ಐದು ಕೋಟಿ ಸಸಿಗಳನ್ನು ನೆಡುವ ಮತ್ತು ನೀರಿನ ಮೂಲಗಳನ್ನು ಪುನರುಜ್ಜೀವನಗೊಳಿಸುವ ಗುರಿ ಹೊಂದಿರುವ ದೊಡ್ಡ ಪ್ರಮಾಣದ ಪರಿಸರ ಯೋಜನೆ ಪ್ರಾರಂಭಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ,...

ರಾಜ್ಯಾದ್ಯಂತ ಹೋಮ್ ಸ್ಟೇ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್‌ಸ್ಟೇ ಮಾಲೀಕರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್‌ಸ್ಟೇಗಳ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ 500ಕ್ಕೂ ಹೆಚ್ಚು ಹೋಮ್‌ಸ್ಟೇ...

ಬಿಡದಿ ಟೌನ್‌ಶಿಪ್‌ : ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ ಭೂಮಿಗೂ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು: ಬಿಡದಿ ಟೌನ್ ಶಿಪ್ ಜಟಾಪಟಿ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ...

ಹೊಸಮುಖಗಳಿಗೆ ಆದ್ಯತೆ ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್

ದೆಹಲಿದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ...