ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

19

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ ಈ ಏಳು ಯೋಜನೆಯ ಕೆಲಸಗಳು ಶರವೇಗದಲ್ಲಿ ನಡೆಯುತ್ತಿವೆ. ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ ಕಾಮಗಾರಿ ಪ್ರಗತಿಯಲ್ಲಿದ್ದು, ಸರ್ಕಾರವು ತನ್ನ ದೀರ್ಘಾವಧಿಯ ದೃಷ್ಟಿಯ ಭಾಗವಾಗಿ ಏಳು ಹೆಚ್ಚುವರಿ ಹೈಸ್ಪೀಡ್ ರೈಲು ಮಾರ್ಗಗಳನ್ನು ಈಗಾಗಲೇ ಗುರುತಿಸಿದೆ.
ಈ ಪ್ರಸ್ತಾವಿತ ಕಾರಿಡಾರ್‌ಗಳು ದೆಹಲಿ, ವಾರಣಾಸಿ, ಪುಣೆ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ನಗರಗಳನ್ನು ಸಂಪರ್ಕಿಸುವ ಗುರಿಯನ್ನು ಹೊಂದಿದ್ದು, ವಿಶಾಲವಾದ ರಾಷ್ಟ್ರೀಯ ಬುಲೆಟ್ ರೈಲು ಜಾಲಕ್ಕೆ ದಾರಿ ಮಾಡಿಕೊಡುತ್ತವೆ.
ದೇಶದ ಪ್ರಮುಖ ನಗರಗಳ ನಡುವೆ ಪ್ರಯಾಣದ ಸಮಯವನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಬರೋಬ್ಬರಿ 16 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ 7 ಹೊಸ ಬುಲೆಟ್ ಟ್ರೈನ್ ಕಾರಿಡಾರ್ ಯೋಜನೆಗಳನ್ನು ಘೋಷಿಸಿದೆ. ಇದರಲ್ಲಿ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂಪರ್ ಕೊಡುಗೆ ಸಿಕ್ಕಿದ್ದು, ಹೈದರಾಬಾದ್ ಮತ್ತು ಚೆನ್ನೈ ನಡುವಿನ ಪ್ರಯಾಣ ಇನ್ಮುಂದೆ ವಿಮಾನಕ್ಕಿಂತಲೂ ವೇಗವಾಗಲಿದೆ.
ಈ ಬುಲೆಟ್ ಟ್ರೈನ್ ಯೋಜನೆಗಳು ಭಾರತೀಯ ಸಾರಿಗೆ ವ್ಯವಸ್ಥೆಯ ಮುಖಪುಟವನ್ನೇ ಬದಲಾಯಿಸಲಿದ್ದು, ಬೆಂಗಳೂರಿನ ಜನರಿಗೆ ಇನ್ಮುಂದೆ ನೆರೆಯ ಮೆಟ್ರೋ ಸಿಟಿಗಳಿಗೆ ಹೋಗಿ ಬರುವುದು ಪಕ್ಕದ ಏರಿಯಾಗೆ ಹೋಗುವಷ್ಟೇ ಸುಲಭವಾಗಲಿದೆ. ಹೈದರಾಬಾದ್ – ಬೆಂಗಳೂರು ಕಾರಿಡಾರ್ ಬೆಂಗಳೂರು ಮತ್ತು ಹೈದರಾಬಾದ್ ದೇಶದ ಅತಿ ದೊಡ್ಡ ಟೆಕ್ ಹಬ್‌ಗಳು. ಸದ್ಯ ಈ ಎರಡು ನಗರಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸಬೇಕಾದರೂ ಕನಿಷ್ಠ 8.5 ಗಂಟೆ ಬೇಕು. ಆದರೆ ಬುಲೆಟ್ ಟ್ರೈನ್ ಬಂದ ಮೇಲೆ ಈ ಇಡೀ ಜರ್ನಿಯನ್ನು ಕೇವಲ 2 ಗಂಟೆಗಳಲ್ಲಿ ಮುಗಿಸಬಹುದು.
ಇದರಿಂದಾಗಿ ಎರಡೂ ನಗರಗಳ ನಡುವಿನ ಬಿಸಿನೆಸ್ ಮತ್ತು ಉದ್ಯೋಗದ ಸಂಪರ್ಕ ಮತ್ತಷ್ಟು ಸ್ಟ್ರಾಂಗ್ ಆಗಲಿದೆ ಕೇಂದ್ರ ಸರ್ಕಾರ ಪ್ರಸ್ತಾಪಿಸಿದ ಹೊಸ ಮಾರ್ಗಗಳು ಮುಂಬೈ-ಪುಣೆ, ಪುಣೆ-ಹೈದರಾಬಾದ್, ಹೈದರಾಬಾದ್-ಬೆಂಗಳೂರು, ಹೈದರಾಬಾದ್-ಚೆನ್ನೈ, ಚೆನ್ನೈ-ಬೆಂಗಳೂರು, ದೆಹಲಿ-ವಾರಣಾಸಿ ಮತ್ತು ವಾರಣಾಸಿ-ಸಿಲಿಗುರಿ. ಈ ಮಾರ್ಗಗಳು ಭಾರತದ ಕೆಲವು ದೊಡ್ಡ ಆರ್ಥಿಕ, ಕೈಗಾರಿಕಾ, ತಂತ್ರಜ್ಞಾನ ಮತ್ತು ಪ್ರವಾಸೋದ್ಯಮ ಕೇಂದ್ರಗಳನ್ನು ಸಂಪರ್ಕಿಸುವ ಗುರಿಯನ್ನು ಹೊಂದಿವೆ

Leave a comment

Leave a Reply

Your email address will not be published. Required fields are marked *

Related Articles

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ...

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ...

ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು...