ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

20

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಇಂದು ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರು, ಅಲ್ಲಿಂದ ಕಾರಿನಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.
ತಮಿಳುನಾಡು ಸಿಎಂ ವಿಜಯ್‌ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಹೂಗುಚ್ಛ ನೀಡಿ ಸ್ವಾಗತ ಕೋರಿದರು. ಬಳಿಕ ಮಂತ್ರಘೋಷದೊಂದಿಗೆ ಕ್ಷೇತ್ರದೊಳಗೆ ಅರ್ಚಕ ವೃಂದ ಬರಮಾಡಿಕೊಂಡಿತು.
ವಿಜಯ್ ಅವರು ಸಹ ದೇವಸ್ಥಾನದ ಸಂಪ್ರದಾಯದಂತೆ ಶರ್ಟ್ ಬಿಚ್ಚಿ, ಶಲ್ಯ ಧರಿಸಿ ದೇವಸ್ಥಾನ ಪ್ರವೇಶಿಸುವ ಮೂಲಕ ಶಿಷ್ಟಾಚಾರ ಪಾಲನೆ ಮಾಡಿದರು. ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು.
ಸಿಎಂ ವಿಜಯ್‌ ಸಂಕಲ್ಪ ಪೂಜೆ ಮಾಡಿದರು. ಶಕ್ತಿ ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಪ್ರಾರ್ಥನೆ ಸಲ್ಲಿಸಿದರು. ಸಂಕಲ್ಪ ಪೂಜೆ ಬಳಿಕ ದೀಪಾರಾಧನೆ ಮಾಡಲಾಯಿತು. ಈ ವೇಳೆ ಸಿಎಂಗೆ ಅರ್ಚಕರು ರಕ್ಷಾ ದಾರ ಕಟ್ಟಿದರು. ಪೂಜೆ ಬಳಿಕ ವಿಜಯ್‌ ದೇವಸ್ಥಾನದಿಂದ ಹೊರಟರು.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು ನೂತನ ಸಚಿವರ ಸಂಭಾವ್ಯ ಖಾತೆಗಳ ಪಟ್ಟಿ

“ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್...

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ಡಿಸಿಸಿ ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳ ವೇಳೆ ನಾಯಕರು ಪಕ್ಷಾಂತರ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕುವ...

ಉಡುಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ:ಶಾಸಕಮಂಜುನಾಥ ಭಂಡಾರಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ...