ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಈ ಶಿಬಿರವು 2026ರ ಜುಲೈ 5ರಂದು ಭಾನುವಾರ ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಇಂದ್ರಪ್ರಸ್ಥ ಸಭಾಭವನ, ಕಾರ್ಕಳದಲ್ಲಿ ನಡೆಯಲಿದೆ.
ಶಿಬಿರದಲ್ಲಿ ಖ್ಯಾತ ವೈದ್ಯರಾದ ಡಾ. ಕಾರ್ತಿಕ್ ರಾವ್ (MD, DNB Medicine) ಅವರಿಂದ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣೆ ನಡೆಸಲಾಗುವುದು.

ಜೊತೆಗೆ ನೇತ್ರ ತಜ್ಞರಿಂದ ಕಣ್ಣಿನ ಸಮಗ್ರ ಪರೀಕ್ಷೆ, ಡಯಾಬಿಟಿಕ್ ರೆಟಿನೋಪತಿ ಮತ್ತು ಗ್ಲೂಕೋಮಾ ತಪಾಸಣೆ ಸೇರಿದಂತೆ ವಿವಿಧ ನೇತ್ರ ಸಂಬಂಧಿತ ಪರೀಕ್ಷೆಗಳು ಉಚಿತವಾಗಿ ಲಭ್ಯವಿರುತ್ತವೆ.
ಅಗತ್ಯವಿರುವ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ ಹಾಗೂ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗುವುದು.

ಅಲ್ಲದೆ ಡಾ. ರೋವಿನಾ ಡಿಸೋಜಾ ಅವರಿಂದ ಫಿಜಿಯೋಥೆರಪಿ ಸೇವೆ ಹಾಗೂ ಶ್ರೀಮತಿ ವೈಶಾಲಿ ಅವರಿಂದ ಆಕ್ಯುಪ್ರೆಶರ್ ಚಿಕಿತ್ಸೆಯೂ ಲಭ್ಯವಿರುತ್ತದೆ.
ಸಾರ್ವಜನಿಕರು ಈ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಮಧುಕರ ಕನ್ನಡ – 9844761421
ಮೋಹನ್ ದಾಸ್ ಶೆಟ್ಟಿ – 8496895530
ಪ್ರವೀಣ್ ತ್ರಂಗಾರ್ – 9901144080
ಪ್ರವೀಣ್ ಕುಮಾರ್ – 7892976977
ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ

Leave a comment