ವಿಧಾನಪರಿಷತ್ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್ ಗೆ ಸಹಾಯ ಮಾಡುವ ಕೆಲಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಡಿದ್ದಾನೆ:: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

0

ವಿಜಯಪುರ: ಅತ್ಯಂತ ವ್ಯವಸ್ಥಿತವಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ಸಹಾಯ ಮಾಡುವ ಕೆಲಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಡಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದಿದ್ದಾರೆ. ವಿಜಯಪುರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವೈಯಕ್ತಿಕ ವಿಚಾರ ಹಾಗೂ ನನ್ನ ಕುಟುಂಬದ ಬಗ್ಗೆ ಕೆಟ್ಟ ರೀತಿಯಲ್ಲಿ ಮಾತನಾಡಿದರೆ, ನಿಮ್ಮ ಕುಟುಂಬದ ಇತಿಹಾಸ ನನ್ನ ಬಳಿ ಇದೆ. ಅಗತ್ಯ ಬಂದರೆ ಅದನ್ನೂ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಬೇಕಾಗುತ್ತದೆ. ನಿಮ್ಮ ಚೇಲಾಗಳಿಂದ ನನ್ನ ವಿರುದ್ಧ ಏನಾದರೂ ಪೋಸ್ಟ್ ಮಾಡಿಸಿದರೆ, ಅದಕ್ಕಿಂತ ತೀಕ್ಷ್ಣವಾಗಿ ನಾನು ಉತ್ತರ ನೀಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ನಾನು ಮೊನ್ನೆ ಬಿಜೆಪಿಗೆ ಮತ ಹಾಕಿದ್ದೇನೆ. ನಾನು ಯಾವ ಪಕ್ಷದ ಶಾಸಕನಾಗಿದ್ದೇನೋ ಆ ಪಕ್ಷಕ್ಕೆ ಮತ ಹಾಕಿದ್ದೇನೆ. ಇದರಿಂದ ಕೆಲವರ ಎದೆ ಒಡೆದಂತಾಗಿದೆ ಎಂದು ಹೇಳಿದರು. ಕೆಲವರು ಕಾಂಗ್ರೆಸ್‌ನಿಂದ ಹಣ ಹಾಗೂ ಅಭಿವೃದ್ಧಿಗೆ ಅನುದಾನ ಸಿಗಬಹುದು ಎಂದು ನಿರೀಕ್ಷಿಸಿದ್ದರು. ಆದರೆ ಬಿಜೆಪಿಯ ಕೆಲ ಶಾಸಕರು ಕೂಡ ಮತ ಹಾಕಿದ್ದಾರೆ. ನಮ್ಮ ಮಾಹಿತಿಯ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷರೇ ಮತ ಹಾಕಿಸಿರುವ ಸಾಧ್ಯತೆಯಿದೆ ಎಂದು ಯತ್ನಾಳ ಆರೋಪಿಸಿದರು. ಡಿ.ಕೆ. ಶಿವಕುಮಾರ್ ಹೇಳಿದಂತೆ ಮತ ಹಾಕದಿದ್ದರೆ ನನ್ನ ಹಗರಣಗಳನ್ನು ಹೊರತೆಗೆಯುತ್ತಾರೆ ಎಂಬ ಭಯದಿಂದ ಬಿಜೆಪಿ ರಾಜ್ಯಾಧ್ಯಕ್ಷರು ನಡೆದುಕೊಂಡಿದ್ದಾರೆ. ಮತದಾನಕ್ಕೂ ಮುನ್ನ ವಿಪ್ ನೀಡಬೇಕಿತ್ತು. ಆದರೆ ಮತದಾನದ ನಂತರ ವಿಪ್ ಜಾರಿಗೊಳಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಬೆಂಬಲ ನೀಡುವ ಉದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷರು ನಾಚಿಕೆಗೇಡಿನ ಕೆಲಸ ಮಾಡಿದ್ದಾರೆ ಎಂದು ಟೀಕಿಸಿದರು.

ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು ಮಾಹಿತಿ ನೀಡಿರುವುದಾಗಿ ತಿಳಿಸಿದ ಅವರು, ಈ ಹಿನ್ನೆಲೆಯಲ್ಲಿ ಕೆಲವು ನಕಲಿ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ತಾವು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂಬ ಅನುಮಾನ ಮೂಡಿಸುವ ರೀತಿಯ ಪೋಸ್ಟ್‌ಗಳನ್ನು ಹಾಕಿಸಲಾಗಿದೆ ಎಂದು ಆರೋಪಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಶೃಂಗೇರಿಯಲ್ಲೂ ಭೂಕುಸಿತದ ಆತಂಕ; ಅಂಗಡಿ, ಮನೆ ಖಾಲಿ ಮಾಡಲು ಸೂಚನೆ ಬೃಹತ್ ತಡೆಗೋಡೆಯಲ್ಲಿನ ಬಿರುಕು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು,...

ಬಿಜೆಪಿಯ ಪ್ರಮುಖ ಮೂವರು ನಾಯಕರಿಗೆ ನೋಟಿಸ್ ಜಾರಿ ಮಾಡಿದ ಬಿಜೆಪಿ ಕೋರ್ ಕಮಿಟಿ

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯು ಸುಮಾರು ಎರಡೂವರೆ ಗಂಟೆ ಕಾಲ ನಡೆಯಿತು. ಕಾಂಗ್ರೆಸ್...

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026ಚಾಲನೆ ಪ್ರವಾಸೋದ್ಯಮ ಸಚಿವ ಕೆಜೆ ಜಾರ್ಜ್

ಬೆಂಗಳೂರು: ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ...

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಕಸರತ್ತು ಕೇಂದ್ರ ಸಚಿವ ವಿ ಸೋಮಣ್ಣಗೆ ಒಲಿಯಲಿದೆಯೇ ರಾಜ್ಯಾಧ್ಯಕ್ಷ ಸ್ಥಾನ

ಬೆಂಗಳೂರು: ಬಿ ವೈ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಕೂಗು ಬಹಳ ಹಿಂದಿನಿಂದಲೂ ಕೇಳಿ...