ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

1

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರಲಾಲ್ ಖಟ್ಟರ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಅಹವಾಲು ಸಲ್ಲಿಸಿದರು. ಸದ್ಯ ದೆಹಲಿಯಲ್ಲಿರುವ ಶಿವಕುಮಾರ್ ಅವರು, ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ. ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ ಮೆಟ್ರೋ ಮೂರನೇ ಹಂತ ಯೋಜನೆಯಲ್ಲಿ 44.65 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಮೆಲ್ಸೇತುವೆ ನಿರ್ಮಾಣಕ್ಕೆ ಬಿಎಂಆರ್ ಸಿಎಲ್ ಮುಂದಾಗಿದ್ದು, ದಿನಾಂಕ 13-09-2024ರಂದು ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಿತ್ತು.
ಈ ಯೋಜನೆಯ ವೆಚ್ಚ 9,700 ಕೋಟಿ ರೂ. ಅನ್ನು ಕರ್ನಾಟಕ ಸರ್ಕಾರವೇ ಭರಿಸಲಿದೆ. 19-01-2026ರಂದು ಬಿಎಂಆರ್ ಸಿಎಲ್ ಮಂಡಳಿಯ 118ನೇ ಸಭೆಯಲ್ಲಿ ಸಣ್ಣ ಬದಲಾವಣೆ ಪ್ರಸ್ತಾಪ ಮಾಡಿದ್ದು, ಕೇಂದ್ರ ಸರ್ಕಾರ ಈ ಯೋಜನೆಯನ್ನು ಆರಂಭಿಸಲು ಬಿಎಂಆರ್ ಸಿಎಲ್ ಗೆ ಅನುಮತಿ ನೀಡಬೇಕು.
ಮೆಟ್ರೋ ಎರಡನೇ ಹಂತದ ಪರಿಷ್ಕೃತ ಯೋಜನಾ ವೆಚ್ಚಕ್ಕೆ ಅನುಮತಿ ಈ ಯೋಜನೆಗೆ ಕೇಂದ್ರ ಸರ್ಕಾರ 21-02-2014ರಂದು 26,405.14 ಕೋಟಿ ರೂ. ಅಂದಾಜು ವೆಚ್ಚಕ್ಕೆ ಅನುಮತಿ ನೀಡಿತ್ತು. 72.095 ಕಿ.ಮೀ ಉದ್ದ ಹಾಗೂ 61 ನಿಲ್ದಾಣಗಳನ್ನು ಒಳಗೊಂಡಿರುವ ಈ ಯೋಜನೆ ಅಂದಾಜು ವೆಚ್ಚ ಈಗ 40,425.02 ಕೋಟಿ ರೂ.ಗೆ ಅಂದರೆ 14,019.88 ಕೋಟಿ ರೂ. ಏರಿಕೆ ಮಾಡಲಾಗಿದ್ದು, ಆದಷ್ಟು ಬೇಗ ಈ ಪರಿಷ್ಕೃತ ಯೋಜನಾ ವೆಚ್ಚಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು.
ಮೆಟ್ರೋ ಮೂರನೇ ಎ ಹಂತಕ್ಕೆ ಅನುಮತಿ ಈ ಯೋಜನೆ ಸರ್ಜಾಪುರದಿಂದ ಹೆಬ್ಬಾಳದವರೆಗೆ ಒಟ್ಟು 37.804 ಕಿ.ಮೀ (14.28 ಕಿ.ಮೀ ಸುರಂಗ ಹಾಗೂ 23.524 ಕಿ.ಮೀ ಮೇಲ್ಸೇತುವೆ) ಉದ್ದವಿದ್ದು, ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕೆಲವು ಮಾರ್ಪಾಡು ಮಾಡಲಾಗಿದ್ದು, 25,999 ಕೋಟಿ ರೂ. ಅಂದಾಜು ವೆಚ್ಚದ ಪರಿಷ್ಕೃತ ಡಿಪಿಆರ್ ಅನ್ನು 29-04-2026ರಂದು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದ್ದು, ಆದಷ್ಟು ಬೇಗ ಇದಕ್ಕೆ ಅನುಮತಿ ನೀಡಬೇಕು. ಪ್ರಾದೇಶಿಕ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆ ಜಾರಿಗೆ ಅನುಮತಿ ಬೆಂಗಳೂರು- ಮೈಸೂರು, ಬೆಂಗಳೂರು- ಕನಕಪುರ, ಬೆಂಗಳೂರು- ತುಮಕೂರು, ಬೆಂಗಳೂರು- ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು- ಕೋಲಾರ ನಡುವೆ ಪ್ರಾದೇಶಿಕ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆ  ಜಾರಿಗೆ ಅನುಮತಿ ನೀಡಬೇಕು.

Leave a comment

Leave a Reply

Your email address will not be published. Required fields are marked *

Related Articles

ಜೂನ್ 27 ರಂದು ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ :: ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು...

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯ ಪ್ರಾರಂಭಿಸಿದ ::ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಾರನೇ ದಿನವೇ ಆಡಳಿತ ಯಂತ್ರಕ್ಕೆ ಚುರುಕು...

ಜಾತಿ, ಧರ್ಮ ಯಾವುದೇ ಪ್ರಭಾವಕ್ಕೂ ಮಣಿಯಬೇಡಿ: ಅಧಿಕಾರಿಗಳಿಗೆ ಸೂಚನೆ ನೀಡಿದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಇಂದು ವಿಧಾನಸೌಧದಲ್ಲಿ...

ಸಂಪುಟ ರಚನೆಯ ಕಸರತ್ತು ದೆಹಲಿಗೆ ತೆರಳಿದ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಸಂಪುಟ ರಚನೆಯ ಕಸರತ್ತು ಆರಂಭಿಸಿದ್ದು, ಸೋಮವಾರ ದೆಹಲಿಗೆ ತೆರಳಿ...