ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ ಕ್ರೀಡಾ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಶ್ರೀ ನವೀನ್ ರಾಜ್ ಸಿಂಗ್ ಐಎಎಸ್ ಕ್ರೀಡಾ ಇಲಾಖೆ ಆಯುಕ್ತರಾದ ಕುಮಾರ್ ನಿರ್ದೇಶಕರಾದ ಜಿತೇಂದ್ರ ಶೆಟ್ಟಿ ಅವರನ್ನು ಭೇಟಿಯಾಗಿ, ಮುಂದಿನ ದಿನಗಳಲ್ಲಿ ನಡೆಯಲಿರುವ 27 ಕಂಬಳಗಳ ಯಶಸ್ವಿ ಆಯೋಜನೆಗೆ ಇಲಾಖೆಯಿಂದ ಅನುದಾನ ಒದಗಿಸಿ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕಂಬಳದ ಸಾಂಸ್ಕೃತಿಕ, ಕ್ರೀಡಾ ಹಾಗೂ ಪರಂಪರೆಯ ಮಹತ್ವದ ಕುರಿತು ಚರ್ಚೆ ನಡೆಸಲಾಯಿತು. ಕಂಬಳ ಸಮಿತಿಯ ಪರವಾಗಿ ಶ್ರೀ ನವೀನ್ ರಾಜ್ ಸಿಂಗ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಭೇಟಿಯಲ್ಲಿ ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ, ಖಜಾಂಚಿಗಳಾದ ಲೋಕೇಶ್ ಶೆಟ್ಟಿ ಮುಚ್ಚೂರು, ಜಿಲ್ಲಾ ಉಪಾಧ್ಯಕ್ಷರಾದ ಉದಯ ಶೆಟ್ಟಿ ಕಾಂತಾವರ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.



Leave a comment