ಪತಿಗಿಂತ ಹೆಚ್ಚು ಸಂಪಾದಿಸುವ ಪತ್ನಿಗೆ ಜೀವನಾಂಶ ನೀಡಬೇಕಾದ ಅಗತ್ಯ ಇಲ್ಲ ಕರ್ನಾಟಕ ಹೈಕೋರ್ಟ್

1

“ಬೆಂಗಳೂರು: ಪತಿಗಿಂತ ಹೆಚ್ಚು ಸಂಪಾದಿಸುವ ಪತ್ನಿಗೆ ಜೀವನಾಂಶ ನೀಡಬೇಕಾದ ಅಗತ್ಯ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ಮಹತ್ವದ ಆದೇಶ ನೀಡಿದೆ.
ವಿಚ್ಛೇದನ ಪ್ರಕರಣವೊಂದರಲ್ಲಿ ಪತ್ನಿ ತನಗಿಂತ ಹೆಚ್ಚಿನ ಸಂಬಳ ಪಡೆಯುತ್ತಿದ್ದರೂ ಆಕೆಗೆ ಜೀವನಾಂಶ ನೀಡುವಂತೆ ಆದೇಶಿಸಿದ ಕೆಳಹಂತಕದ ಕೋರ್ಟ್ ತೀರ್ಪು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪತ್ನಿ, ಪತಿಗಿಂತ ಹೆಚ್ಚು ಸಂಪಾದಿಸಿದಾಗ, ವಿಚಾರಣಾ ನ್ಯಾಯಾಲಯಗಳು ತಕ್ಷಣ ಜೀವನಾಂಶ ನೀಡುವಂತೆ ಆದೇಶಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಪತಿ ಸಂಬಳವೇ ಪತ್ನಿಗಿಂತ ಕಡಿಮೆಯಿದ್ದಾಗ ಜೀವನಾಂಶಕ್ಕೆ ಬಾದ್ಯಸ್ಥಳಲ್ಲ ಎಂದು ನ್ಯಾಯಮೂರ್ತಿ ಡಾ.ಚಿಲ್ಲಕೂರ್ ಸುಮಲತಾರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದ್ದು, ಜೀವನಾಂಶ ನೀಡಲು ಸೂಚಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ. 2024ರಲ್ಲಿ ವಿವಾಹವಾಗಿದ್ದ ದಂಪತಿ ಕೆಲ ತಿಂಗಳಲ್ಲೇ ಪ್ರತ್ಯೇಕವಾಗಿದ್ದು, ಪತಿಗೆ 60,646 ಸಂಬಳವಿದ್ದರೆ ಪತ್ನಿಗೆ ಮಾಸಿಕ 1 ಲಕ್ಷ ಸಂಬಳವಿತ್ತು. ಅಲ್ಲದೆ ಪತ್ನಿಗೆ ಮಕ್ಕಳು, ಇತರೆ ಬಾದ್ಯತೆಗಳಿಲ್ಲದಿರುವುದನ್ನು ಕೋರ್ಟ್ ಪರಿಗಣಿಸಿದ್ದು, ಪತಿ ಸಂಬಳವೇ ಪತ್ನಿಗಿಂತ ಕಡಿಮೆಯಿದ್ದಾಗ ಜೀವನಾಂಶಕ್ಕೆ ಬಾದ್ಯಸ್ಥಳಲ್ಲ ಎಂದು ಹೈಕೋರ್ಟ್ ಹೇಳಿದೆ. ಅಲ್ಲದೇ ಪತ್ನಿಯನ್ನು ಪತಿಯೇ ಸಲಹಬೇಕು ಎಂಬ ಕಾರಣದ ಮೇರೆಗೆ ಜೀವನಾಂಶವನ್ನು ಮಂಜೂರು ಮಾಡುವ ಆದೇಶವನ್ನು ಹೊರಡಿಸಲು ನ್ಯಾಯಾಲಯಗಳು ಒಲವು ತೋರಬಾರದು ಎಂದು ಹೈಕೋರ್ಟ್ ಸಲಹೆ ನೀಡಿದೆ.
“ಪತ್ನಿ ಆರ್ಥಿಕವಾಗಿ ಸದೃಢಳಾಗಿದ್ದರೆ ಮತ್ತು ಹೆಂಡತಿಯ ಆದಾಯವು ಗಂಡನ ಆದಾಯಕ್ಕಿಂತ ಹೆಚ್ಚಿದ್ದರೆ ಹಾಗೂ ಮಕ್ಕಳನ್ನು ನೋಡಿಕೊಳ್ಳುವಂತಹ ಯಾವುದೇ ಇತರ ಹೊಣೆಗಾರಿಕೆಗಳು ಹೆಂಡತಿಗೆ ಇರದಿದ್ದರೆ, ನ್ಯಾಯಾಲಯಗಳು ಮಹಿಳೆಯರಿಗೆ ಜೀವನಾಂಶ ನೀಡಬೇಕು ಅಥವಾ ಹೆಂಡತಿಯನ್ನು ಅವಳ ಗಂಡನೇ ಸಾಕಬೇಕು ಎಂಬ ಆಧಾರದ ಮೇಲೆ ಜೀವನಾಂಶವನ್ನು ನೀಡುವ ಆದೇಶವನ್ನು ಹೊರಡಿಸಬಾರದು” ಎಂದು ಹೈಕೋರ್ಟ್ ಹೇಳಿದೆ.

Leave a comment

Leave a Reply

Your email address will not be published. Required fields are marked *

Related Articles

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಿಗೆ ವರದಿ ಮಂಡನೆ

“ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ನಡೆಸಿದ ಸಿಟಿ ರವಿ ನೇತೃತ್ವದ ಸತ್ಯಶೋಧನಾ...

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...

ಪಿ ಎಚ್ ಡಿ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಿ ಪ್ರಾಧ್ಯಾಪಕನ ಅಮಾನತು

“ಧಾರವಾಡ: ಪಿ ಎಚ್ ಡಿ  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ...

ಕೊಲ್ಲೂರು ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್

“ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ...