ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026ಚಾಲನೆ ಪ್ರವಾಸೋದ್ಯಮ ಸಚಿವ ಕೆಜೆ ಜಾರ್ಜ್

20

ಬೆಂಗಳೂರು: ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡುವ ‘ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ ಯನ್ನು ರೂಪಿಸಲಾಗುತ್ತಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಶುಕ್ರವಾರ ಹೇಳಿದ್ದಾರೆ. ಇಂಧನ ಭವನದಲ್ಲಿ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜ್ಯದ ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸುವ ದೂರದೃಷ್ಟಿಯ ಕಾರ್ಯತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ರಾಜ್ಯದ ಕರಾವಳಿ ಹಾಗೂ ಮಲೆನಾಡು ವ್ಯಾಪ್ತಿಯ ಆರು ಜಿಲ್ಲೆಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸಿದ್ಧವಾಗುತ್ತಿರುವ ಹೊಸ ಪ್ರವಾಸೋದ್ಯಮ ನೀತಿಯಲ್ಲಿ, ವಿಷಯಾಧಾರಿತ  ಪ್ರವಾಸೋದ್ಯಮ ಸರ್ಕೀಟ್‌ಗಳು, ಕಡಲತೀರ ಪ್ರವಾಸೋದ್ಯಮ, ಕ್ರೂಸ್‌ ಪ್ರವಾಸೋದ್ಯಮ, ಸಾಹಸ ಕ್ರೀಡೆಗಳು ಹಾಗೂ ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಸಚಿವರು ತಿಳಿಸಿದರು. ಅಂತಾರಾಷ್ಟ್ರೀಯ ಕ್ರೂಸ್‌ ಹಡಗುಗಳು ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಬಂದರುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಮಗ್ರ ಕಾರ್ಯತಂತ್ರ ರೂಪಿಸಬೇಕಿದೆ. ಕ್ರೂಸ್‌ ಪ್ರವಾಸಿಗರು ಕರ್ನಾಟಕದಲ್ಲಿ ಹೆಚ್ಚು ದಿನ ಉಳಿಯುವಂತೆ ಆಕರ್ಷಕ ಪ್ರವಾಸೋದ್ಯಮ ಪ್ಯಾಕೇಜ್‌ಗಳು ಮತ್ತು ಸರ್ಕೀಟ್‌ಗಳನ್ನು ಅಭಿವೃದ್ಧಿಪಡಿಸಬೇಕು

