“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್ ರಚನೆಯಾಗಿದ್ದು ನೂತನ ಅಧ್ಯಕ್ಷರಾಗಿಕ್ರಿಯಾಶೀಲ ವ್ಯಕ್ತಿ ಸಂಘಟನಾ ಚತುರ ಶಿಶಿರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಸದಾನಂದ ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ, ಕೋಶಾಧಿಕಾರಿಯಾಗಿ ಉಪನ್ಯಾಸಕರಾದ ರಾಮದಾಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಶ್ರೀಮತಿ ಪೂರ್ಣಿಮಾ ಶೆಟ್ಟಿ ಆಯ್ಕೆಯಾಗಿದ್ದಾರೆ.
ಶಾಲಾ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಶಾಲಾ ಹಳೆ ವಿದ್ಯಾರ್ಥಿಗಳ ಸಭೆಯನ್ನು ಜೂ. 7ರಂದು ಶಾಲೆಯಲ್ಲಿ ಕರೆಯಲಾಗಿದ್ದು ಈ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಬೈಲೂರು ಶಾಲಾ ಆವರಣದಲ್ಲಿ ನಡೆದ ಈ ಪುನರ್ ರಚನಾ ಸಭೆಯಲ್ಲಿ ಸಂಸ್ಥೆಯ ಪ್ರಗತಿಯ ಕುರಿತು ಹಲವು ಸಕಾರಾತ್ಮಕ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ವಸಂತಿ ಹೆಚ್. ಜಿ ಅವರು ಸಭೆಯ ನೇತೃತ್ವ ವಹಿಸಿ, ಶಾಲೆಯ ಪ್ರಸ್ತುತ ಅಗತ್ಯತೆಗಳ ಬಗ್ಗೆ ಹಳೆ ವಿದ್ಯಾರ್ಥಿಗಳ ಗಮನ ಸೆಳೆದರು.
ಶಾಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷರಾದ ವಸಂತ ಕುಲಾಲ್ ಅವರು ಉಪಸ್ಥಿತರಿದ್ದು, ಹೊಸ ಸಮಿತಿಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದರು. ಶಾಲೆಯ ಹಳೆಯ ನೆನಪುಗಳನ್ನು ಮೆಲುಕು ಹಾಕಿದ ನೂರಾರು ಹಳೆ ವಿದ್ಯಾರ್ಥಿಗಳು, ತಮ್ಮ ಮಾತೃಸಂಸ್ಥೆಯ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಸದಾ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಂತ ನೂತನ ಅಧ್ಯಕ್ಷರಾದ ಶಿಶಿರ್ ಶೆಟ್ಟಿ ನೇತೃತ್ವದಲ್ಲಿ ಎಲ್ಲರೂ ಜೊತೆಯಾಗಿ ಶ್ರಮಿಸುವುದಾಗಿ ಈ ಸಂದರ್ಭದಲ್ಲಿ ಪಣ ತೊಟ್ಟರು.
ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ವಸಂತಿ ಎಚ್. ಜಿ, ಎಸ್.ಡಿ.ಎಂ.ಸಿ ಅಧ್ಯಕ್ಷ ವಸಂತ ಕುಲಾಲ್ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Leave a comment