ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

2

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ ರೈಲ್ವೇ ಇಲಾಖೆ ನೋಟಿಸ್ ಜಾರಿ ಮಾಡಿದೆ. ಜೂನ್ 20ರೊಳಗೆ ಖಾಲಿ ಮಸೀದಿ ಖಾಲಿ ಮಾಡಬೇಕೆಂದು ರೈಲ್ವೆ ಇಲಾಖೆ ಕಾನೂನುಬದ್ಧ ನೋಟಿಸ್ ಅಂಟಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.


ಕಾಶಿ ರೈಲು ನಿಲ್ದಾಣದ ಪುನರ್‌ಅಭಿವೃದ್ಧಿ ಯೋಜನೆಯಡಿ ನಿಲ್ದಾಣ ವಿಸ್ತರಣೆ ಮತ್ತು ಪ್ರಸ್ತಾವಿತ ನಿರ್ಮಾಣ ಕಾಮಗಾರಿಗಳಿಗಾಗಿ ರೈಲ್ವೆ ಭೂಮಿಯ ಮೇಲಿನ ಅತಿಕ್ರಮಣಗಳನ್ನು ತೆರವುಗೊಳಿಸುವ ಪ್ರಕ್ರಿಯೆಯ ಭಾಗವಾಗಿ ಈ ನೋಟಿಸ್ ನೀಡಲಾಗಿದೆ ಎಂದು ನಿಲ್ದಾಣ ಅಧೀಕ್ಷಕ ಅರ್ಪಿತ್ ಗುಪ್ತಾ ತಿಳಿಸಿದ್ದಾರೆ.
ರೈಲ್ವೆ ಅಧಿಕಾರಿಗಳು ಹಾಗೂ ಜಿಲ್ಲಾ ಆಡಳಿತವು ಈ ಹಿಂದೆ ಕಾಶಿ ರೈಲು ನಿಲ್ದಾಣದ ಸುತ್ತಮುತ್ತ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿದ್ದು, ರೈಲ್ವೆ ಭೂಮಿಯಲ್ಲಿರುವ ವಿವಿಧ ಕಟ್ಟಡಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು.
“ಕಾಶಿ ರೈಲು ನಿಲ್ದಾಣದ ವಿಸ್ತರಣೆ ಹಾಗೂ ಪ್ರಸ್ತಾವಿತ ಅಭಿವೃದ್ಧಿ ಕಾಮಗಾರಿಗಳಿಗೆ ರೈಲ್ವೆ ಭೂಮಿಯನ್ನು ಅತಿಕ್ರಮಣಮುಕ್ತಗೊಳಿಸುವ ಅಗತ್ಯವಿದೆ. ಅದರಂತೆ ವಿವಿಧ ಸ್ಥಳಗಳನ್ನು ಗುರುತಿಸಲಾಗಿದ್ದು, ಕಾನೂನು ಪ್ರಕ್ರಿಯೆಯ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.
ಈ ಕ್ರಮವು ಜೂನ್ 3ರಂದು ನಡೆದ ಇದೇ ರೀತಿಯ ಕಾರ್ಯಾಚರಣೆಯ ನಂತರ ಬಂದಿದ್ದು ಆಗ ಭೂ ಮಾಲೀಕತ್ವದ ವಿವಾದಕ್ಕೆ ಸಂಬಂಧಿಸಿದ ನ್ಯಾಯಾಲಯದ ಆದೇಶದ ಮೇರೆಗೆ, ಭಾರಿ ಭದ್ರತೆಯ ನಡುವೆ ರೈಲು ನಿಲ್ದಾಣ ಆವರಣದಲ್ಲಿದ್ದ ಅಜಗೈಬ್ ಶಹೀದ್ ಮಜರ್ ಹಾಗೂ ಒಂದು ಮಸೀದಿಯನ್ನು ನೆಲಸಮಗೊಳಿಸಲಾಗಿತ್ತು.
ಅಧಿಕಾರಿಗಳ ಪ್ರಕಾರ, ಕಾಶಿ ಮಾಡೆಲ್ ರೈಲು ನಿಲ್ದಾಣ ಯೋಜನೆಗಾಗಿ ನಡೆಸಿದ ಸಮೀಕ್ಷೆಯಲ್ಲಿ ಈ ಕಟ್ಟಡಗಳು ರೈಲ್ವೆ ಭೂಮಿಯ ಮೇಲೆ ಇರುವುದಾಗಿ ಪತ್ತೆಯಾಗಿತ್ತು. ಬಳಿಕ ಸ್ಥಳವನ್ನು ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿತ್ತು. ವಿಷಯ ನ್ಯಾಯಾಲಯದ ಮೆಟ್ಟಿಲೇರಿದ ನಂತರ, ತೀರ್ಪಿನ ಆಧಾರದ ಮೇಲೆ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು ಎಂದು ಅವರು ತಿಳಿಸಿದ್ದಾರೆ.
ರೈಲ್ವೆ ಆಡಳಿತವು ಈ ಕ್ರಮವು ನಿಲ್ದಾಣ ಪುನರ್‌ಅಭಿವೃದ್ಧಿ ಯೋಜನೆ ಮತ್ತು ಅತಿಕ್ರಮಣ ತೆರವು ಕಾರ್ಯಾಚರಣೆಯ ಭಾಗವಾಗಿದ್ದು, ಎಲ್ಲಾ ಕ್ರಮಗಳನ್ನು ಕಾನೂನುಬದ್ಧವಾಗಿ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ.



Leave a comment

Leave a Reply

Your email address will not be published. Required fields are marked *

Related Articles

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...

ಮಣಿಪುರದಲ್ಲಿ ಮತ್ತೆ ಮರುಕಳಿಸಿದ ಹಿಂಸಾಚಾರ ಕುಕಿ ಸಮುದಾಯದ ಇಬ್ಬರು ಸದಸ್ಯರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಮಣಿಪುರದಲ್ಲಿ ಕುಕಿ ಸಮುದಾಯದ ಇಬ್ಬರು ಸದಸ್ಯರನ್ನು ಗುರುವಾರ ಬೆಳಿಗ್ಗೆ 4:55ಕ್ಕೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ....

5ನೇ ತಲೆಮಾರಿನ ದೇಶಿಯ ಯುದ್ಧ ವಿಮಾನಗಳನ್ನು ಜಂಟಿಯಾಗಿ ನಿರ್ಮಿಸಲು ಭಾರತಕ್ಕೆ ಆಫರ್ ನೀಡಿದ,:: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ನವದೆಹಲಿ: 5ನೇ ತಲೆಮಾರಿನ ಯುದ್ಧ ವಿಮಾನಗಳನ್ನು ದೇಶೀಯವಾಗಿ ನಿರ್ಮಿಸಲು ಮುಂದಾಗಿರುವ ಭಾರತಕ್ಕೆ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್...