. ಈ ನಿಟ್ಟಿನಲ್ಲಿ ಪ್ರಮುಖ ಕ್ರೂಸ್‌ ಆಪರೇಟರ್‌ಗಳೊಂದಿಗೆ ಸಭೆ ನಡೆಸಿ, ಅವರ ಹಾಗೂ ಪ್ರವಾಸಿಗರ ನಿರೀಕ್ಷೆಗಳನ್ನು ಆಧರಿಸಿ ನೀತಿಯಲ್ಲಿ ಅಗತ್ಯ ಬದಲಾವಣೆಗಳನ್ನು ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರಾದ ಕೆಜೆ ಜಾರ್ಜ್‌ ಸೂಚಿಸಿದರು.
ಬೀಚ್‌ ಪ್ರವಾಸೋದ್ಯಮವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಬ್ಲೂ ಫ್ಲಾಗ್‌ ಬೀಚ್‌ಗಳ ಅಭಿವೃದ್ಧಿ, ಸ್ವಚ್ಛತೆ, ಸುರಕ್ಷತೆ, ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಮೂಲಸೌಕರ್ಯ, ಜಲಕ್ರೀಡೆಗಳು  ಸಾಹಸ ಚಟುವಟಿಕೆಗಳು ಹಾಗೂ ಸಮುದ್ರತೀರದಲ್ಲಿ ಗುಣಮಟ್ಟದ ಪ್ರವಾಸಿ ಅನುಭವ ಕಲ್ಪಿಸುವ ಯೋಜನೆಗಳನ್ನು ಹೊಸ ನೀತಿಯಲ್ಲಿ ಸೇರಿಸಬೇಕು ಎಂದು ಅವರು ತಿಳಿಸಿದರು.
ಇದರ ಜೊತೆಗೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ  ಮತ್ತು ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಗುಣಮಟ್ಟದ ವಸತಿ, ಮೂಲಭೂತ ಸೌಕರ್ಯ, ಸ್ವಚ್ಛತೆ, ಮಾಹಿತಿ ವ್ಯವಸ್ಥೆ ಹಾಗೂ ಪ್ರವಾಸಿಗರಿಗೆ ಅಗತ್ಯವಾದ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಮೂಲಕ ಪ್ರವಾಸಿಗರ ಅನುಭವವನ್ನು ಉತ್ತಮಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
“ಪ್ರವಾಸೋದ್ಯಮ ಎಂದರೆ ಕೇವಲ ಪ್ರವಾಸಿ ತಾಣಗಳ ಅಭಿವೃದ್ಧಿಯಲ್ಲ; ಪ್ರವಾಸಿಗರಿಗೆ ವಿಶ್ವದರ್ಜೆಯ ಅನುಭವವನ್ನು ನೀಡುವ ಸಮಗ್ರ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವುದು. ಉತ್ತಮ ಮೂಲಸೌಕರ್ಯ, ಸುಲಭ ಸಂಪರ್ಕ, ಸುರಕ್ಷತೆ ಮತ್ತು ಗುಣಮಟ್ಟದ ಸೇವೆಗಳ ಮೂಲಕವೇ ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಉತ್ತಮ ಸ್ಥಾನ ಪಡೆಯಬಹುದಾಗಿದೆ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು .

Leave a comment

Leave a Reply

Your email address will not be published. Required fields are marked *

Related Articles

ಅಧಿಕಾರ ದುರುಪಯೋಗ ಹಿಂದೂ ಕಾರ್ಯಕರ್ತನ ಬಂಧನ ಸಂಬಂಧ ಎಸಿಪಿ ರೀನಾ ಸುವರ್ಣ ಮತ್ತು ಡಿಸಿಪಿಗೆ ಗಂಭೀರ ಎಚ್ಚರಿಕೆ ನೀಡಿದ ಹೈ ಕೋರ್ಟ್ ನ್ಯಾಯಾಧೀಶರು

ಬೆಂಗಳೂರು: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಆಯೋಜನೆಗೊಂಡಿದ್ದ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಶೋ ರದ್ದು ಮಾಡುವಂತೆ ಹಿಂದೂ...

ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ ಕೂಗಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆಗೈದ ಮುಸ್ಲಿಂ ಪುಂಡರು

“ಬೆಂಗಳೂರು: ಈದ್ ಮೆರವಣಿಗೆ ವೇಳೆ 100ಕ್ಕೂ ಹೆಚ್ಚು ಮುಸ್ಲಿಂ ಪುಂಡರು ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ...

ರೈತರಿಗೆ ನೀಡುತ್ತಿರುವ ಬೆಳೆ ಸಾಲ ಶೂನ್ಯ ಬಡ್ಡಿ ದರ ಕೃಷಿ ಸಾಲಮಿತಿ 5 ಲಕ್ಷ ರೂ ಗೆ ಏರಿಕೆ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ರೈತ ಸದಸ್ಯರಿಗೆ ನೀಡುವ ಶೂನ್ಯ ಬಡ್ಡಿ ದರದ ಸಾಲಮಿತಿಯನ್ನು 5...

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೊದಲ ಶಾಸಕಾಂಗ ಪಕ್ಷದ ಸಭೆಗೆ ಸಿದ್ದರಾಮಯ್ಯ ಸೇರಿ ಅತೃಪ್ತ ಶಾಸಕರ ಗೈರು

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೊದಲ ಕಾಂಗ್ರೆಸ್...