ಐಬಿ ಅಧಿಕಾರಿ ಅಂಕಿತ್ ಶರ್ಮಾ ಕೊಲೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ತಾಹೀರ್ ಹುಸೇನ್ ದೋಷಿ

2

ದೆಹಲಿ: 2020ರ ದೆಹಲಿ ಸಿಎಎ ಗಲಭೆಯ ವೇಳೆ ಇಂಟೆಲಿಜೆನ್ಸ್ ಬ್ಯೂರೋ  ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿಯ ಕರ್ಕಾರ್ಡೂಮ ನ್ಯಾಯಾಲಯವು ಆಮ್ ಆದ್ಮಿ ಪಕ್ಷದ  ಮಾಜಿ ನಾಯಕ ತಾಹೀರ್ ಹುಸೇನ್ ಮತ್ತು ಇತರ ನಾಲ್ವರು ಪ್ರಮುಖ ಆರೋಪಿಗಳು ದೋಷಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಏನಿದು ಪ್ರಕರಣ? ಫೆಬ್ರವರಿ 2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ  ವಿರೋಧಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿಯಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿತ್ತು. ಈ ಗಲಭೆಯ ಸಂದರ್ಭದಲ್ಲಿ, ಫೆಬ್ರವರಿ 25 ರಂದು ದಿನಸಿ ಸಾಮಗ್ರಿಗಳನ್ನು ಖರೀದಿಸಿ, ಮನೆಗೆ ಮರಳುತ್ತಿದ್ದ 26 ವರ್ಷದ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಚಾಂದ್ ಬಾಗ್ ಪ್ರದೇಶದಲ್ಲಿ ಉದ್ರಿಕ್ತ ಗಲಭೆಕೋರರ ಗುಂಪು ಅಪಹರಿಸಿ, ಬರ್ಬರವಾಗಿ ಕೊಲೆ ಮಾಡಿ ಶವವನ್ನು ಹತ್ತಿರದ ಚರಂಡಿಗೆ ಎಸೆದಿತ್ತು. ತನಿಖೆಯ ವೇಳೆ ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್ ಮನೆಯನ್ನು ಗಲಭೆಕೋರರು ಕಲ್ಲು ತೂರಾಟ ನಡೆಸಲು ಮತ್ತು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಬಳಸಿದ್ದರು ಎಂಬುದು ಸಾಬೀತಾಗಿತ್ತು.
ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಪ್ರವೀಣ್ ಸಿಂಗ್ ಅವರ ಪೀಠವು, ತಾಹೀರ್ ಹುಸೇನ್‌ನನ್ನು ಕೊಲೆ, ಅಪಹರಣ, ದಂಗೆ ಮತ್ತು ಧರ್ಮಗಳ ನಡುವೆ ದ್ವೇಷ ಸೇರಿದಂತೆ ಹಲವು ಗಂಭೀರ ಕಾಯ್ದೆಗಳ ಅಡಿಯಲ್ಲಿ ದೋಷಿ ಎಂದು ತೀರ್ಪು ನೀಡಿದೆ. ಹುಸೇನ್ ಜೊತೆಗೆ ಇತರ 4 ಆರೋಪಿಗಳಾದ ನಾಜಿಮ್, ಕಾಸಿಮ್, ಅನಾಸ್ ಮತ್ತು ಜಾವೇದ್ ಅವರನ್ನೂ ನ್ಯಾಯಾಲಯ ದೋಷಿಗಳು ಎಂದು ಪರಿಗಣಿಸಿದೆ.
ಆದರೆ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದಲ್ಲಿದ್ದ ಇತರ 6 ಜನರನ್ನು ಖುಲಾಸೆಗೊಳಿಸಲಾಗಿದೆ. ಏತನ್ಮಧ್ಯೆ,ಸಿಎಎ ವಿರೋಧಿ ಗಲಭೆಯ ವೇಳೆ ಒಟ್ಟು 53 ಜನರು ಪ್ರಾಣ ಕಳೆದುಕೊಂಡಿದ್ದರು. ಮತ್ತು ನೂರಾರು ಜನರು ಗಾಯಗೊಂಡಿದ್ದರು

Leave a comment

Leave a Reply

Your email address will not be published. Required fields are marked *

Related Articles

ತಾಳ್ಮೆಯಿಂದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಿ ಇಲ್ಲ ಬೇರೆ ದಾರಿ ನೋಡಿಕೊಳ್ಳಿ ರಾಜ್ಯ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ ಬಿಜೆಪಿ ನಾಯಕ ರಾಧಾ ಮೋಹನ್ ದಾಸ್ ಅಗರ್ವಾಲ್

ಬೆಂಗಳೂರು: ಒಂದೋ ಬಾಯಿ ಮುಚ್ಚಿಕೊಂಡು, ಒಗ್ಗಟ್ಟಿನಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ. ಇಲ್ಲವೇ, ಬೇರೆ ದಾರಿ ನೋಡಿಕೊಳ್ಳಿ...

ಪತಿಗಿಂತ ಹೆಚ್ಚು ಸಂಪಾದಿಸುವ ಪತ್ನಿಗೆ ಜೀವನಾಂಶ ನೀಡಬೇಕಾದ ಅಗತ್ಯ ಇಲ್ಲ ಕರ್ನಾಟಕ ಹೈಕೋರ್ಟ್

“ಬೆಂಗಳೂರು: ಪತಿಗಿಂತ ಹೆಚ್ಚು ಸಂಪಾದಿಸುವ ಪತ್ನಿಗೆ ಜೀವನಾಂಶ ನೀಡಬೇಕಾದ ಅಗತ್ಯ ಇಲ್ಲ ಎಂದು ಕರ್ನಾಟಕ ಹೈಕೋರ್ಟ್...

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಿಗೆ ವರದಿ ಮಂಡನೆ

“ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ನಡೆಸಿದ ಸಿಟಿ ರವಿ ನೇತೃತ್ವದ ಸತ್ಯಶೋಧನಾ...

ನಮ್ಮಿಂದ ಬಿಜೆಪಿ ಹಾಳಾಗಿಲ್ಲ: ನಮ್ಮಿಂದಾಗಿ ಮಂತ್ರಿಯಾಗಿ ಲಂಚ ಪಡೆದು ನೀವು ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ನೀವು ಕಾರಣರಾದೀರಿ ಈಶ್ವರಪ್ಪಗೆ:: ಬಿ ಸಿ ಪಾಟೀಲ್ ತಿರುಗೇಟು

ಬೆಂಗಳೂರು: ಈ ಹಿಂದೆ ದುಡ್ಡು ಕೊಟ್ಟು ಕರೆತಂದ 17 ಕಾಂಗ್ರೆಸ್ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ...