ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಿಗೆ ವರದಿ ಮಂಡನೆ

1

“ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ನಡೆಸಿದ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಿದೆ.
ಪರಿಷತ್ ಸದಸ್ಯ ಸಿ.ಟಿ ರವಿ, ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಎನ್ ಮಹೇಶ್ ನೇತೃತ್ವದ ತ್ರಿಸದಸ್ಯ ಸಮಿತಿಯು ಆಂತರಿಕ ಸತ್ಯಶೋಧನೆ ನಡೆಸಿ, ಸಾಂದರ್ಭಿಕ ಸಾಕ್ಷಿ, ಶಂಕೆ, ಮೂಲಗಳಿಂದ ಸಂಗ್ರಹಿಸಿದ ಮಾಹಿತಿ ಹಾಗೂ ಅನುಮಾನ ಇದ್ದ ಶಾಸಕರಿಂದ ಪಡೆದ ಮಾಹಿತಿ ಆಧರಿಸಿ ವರದಿ ಸಿದ್ಧಪಡಿಸಿದ್ದಾರೆ. ಈ ಮಧ್ಯಂತರ ವರದಿಯನ್ನು ಬಿಜೆಪಿ ಕಚೇರಿಯಲ್ಲಿ ಸಲ್ಲಿಕೆ ಮಾಡಿದ್ದು, ಬಳಿಕ ಬಿವೈವಿ ಹಾಗೂ ಸಿಟಿ ರವಿ ಇಬ್ಬರೂ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ.
ನಾಲ್ಕು ದಿನಗಳ ಕಾಲ ಆಂತರಿಕ ತನಿಖೆ ನಡೆಸಿದ ಸಮಿತಿಯು ಒಟ್ಟು ಮೂರು ಪುಟಗಳ ವರದಿಯನ್ನು ಸೀಲ್ಡ್ ಕವರ್‌ನಲ್ಲಿ ಸಲ್ಲಿಕೆ ಮಾಡಿದೆ. ಮೈತ್ರಿ ಪಕ್ಷಗಳಿಂದ ಒಟ್ಟು 12 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ
. ಈ ಪೈಕಿ 1 ಅಸಿಂಧು ಮತ. ಬಿಜೆಪಿಯಿಂದ 1 ಅಸಿಂಧು ಮತ ಸೇರಿ ಒಟ್ಟು 4 ಅಡ್ಡಮತ ಆಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದರ ಹೊರತಾಗಿ ಉಳಿದ ಅಡ್ಡ ಮತಗಳು ಜೆಡಿಎಸ್‌ನಿಂದಾಗಿವೆ. ವರದಿಯಲ್ಲಿ ಅಡ್ಡ ಮತ ಚಲಾಯಿಸಿದ ಶಾಸಕರ ಹೆಸರು ಉಲ್ಲೇಖಿಸಿಲ್ಲ ಎನ್ನಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...

ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ, ಮೆಟ್ರೋ ಮೂರನೇ ಹಂತ ಯೋಜನೆಗಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

“ನವದೆಹಲಿ: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಇಂಧನ, ವಸತಿ ಮತ್ತು ನಗರಾಭಿವೃದ್ಧಿ ಸಚಿವ...