ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

1

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಸೋಮವಾರ ಘೋಷಿಸಿದ್ದಾರೆ. ಅಲ್ಲದೆ ದೇಶಾದ್ಯಂತ ಇತರ ವಕೀಲರು ಈ ಸಿಜೆಪಿಗೆ ಕಾನೂನು ನೆರವು ನೀಡಬೇಕೆಂದು ಒತ್ತಾಯಿಸಿದ್ದಾರೆ. ಪ್ರತಿಭಟನಾಕಾರರ ವಿರುದ್ಧ ತೆಗೆದುಕೊಂಡ ಕಾನೂನು ಕ್ರಮಗಳನ್ನು ಪತ್ತೆಹಚ್ಚಲು ಮತ್ತು ಅವರನ್ನು ವಕೀಲರೊಂದಿಗೆ ಸಂಪರ್ಕಿಸುವ ವೆಬ್‌ಸೈಟ್ ಅನ್ನು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರಾರಂಭಿಸಲಿದೆ ಎಂದು ಕಬಿಲ್ ಸಿಬಲ್ ಅವರು ತಿಳಿಸಿದ್ದಾರೆ. ಇಂದು ಸಿಜೆಪಿ ವಕ್ತಾರ ಸೌರವ್ ದಾಸ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಪಿಲ್ ಸಿಬಲ್ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುವುದನ್ನು ತಡೆಯಲು ಮತ್ತು ಅವರಿಗೆ ಅಗತ್ಯ ಕಾನೂನು ನೆರವು ನೀಡುವುದಾಗಿ ಹೇಳಿದ್ದಾರೆ.
ಪ್ರತಿಭಟನಾಕಾರರ ಮೇಲೆ ಎಲ್ಲಿ, ಏನು ಕ್ರಮ ಜರುಗಿಸಲಾಗಿದೆ ಎಂಬುದನ್ನು ಟ್ರ್ಯಾಕ್ ಮಾಡಲು ಸಿಜೆಪಿ ಒಂದು ಬಲವಾದ ಚೌಕಟ್ಟನ್ನು ರೂಪಿಸಲಿದೆ. ಉಚಿತವಾಗಿ ಕಾನೂನು ನೆರವು ನೀಡಲು ಬಯಸುವ ವಕೀಲರು ತಮ್ಮ ಹೆಸರು, ಸ್ಥಳ ಹಾಗೂ ಸಹಾಯದ ವಿವರಗಳನ್ನು ನೋಂದಾಯಿಸಿಕೊಳ್ಳಲು ಪ್ರತ್ಯೇಕ ವೆಬ್‌ಸೈಟ್ ತೆರೆಯಲಾಗುವುದು ಎಂದು ತಿಳಿಸಿದರು. ಎಲ್ಲೆಲ್ಲಿ ಕಾನೂನನ್ನು ದುರುಪಯೋಗಪಡಿಸಿಕೊಂಡು ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಸುಳ್ಳು ಕೇಸುಗಳನ್ನು ಹಾಕಲಾಗುತ್ತದೆಯೋ, ಅಲ್ಲೆಲ್ಲಾ ನಾವು ಅವರ ಪರವಾಗಿ ನಿಲ್ಲುತ್ತೇವೆ. ದೇಶಾದ್ಯಂತ ನಮ್ಮ ವಕೀಲರು ಅವರಿಗೆ ಬೆಂಬಲ ನೀಡಲಿದ್ದಾರೆ. ನಾನು ಈ ನಿಧಿಗೆ 1 ಕೋಟಿ ರೂಪಾಯಿ ನೀಡುತ್ತಿದ್ದು, ದೇಶದ ಇತರ ವಕೀಲರು ಹಾಗೂ ಸಾರ್ವಜನಿಕರು ಸಹ ದೇಣಿಗೆ ನೀಡಬೇಕಾಗಿ ವಿನಂತಿಸುತ್ತೇನೆ ಎಂದು ಕಪಿಲ್ ಸಿಬಲ್ ಮನವಿ ಮಾಡಿದರು.

Leave a comment

Leave a Reply

Your email address will not be published. Required fields are marked *

Related Articles

ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಮಂಡನೆಗೆ ದೆಹಲಿಯಲ್ಲಿ ರಾಜ್ಯದ ಸಂಸದರ ಸಭೆ ನಡೆಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ಜಲಸಂಪನ್ಮೂಲ ಇಲಾಖೆಯನ್ನು ಹೊರತುಪಡಿಸಿ ಕೇಂದ್ರ ಸರ್ಕಾರದಿಂದ ಬಾಕಿ ಇರುವ ಪ್ರಮುಖ ಯೋಜನೆಗಳಿಗೆ ಅನುಮೋದನೆ, ಅನುದಾನಗಳು...

ನೀಟ್ ಪರೀಕ್ಷೆ ನಡೆಸುವ ಎನ್ ಟಿಎನಲ್ಲಿ ಮಹತ್ವದ ಬದಲಾವಣೆ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರಕಾರ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ದೇಶಾದ್ಯಂತ ಹಬ್ಬುತ್ತಿದ್ದಂತೆ ಎಚ್ಚೇತ ಕೇಂದ್ರ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ‘ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ...

ವಂದೇ ಮಾತರಂ’ಗೆ ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ನಾಳೆ ಸಂಸತ್ತಿನಲ್ಲಿ ಮಸೂದೆ ಮಂಡನೆ

ನವದೆಹಲಿ: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು,...