ರಾಷ್ಟ್ರಪತಿ ಕಛೇರಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ ದಿನಾಂಕ 29.06.2026 ರಂದು ನವದೆಹಲಿಯ ಉಪರಾಷ್ಟ್ರಪತಿ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಮಾನ್ಯ ಎಐಸಿಸಿ ಅಧ್ಯಕ್ಷರಾದ *ಶ್ರೀ ಮಲ್ಲಿಕಾರ್ಜುನ ಖರ್ಗೆ* ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ನೆರವೇರಿತು.


ಈ ಸಮಾರಂಭದಲ್ಲಿ ಯುಪಿಎ ಅಧ್ಯಕ್ಷರಾದ *ಶ್ರೀಮತಿ ಸೋನಿಯಾ ಗಾಂಧಿ,* ಲೋಕಸಭಾ ಸಂಸದೆ *ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ,* *ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಧರ್ಮಪತ್ನಿ ಶ್ರೀಮತಿ ರಾಧಾ ಬಾಯಿ* ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ *ಶ್ರೀ ಮಂಜುನಾಥ ಭಂಡಾರಿ* ಅವರು ಪಾಲ್ಗೊಂಡಿದ್ದರು.


ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ *ಶ್ರೀ ಕೆ.ಸಿ. ವೇಣುಗೋಪಾಲ್,* ರಾಜ್ಯಸಭಾ ಸದಸ್ಯರಾದ *ಶ್ರೀ ನಾಸಿರ್ ಹುಸೇನ್* ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದು, ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶುಭಾಶಯಗಳನ್ನು ಕೋರಿದರು.


Leave a comment