ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

17

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್ ರಚನೆಯಾಗಿದ್ದು ನೂತನ ಅಧ್ಯಕ್ಷರಾಗಿಕ್ರಿಯಾಶೀಲ ವ್ಯಕ್ತಿ ಸಂಘಟನಾ ಚತುರ  ಶಿಶಿರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಸದಾನಂದ ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ, ಕೋಶಾಧಿಕಾರಿಯಾಗಿ ಉಪನ್ಯಾಸಕರಾದ ರಾಮದಾಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಶ್ರೀಮತಿ ಪೂರ್ಣಿಮಾ ಶೆಟ್ಟಿ ಆಯ್ಕೆಯಾಗಿದ್ದಾರೆ.
ಶಾಲಾ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಶಾಲಾ ಹಳೆ ವಿದ್ಯಾರ್ಥಿಗಳ ಸಭೆಯನ್ನು ಜೂ. 7ರಂದು ಶಾಲೆಯಲ್ಲಿ ಕರೆಯಲಾಗಿದ್ದು ಈ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಬೈಲೂರು ಶಾಲಾ ಆವರಣದಲ್ಲಿ ನಡೆದ ಈ ಪುನರ್ ರಚನಾ ಸಭೆಯಲ್ಲಿ ಸಂಸ್ಥೆಯ ಪ್ರಗತಿಯ ಕುರಿತು ಹಲವು ಸಕಾರಾತ್ಮಕ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ವಸಂತಿ ಹೆಚ್. ಜಿ ಅವರು ಸಭೆಯ ನೇತೃತ್ವ ವಹಿಸಿ, ಶಾಲೆಯ ಪ್ರಸ್ತುತ ಅಗತ್ಯತೆಗಳ ಬಗ್ಗೆ ಹಳೆ ವಿದ್ಯಾರ್ಥಿಗಳ ಗಮನ ಸೆಳೆದರು.

ಶಾಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ  ಅಧ್ಯಕ್ಷರಾದ ವಸಂತ ಕುಲಾಲ್ ಅವರು ಉಪಸ್ಥಿತರಿದ್ದು, ಹೊಸ ಸಮಿತಿಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದರು. ಶಾಲೆಯ ಹಳೆಯ ನೆನಪುಗಳನ್ನು ಮೆಲುಕು ಹಾಕಿದ ನೂರಾರು ಹಳೆ ವಿದ್ಯಾರ್ಥಿಗಳು, ತಮ್ಮ ಮಾತೃಸಂಸ್ಥೆಯ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಸದಾ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಂತ ನೂತನ ಅಧ್ಯಕ್ಷರಾದ ಶಿಶಿರ್ ಶೆಟ್ಟಿ ನೇತೃತ್ವದಲ್ಲಿ ಎಲ್ಲರೂ ಜೊತೆಯಾಗಿ  ಶ್ರಮಿಸುವುದಾಗಿ ಈ ಸಂದರ್ಭದಲ್ಲಿ ಪಣ ತೊಟ್ಟರು.



ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ವಸಂತಿ ಎಚ್. ಜಿ, ಎಸ್.ಡಿ.ಎಂ.ಸಿ ಅಧ್ಯಕ್ಷ ವಸಂತ ಕುಲಾಲ್ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...