ಬಾಂಗ್ಲಾದೇಶಿಯರ ಮಾಹಿತಿ ನೀಡಿದ ಭಾರತೀಯ ಪ್ರಜೆ ವಿರುದ್ಧ ಹಲ್ಲೆ ಪ್ರಕರಣ ನಿಮ್ಮ ಓಲೈಕೆ ನಿಲ್ಲಿಸಿ  ರಾಜ್ಯ ಸರಕಾರಕ್ಕೆ ಹೈಕೋರ್ಟ್ ಚಾಟಿ

3

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದವರ ಬಗ್ಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರೊಬ್ಬರ ವಿರುದ್ಧ ಹಲ್ಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ಇನ್ನಿತರ ಆರೋಪಗಳ ಮೇಲೆ ಎಫ್ ಐ ಆರ್ ದಾಖಲಿಸಿದ ಪೊಲೀಸರ ನಡೆಯನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ.


ಸಾಮಾಜಿಕ ಕಾರ್ಯಕರ್ತ ಮಲ್ಲಸಂದ್ರದ ಟಿ. ನಾಗೇಂದ್ರಪ್ಪ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗಳನ್ನು ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಪೊಲೀಸರ ಕಾರ್ಯ ನಿಜಕ್ಕೂ ರಾಷ್ಟ್ರದ ಭದ್ರತೆ ಮತ್ತು ಹಿತಾಸಕ್ತಿಗೆ ಬೆದರಿಕೆಯಾಗಿದ್ದು, ಸರ್ಕಾರ ಅಕ್ರಮ ವಲಸಿಗರನ್ನು ಓಲೈಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.
ಬೆಂಗಳೂರಿನ ಹೊಸಸಿದ್ದಾಪುರದಲ್ಲಿ ಬಾಂಗ್ಲಾದೇಶದ ಪ್ರಜೆ ನಸ್ರೀನಾ ನೆಲೆಸಿರುವ ಬಗ್ಗೆ ಮಾಹಿತಿ ನೀಡಿದ 15 ನಿಮಿಷಗಳಲ್ಲಿಯೇ ಸಾಮಾಜಿಕ ಕಾರ್ಯಕರ್ತ ಟಿ. ನಾಗೇಂದ್ರಪ್ಪನ ವಿರುದ್ಧ ಹಲ್ಲೆ ಆರೋಪದ ಮೇಲೆ ಎಫ್ಐಆರ್ ದಾಖಲಿಸಿ ಅರ್ಜಿದಾರರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಮತ್ತೊಂದೆಡೆ ಮಧ್ಯಾಹ್ನ 3 ಗಂಟೆಗೆ ಕೊಡತಿ ಗ್ರಾಮದ ಕಾರ್ಮಿಕರ ಗುಡಿಸಲಿನಲ್ಲಿದ್ದ ಬಾಂಗ್ಲಾ ನಿವಾಸಿ ಮೊಹಮ್ಮದ್ ಶೈದುಲ್ಲಾ ಇಸ್ಲಾಂ ನೀಡಿದ ದೂರು ಆಧರಿಸಿ ವರ್ತೂರು ಠಾಣಾ ಪೊಲೀಸರು ಮತ್ತೊಂದು ದೂರು ದಾಖಲಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಅರ್ಜಿದಾರರ ವಿರುದ್ಧದ ಎರಡೂ ಎಫ್ಐಆರ್‌ ಗಳಿಗೆ ಮುಂದಿನ ವಿಚಾರಣೆವರೆಗೂ ತಡೆ ನೀಡಿದ ನ್ಯಾಯಪೀಠ. ಹಾಗೆಯೇ, ಪ್ರಕರಣ ಕುರಿತು ಸಂಪೂರ್ಣ ಮಾಹಿತಿ ಒದಗಿಸುವಂತೆ ಪೊಲೀಸರು ಹಾಗೂ ಸರ್ಕಾರಕ್ಕೆ ಸೂಚನೆ ನೀಡಿ ಅರ್ಜಿಗಳ ವಿಚಾರಣೆಯನ್ನು ಆ.6ಕ್ಕೆ ಮುಂದೂಡಿತು.

Leave a comment

Leave a Reply

Your email address will not be published. Required fields are marked *

Related Articles

ಬಿಪಿಎಲ್ ಕಾರ್ಡ್ ವಾರ್ಷಿಕ ಆದಾಯದ ಮಿತಿ, 3 ಲಕ್ಷ ನಿಗದಿಗೆ ಕ್ರಮ- ಸಚಿವ ಕೆ ಹೆಚ್ ಮುನಿಯಪ್ಪ

ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯದ ಮಿತಿಯನ್ನು 3 ಲಕ್ಷ ರೂಗೆ ಹೆಚ್ಚಿಸಲು ಕ್ರಮ...

ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಸಂಬಂಧವೇನು ಪ್ರಶ್ನಿಸಿದ ಬಿಜೆಪಿ ಶಾಸಕ ಸಿಟಿ ರವಿ ವಿರುದ್ಧ ಎಫ್ ಐ ಆರ್ ದಾಖಲು

ಬೆಂಗಳೂರು: ದೇಶಾದ್ಯಂತ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ನಡೆದ ನೀಟ್ ಪತ್ರಿಕೆ ಸೋರಿಕೆ ಪ್ರತಿಭಟನೆಗಳ ಕುರಿತು ದ್ವೇಷ...

ಭೂ ಕಬಳಿಕೆ ಪ್ರಕರಣ ಆರ್ಟ್ ಆಫ್ ಲಿವಿಂಗ್ ನ ಭೂ ಅತಿಕ್ರಮಣ ತನಿಖೆಗೆ ಎಸ್ ಐಟಿ ರಚಿಸಿದ ಕರ್ನಾಟಕ ರಾಜ್ಯ ಸರಕಾರ

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲಿಪುರ ಗ್ರಾಮದಲ್ಲಿ ಶ್ರೀ ಶ್ರೀ ರವಿಶಂಕರ್ ಅವರ ದಿ ಆರ್ಟ್...

ಅಕ್ರಮ ಮರಳು ಗಣಿಗಾರಿಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಉಪ ಆಯುಕ್ತರು ಮತ್ತು ತಹಶೀಲ್ದಾರ್‌ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಬಾಗಲಕೋಟೆಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಪರಿಶೀಲನೆಯಲ್ಲಿ ಕಂಡುಬಂದ ಬೆನ್ನಲ್ಲೇ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು,...